Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಾಹಿತ್ಯ ಪರಿಷತ್ತು ಚುನಾವಣೆ ಮುಕ್ತವಾಗಿ ನಡೆಯಬೇಕು : ಮಾಜಿ ಶಾಸಕ ಎಸ್. ತಿಪ್ಪೇಸ್ವಾಮಿ

Facebook
Twitter
Telegram
WhatsApp

ಚಳ್ಳಕೆರೆ, (ನ.11) :  ಸಾಹಿತ್ಯ ಪರಿಷತ್ತು ಚುನಾವಣೆಯಲ್ಲಿ ಯಾವುದೇ ರಾಜಕೀಯ ಹಸ್ತಕ್ಷೇಪಗಳಿಲ್ಲದೆ ಸಾಮಾಜಿಕವಾಗಿ ಚುನಾವಣೆ ನಡೆಯಲಿ ಎಂದು ಮಾಜಿ ಶಾಸಕ, ಕಸಾಪ ಸದಸ್ಯ ಎಸ್.ತಿಪ್ಪೇಸ್ವಾಮಿ ಅಭಿಪ್ರಾಯ ವ್ಯಕ್ತಪಡಿಸಿದರು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಸ್ಥಾನದ ಅಭ್ಯರ್ಥಿ ಜೆ. ತಿಪ್ಪೇಸ್ವಾಮಿ ಕೊರ್ಲಕುಂಟೆ ನಗರದಲ್ಲಿ ಗುರುವಾರ ಭೇಟಿ ಮಾಡಿ ಮತ ಯಾಚನೆ ಮಾಡಿದ ವೇಳೆ ಮಾತನಾಡಿದರು.

ರಾಜಕೀಯ ಮುಕ್ತವಾಗಿರುವ ಸಾಹಿತ್ಯ ಪರಿಷತ್ತಿಗೆ ತನ್ನದೇ ಆದ ಮೌಲ್ಯತೆ ಇದೆ. ಪ್ರತಿಯೊಬ್ಬರ ಅಭಿಮಾನದ ಕನ್ನಡದ ಸಂಸ್ಥೆಯಾಗಿದೆ. ಇದರ ಮಹತ್ವ ಕಾಪಾಡುವಂತ ಮನೋಭಾವನೆ ಇರುವವರು ಚುನಾಯಿತರಾಗಬೇಕು. ಸಾಹಿತ್ಯ ಕಾರ್ಯಕ್ರಮಗಳಿಂದ ಜಿಲ್ಲೆಗೆ ಪರಿಚಿತರಿರುವ ಕೊರ್ಲಕುಂಟೆ ತಿಪ್ಪೇಸ್ವಾಮಿ ಈ ಬಾರಿ ಸಾಹಿತ್ಯ ಪರಿಷತ್ತು ಚುನಾವಣೆಯಲ್ಲಿ ಪ್ರಮುಖರಾಗಿದ್ದಾರೆ. ಇಂತಹ ಗಡಿಭಾಗದ ಅಭ್ಯರ್ಥಿ ಮತ್ತು ನಿರಂತರ ಸಾಹಿತ್ಯ ಕಾರ್ಯಕ್ರಮಗಳಿಂದ ಗುರುತಿಸಿಕೊಂಡಿರುವ ತಿಪ್ಪೇಸ್ವಾಮಿ ಅವರಿಗೆ ಕಸಾಪ ಬೆಂಬಲಿಸಬೇಕು ಎಂದು ಹೇಳಿದರು.

