ಕನ್ನಡ ಸಾಹಿತ್ಯ ಪರಿಷತ್ ಚುನಾವಣೆ : ಗೆಲುವಿನ ನಗೆ ಬೀರಿದ ಕೆ.ಎಂ. ಶಿವಸ್ವಾಮಿ ನಾಯಕನಹಟ್ಟಿ

1 Min Read

ಸುದ್ದಿಒನ್, ಚಿತ್ರದುರ್ಗ, (ನ‌.21) : ಕನ್ನಡ ಸಾಹಿತ್ಯ ಪರಿಷತ್ತಿನ (ಕಸಾಪ) ಚಿತ್ರದುರ್ಗ ಜಿಲ್ಲಾ ಅಧ್ಯಕ್ಷರ ಆಯ್ಕೆಗಾಗಿ ಇಂದು (ನ.21) ನಡೆದ ಚುನಾವಣೆಯಲ್ಲಿ ಕೆ.ಎಂ. ಶಿವಸ್ವಾಮಿ ನಾಯಕನಹಟ್ಟಿ ಅವರು 829 ಮತಗಳ ಅಂತರದಿಂದ ಗೆಲುವಿನ ನಗೆ ಬೀರಿದ್ದಾರೆ. ಒಟ್ಟು 9 ಅಭ್ಯರ್ಥಿಗಳು ಕಸಾಪ ಚಿತ್ರದುರ್ಗ ಜಿಲ್ಲಾ ಘಟಕದ ಅಧ್ಯಕ್ಷರ ಸ್ಥಾನಕ್ಕೆ ಸ್ಪರ್ಧಿಸಿದ್ದರು.

ಇದೇ ವೇಳೆ ಗೆಲುವು ತಂದುಕೊಟ್ಟ ಎಲ್ಲರಿಗೂ ಶಿವಸ್ವಾಮಿ ನಾಯಕನಹಟ್ಟಿ ಧನ್ಯವಾದಗಳನ್ನ ಅರ್ಪಿಸಿದ್ದಾರೆ. ಅತಿ ಹೆಚ್ಚು ಮತಗಳಿಂದ ಗೆಲುವು ತಂದುಕೊಟ್ಟಂತ ಇಡೀ ಜಿಲ್ಲೆಯ ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸಿದ್ದಾರೆ.

ಶಿವಸ್ವಾಮಿ ನಾಯಕನಹಟ್ಟಿಯವರು ಸುದ್ದಿಒನ್ ನೊಂದಿಗೆ ಮಾತನಾಡುತ್ತಾ , ಬಹುಶಃ ಇದು ಐತಿಹಾಸಿಕ ಮತ ಅಂತಾನೇ ಹೇಳಬಹುದು. ಇಷ್ಟು ದೊಡ್ಡ ಅಂತರದ ಮತಗಳನ್ನ ನೀಡಿದ್ದೀರಿ. ಇದರಿಂದ ನನ್ನ ಜವಬ್ದಾರಿ ಮತ್ತಷ್ಟು ಹೆಚ್ಚಾಗಿದೆ. ಜಿಲ್ಲೆಯಲ್ಲಿರುವ ಹಿರಿಯ ಸಾಹಿತಿಗಳೊಟ್ಟಿಗೆ ಚರ್ಚೆ ನಡೆಸಿ,‌ಹಿರಿಯರ ಮಾರ್ಗದರ್ಶನದೊಂದಿಗೆ ಜಿಲ್ಲೆಯ ಕನ್ನಡ ಸಾಹಿತ್ಯ ಪರಿಷತ್ ನಲ್ಲಿ ಸೇವೆ ನಿರ್ವಹಿಸುತ್ತೇನೆ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ‌.

Share This Article
Leave a Comment

Leave a Reply

Your email address will not be published. Required fields are marked *