Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ವಿವಿಧ ಬೇಡಿಕೆ ಈಡೇರಿಸುವಂತೆ ಜನತಾದರ್ಶನದಲ್ಲಿ ಶಾಸಕ ಕೆ.ಸಿ.ವೀರೇಂದ್ರಪಪ್ಪಿಗೆ ಕರುನಾಡ ವಿಜಯಸೇನೆ ಮನವಿ

---Advertisement---

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್, ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್.04 : ಪ್ರವಾಸಿ ಮಂದಿರದಿಂದ ಹೊಳಲ್ಕೆರೆ ರಸ್ತೆ ಕನಕವೃತ್ತದವರೆಗೂ ಎರಡು ಬದಿಗಳಲ್ಲಿ ರಸ್ತೆ ಅಗಲೀಕರಣಗೊಳಿಸಿ ಪಾದಚಾರಿಗಳು, ವಯೋವೃದ್ದರು, ಮಕ್ಕಳು, ಮಹಿಳೆಯರು ಓಡಾಡಲು ಫುಟ್‍ಪಾತ್‍ಗಳನ್ನು ನಿರ್ಮಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಕರುನಾಡ ವಿಜಯಸೇನೆ ವತಿಯಿಂದ ತ.ರಾ.ಸು.ರಂಗಮಂದಿರದಲ್ಲಿ ಬುಧವಾರ ನಡೆದ ತಾಲ್ಲೂಕು ಮಟ್ಟದ ಜನತಾದರ್ಶನದಲ್ಲಿ ಶಾಸಕ ಕೆ.ಸಿ.ವೀರೇಂದ್ರಪಪ್ಪಿ ಹಾಗೂ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.

ನಗರದ ಕೆಲವು ಭಾಗಗಳಲ್ಲಿ ಶುದ್ದ ಕುಡಿಯುವ ನೀರಿನ ಘಟಕಗಳು ಕೆಟ್ಟು ಹೋಗಿದ್ದು, ಗಾಂಧಿನಗರ, ನೆಹರುನಗರ, ಜೋಗಿಮಟ್ಟಿ ರಸ್ತೆ ಇನ್ನಿತರೆ ಕಡೆ ಕುಡಿಯುವ ನೀರಿನ ಘಟಕಗಳನ್ನು ತುರ್ತಾಗಿ ರಿಪೇರಿ ಮಾಡಿಸಬೇಕು. ಗಾಂಧಿವೃತ್ತದಲ್ಲಿ ಗಾಂಧಿ ಪ್ರತಿಮೆ ಪ್ರತಿಷ್ಠಾಪಿಸಿ. ವೃತ್ತವನ್ನು ವಿಶಾಲಗೊಳಿಸಬೇಕು. ಕೆಳಗೋಟೆಯ ಬಸವೇಶ್ವರ ಸರ್ಕಲ್‍ನಲ್ಲಿ ಬಸವಣ್ಣನವರ ಪುತ್ಥಳಿ ನಿರ್ಮಾಣವಾಗಬೇಕು. ತ.ರಾ.ಸು.ರಂಗಮಂದಿರದ ಹೊರ ಭಾಗದಲ್ಲಿ ತಾಯಿ ಕನ್ನಡ ಭುವನೇಶ್ವರಿ ಪ್ರತಿಮೆಯಿರಿಸಬೇಕು.

ನಗರದಿಂದ ಸುತ್ತಮುತ್ತಲ ಹಳ್ಳಿಗಳಿಗೆ ಹೋಗುವ ರಸ್ತೆಯ ಎರಡು ಬದಿಗಳಲ್ಲಿ ಅಲ್ಲಲ್ಲಿ ಬಳ್ಳಾರಿ ಜಾಲಿ ಗಿಡ ಗಂಟೆಗಳು ಬೆಳೆದಿರುವುದರಿಂದ ದ್ವಿಚಕ್ರ ವಾಹನ ಸವಾರರಿಗೆ, ಆಟೋರಿಕ್ಷಾದವರಿಗೆ ಇನ್ನಿತರೆ ವಾಹನಗಳಿಗೆ ತೊಂದರೆಯಾಗುತ್ತಿದೆ. ಕೂಡಲೆ ತೆರವುಗೊಳಿಸಬೇಕು. ನಗರದ ಎಲ್ಲಾ ಉದ್ಯಾನವನಗಳ ಅಭಿವೃದ್ದಿ ನೆಪದಲ್ಲಿ ನಗರಸಭೆ ಹಾಗೂ ನಗರಾಭಿವೃದ್ದಿ ಪ್ರಾಧಿಕಾರದವರು ಹಣ ದುರುಪಯೋಗಪಡಿಸಿಕೊಳ್ಳುತ್ತಿದ್ದು, ಕೂಡಲೆ ಕ್ರಮ ವಹಿಸಿ ಅಂತಹ ಅಧಿಕಾರಿಗಳ ವಿರುದ್ದ ಕಾನೂನು ರೀತಿಯ ಕ್ರಮ ಕೈಗೊಂಡು ಸಾರ್ವಜನಿಕರಿಗೆ ಅನುಕೂಲವಾಗುವಂತೆ ಮೂಲಭೂತ ಸೌಲಭ್ಯಗಳನ್ನು ಒದಗಿಸಬೇಕೆಂದು ಶಾಸಕರಲ್ಲಿ ಆಗ್ರಹಿಸಿದರು.