ಸಿನಿಮಾ ನಿರ್ದೇಶಕ ಮೊಳಕಾಲ್ಮೂರು ಶ್ರೀನಿವಾಸಮೂರ್ತಿ ಮಾತನಾಡಿ, ಸಾಹಿತ್ಯ ಪರಿಷತ್ತು ಚುನಾವಣೆಯಲ್ಲಿ ಕೊರ್ಲಕುಂಟೆ ತಿಪ್ಪೇಸ್ವಾಮಿ ಅವರ ಸಾಹಿತ್ಯ ಸೇವೆ ವಿಶ್ಲೇಷಣೆ ಆಗುತ್ತಿದೆ. ನಾಲ್ಕು ಕವನ ಸಂಕಲನಗಳನ್ನು ಸಾಹಿತ್ಯ ವಲಯಕ್ಕೆ ನೀಡಿರುವ ತಿಪ್ಪೇಸ್ವಾಮಿ ಅವರಿಗೆ ಜಿಲ್ಲೆಯ ಬರಹಗಾರರು ಮತ್ತು ಸಾಹಿತ್ಯ ಪರಿಷತ್ತಿನ ಸದಸ್ಯರ ಒಡನಾಟ ಇದೆ. ಇನ್ನಷ್ಟು ಸಾಹಿತ್ಯ ಕಾರ್ಯಕ್ರಮಗಳ ಬೆಳವಣಿಗೆಗೆ ತಿಪ್ಪೇಸ್ವಾಮಿ ಅವರ ಆಯ್ಕೆ ಸೂಕ್ತವಾಗಿದೆ. ಸದಸ್ಯರು ದೂರದೃಷ್ಟಿಯ ಚಿಂತನೆಯಲ್ಲಿ ತಿಪ್ಪೇಸ್ವಾಮಿ ಪರ ಮತ ನೀಡಲಿ ಎಂದು ಮನವಿ ಮಾಡಿದರು.

ನಗರಸಭಾ ಮಾಜಿ ಸದಸ್ಯ ಎಂ. ಶಿವಮೂರ್ತಿ, ತಾಪಂ ಮಾಜಿ ಸದಸ್ಯ ಎಚ್. ಸಮರ್ಥರಾಯ, ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಡಿ. ಈಶ್ವರಪ್ಪ, ಕಸಾಪ ಸದಸ್ಯರಾದ ಯಾದಲಗಟ್ಟೆ ಜಗನ್ನಾಥ, ಪಿ. ಗಂಗಾಧರ, ಖಾಸಗಿ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ದೊಡ್ಡ ಉಳ್ಳಾರ್ತಿ ಗೌರೀಶ, ಡಿ. ಲಿಂಗರಾಜ, ಜಾಲಿ ಮಂಜು ಮತ್ತಿತರರು ಇದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

Cold Water Side Effects : ಬೇಸಿಗೆಯಲ್ಲಿ ಫ್ರಿಡ್ಜ್ ನಲ್ಲಿರುವ ತಣ್ಣೀರು ಕುಡಿದರೆ ಎಷ್ಟೆಲ್ಲಾ ಸಮಸ್ಯೆ ಗೊತ್ತಾ ?

  ಸುದ್ದಿಒನ್ : ಈ ಬೇಸಿಗೆಯ ತಾಪವನ್ನು ನಿವಾರಿಸಲು ತಣ್ಣೀರಿಗಿಂತ ಉತ್ತಮ ಪರ್ಯಾಯವಿಲ್ಲ. ಅದಕ್ಕಾಗಿಯೇ ನಮ್ಮಲ್ಲಿ ಹೆಚ್ಚಿನವರು ಬಿಸಿಲಿನಿಂದ ಮನೆಗೆ ಬಂದ ತಕ್ಷಣ ರೆಫ್ರಿಜರೇಟರ್‌ನಿಂದ ತಣ್ಣೀರು ಕುಡಿಯುವ ಅಭ್ಯಾಸವನ್ನು ಹೊಂದಿರುತ್ತಾರೆ. ಆದರೆ ಈ ರೀತಿ

ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ

ಈ ರಾಶಿಯ ಜನಪ್ರತಿನಿಧಿಗಳಿಗೆ ಆತ್ಮೀಯರಿಂದ ಕಂಟಕ, ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ, ಈ ರಾಶಿಯ ವಿವಾಹಿತ ಜೀವನವು ಸಂತೋಷವಾಗಿ ಕಾಣುತ್ತದೆ, ಶುಕ್ರವಾರ-ರಾಶಿ ಭವಿಷ್ಯ ಮೇ-3,2024 ಸೂರ್ಯೋದಯ: 05:52, ಸೂರ್ಯಾಸ್ತ

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

error: Content is protected !!