Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮಾರ್ಚ್ 03 ರಿಂದ 05 ರವರೆಗೆ ಕಾಟಲಿಂಗೇಶ್ವರಸ್ವಾಮಿ ಜಾತ್ರಾ ಮಹೋತ್ಸವ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ. ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಮಾರ್ಚ್.01 : ದೊಡ್ಡಪೇಟೆ ಕೆಂಚನಾರಹಟ್ಟಿಯಲ್ಲಿರುವ ಕಾಟಲಿಂಗೇಶ್ವರಸ್ವಾಮಿ ಜಾತ್ರಾ ಮಹೋತ್ಸವ ಕಾಳುಹಬ್ಬ ಮಾ.3 ರಿಂದ 5 ರವರೆಗೆ ನಡೆಯಲಿದೆ.

ಸೋಮವಾರ ಬೆಳಗಿನ ಜಾವ ಕೆಂಚನಾರಹಟ್ಟಿ ದೇವಸ್ಥಾನದಿಂದ ಕಾಟಲಿಂಗೇಶ್ವರಸ್ವಾಮಿಯನ್ನು ದ್ಯಾಮವ್ವನಹಳ್ಳಿ ಗ್ರಾಮದ ಗೊಂದ್ಯಾಳಪ್ಪನ ಕಾವಲ್‍ಗೆ ಕಾಲುನಡಿಗೆ ಮೂಲಕ ಕೊಂಡೊಯ್ದು, ಶುದ್ದೀಕರಿಸಿ ಗಂಗಾಪೂಜೆಯೊಂದಿಗೆ ರುದ್ರಾಭಿಷೇಕ, ಮಹಾ ಮಂಗಳಾರತಿ ನಂತರ ಅನ್ನಸಂತರ್ಪಣೆಯಿರುತ್ತದೆ.

ಸಂಜೆ ಆರು ಗಂಟೆಗೆ ಚಿತ್ರದುರ್ಗಕ್ಕೆ ಹಿಂದಿರುಗಿ ಕೆಳಗೋಟೆಯ ಭಕ್ತಾಧಿಗಳ ಮನೆಯಲ್ಲಿ ಪೂಜೆ ಸ್ವೀಕರಿಸಲಿದೆ. ನಂತರ ರಂಗಯ್ಯನಬಾಗಿಲು ಬಳಿಯಿರುವ ರಾಮಾಂಜನೇಯ ದೇವಸ್ಥಾನದಲ್ಲಿ ಕಾಟಲಿಂಗೇಶ್ವರಸ್ವಾಮಿ ತಂಗಲಿದೆ.
ಮಾ.4 ರಂದು ರಾತ್ರಿ 8 ಗಂಟೆಗೆ ಭವ್ಯಾಲಂಕಾರದೊಂದಿಗೆ ಪೂಜೆ ಸಲ್ಲಿಸಿ ರಾಶಿ ಪೂಜೆ ಮಣೇವು ಸೇವೆ ನಂತರ ಮಹಾಮಂಗಳಾರತಿ ಅನ್ನಸಂತರ್ಪಣೆ.

5 ರಂದು ಬೆಳಿಗ್ಗೆ ದೇವಸ್ಥಾನದ ಆವರಣದಲ್ಲಿ ಗದ್ದುಗೆ ಹಾಸಿ ಅರ್ಚಕರಿಂದ ದೊಡ್ಡ ಎಡೆ ಪೂಜೆ, ನೈವೇದ್ಯ, ಗುಡಿಕಟ್ಟಿನ ಅಣ್ಣತಮ್ಮಂದಿರಿಗೆ ಪ್ರಸಾದ ವಿನಿಯೋಗಿಸಲಾಗುವುದು.
ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಕಾಟಲಿಂಗೇಶ್ವರಸ್ವಾಮಿ ಜಾತ್ರಾ ಮಹೋತ್ಸವ ಸಮಿತಿ ವ್ಯವಸ್ಥಾಪಕ ಡಿ.ಮೈಲಾರಪ್ಪ ಕೋರಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...