ನಗರದ ಹೊರಭಾಗದ ವಿಶಾಲವಾದ ಜಾಗದಲ್ಲಿ ಮೆಡಿಕಲ್ ಕಾಲೇಜು ನಿರ್ಮಾಣ ಮಾಡಿ ಕಾಲೇಜಿಗೆ ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್‍ರವರ ಹೆಸರಿಡಬೇಕು.
ಜಿಲ್ಲಾಸ್ಪತ್ರೆಯನ್ನು ಎಲ್ಲಿಗೂ ಸ್ಥಳಾಂತರಿಸಬಾರದು. ರಾಜಕಾಲುವೆಗಳ ಮೇಲೆ ಅಕ್ರಮವಾಗಿ ಕಟ್ಟಡಗಳನ್ನು ಕಟ್ಟಿಕೊಂಡಿರುವುದನ್ನು ತೆರವುಗೊಳಿಸಿ ಮಳೆ ನೀರು ಸರಾಗವಾಗಿ ಹರಿದು ಹೋಗುವಂತೆ ಮಾಡಬೇಕು. ನಗರದ ಕೆಲವು ಕಡೆ ಅವೈಜ್ಞಾನಿಕವಾಗಿ ಹಂಪ್ಸ್‍ಗಳನ್ನು ಅಳವಡಿಸಿರುವುದನ್ನು ತೆಗೆದು ಸಂಚಾರ ದಟ್ಟಣೆಯಿರುವ ಕಡೆ ಮಾತ್ರ ಅಳವಡಿಸತಕ್ಕದ್ದು. ಆರರಂದು ಚಿತ್ರದುರ್ಗ ಜಿಲ್ಲೆಗೆ ಆಗಮಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕವಾಡಿಗರಹಟ್ಟಿಗೆ ಭೇಟಿ ನೀಡಿ ಅಲ್ಲಿನ ಸಂತ್ರಸ್ಥರ ಸಮಸ್ಯೆಗಳನ್ನು ಆಲಿಸಿ ಅಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸ್ಥಾಪಿಸುವಂತೆ ಸಂಬಂಧಪಟ್ಟವರಿಗೆ ಸೂಚಿಸಬೇಕು.

ನಗರದಲ್ಲಿ ಕೆಲವು ಕಡೆ ರಸ್ತೆ ಕಾಮಗಾರಿ ಅಪೂರ್ಣವಾಗಿದ್ದು, ತುರ್ತಾಗಿ ಕಾಮಗಾರಿಯನ್ನು ಮುಗಿಸಬೇಕು. ನಗರಸಭೆ ಅಧ್ಯಕ್ಷ-ಉಪಾಧ್ಯಕ್ಷರ ಮೀಸಲಾತಿಯನ್ನು ಪ್ರಕಟಿಸುವಲ್ಲಿ ಈಗಾಗಲೆ ವಿಳಂಭವಾಗಿದ್ದು, ಕೂಡಲೆ ಮೀಸಲಾತಿಯನ್ನು ಪ್ರಕಟಿಸಿ ಚುನಾಯಿತ ಪ್ರತಿನಿಧಿಗಳು ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಿ ಕೆಲಸ ಮಾಡಲು ಅವಕಾಶ ಕೊಡಬೇಕೆಂದು ಕರುನಾಡ ವಿಜಯಸೇನೆ ಜಿಲ್ಲಾಧ್ಯಕ್ಷ ಕೆ.ಟಿ.ಶಿವಕುಮಾರ್ ಶಾಸಕರಲ್ಲಿ ವಿನಂತಿಸಿದರು.

ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ವೀಣಗೌರಣ್ಣ, ಕಾರ್ಯದರ್ಶಿ ಜಗದೀಶ್, ರತ್ನಮ್ಮ, ಪ್ರದೀಪ್, ಅವಿನಾಶ್, ಅಭಿಷೇಕ್, ಕೋಟೇಶ್, ಸುರೇಶ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment