ಹುಬ್ಬಳ್ಳಿ: ರಾಹುಲ್ ಗಾಂಧಿ ಬಗ್ಗೆ ನಳಿನ್ ಕುಮಾರ್ ಕಟೀಲ್ ಡ್ರಗ್ ಪೆಡ್ಲರ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಜೋಶಿ, ಕಟೀಲ್ ಯಾಕೆ ಈ ರೀತಿ ಮಾತಾಡಿದ್ದಾರೆ ಗೊತ್ತಿಲ್ಲ. ಆದರೆ, ಪತ್ರಿಕೆಯಲ್ಲಿ ಬಂದಿದೆ ಎಂದಿದ್ದಾರೆ. ಆ ಬಗ್ಗೆ ನಾನು ಮಾತನಾಡಲ್ಲ. ಕೇವಲ ಕಟೀಲ್ ವೈಯಕ್ತಿಕ ನಿಂದನೆ ಮಾಡಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು.
ಈ ವೇಳೆ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಮೋದಿ ಬಗ್ಗೆ ಏಕವಚನದಲ್ಲಿ ಮಾತನಾಡ್ತಾರೆ. 2014, 2018 ಹಾಗೂ 2019ರ ಚುನಾವಣೆಯಲ್ಲಿ ಸಿದ್ದರಾಮಯ್ಯಗೆ ಹೀನಾಯ ಸೋಲಾಗಿದೆ. ಆದರೂ ಅವರು ಮೋದಿ ಬಗ್ಗೆ ಮಾತಾಡ್ತಾರೆ. ಯಾರೇ ಇರಲಿ ಕೆಳ ಮಟ್ಟದ ಟೀಕೆ ಮಾಡಬಾರದು ಎಂಬುದು ನನ್ನ ಅಭಿಪ್ರಾಯ ಎಂದು ಹೇಳಿದರು.
ಉಪ ಚುನಾವಣೆಯಲ್ಲಿ ಎರಡೂ ಕಡೆ ನಾವು ಖಂಡಿತ ಗೆಲ್ತೇವೆ. ನಾನು ಹಾನಗಲ್ಗೆ ಹೋಗಿ ಬಂದಿದ್ದೇನೆ. ಸಿಂದಗಿಗೆ ಹೋಗಿಲ್ಲ. ಅಲ್ಲಿಯ ಕಾರ್ಯಕರ್ತರ ಜೊತೆ, ಉಸ್ತುವಾರಿಗಳ ಜೊತೆ ಸಂಪರ್ಕದಲ್ಲಿ ಇದ್ದೇನೆ. ಪೆಟ್ರೋಲ್ ಡೀಸೆಲ್ ದರ ಚುನಾವಣೆ ಮೇಲೆ ಎಫೆಕ್ಟ್ ಬಿರೋಲ್ಲ. ಆಗಲೂ ನಮಗೆ ಜನ ವೋಟು ಹಾಕಿದ್ದಾರೆ, ಬೇರೆ ಬೇರೆ ರಾಜ್ಯಗಳಲ್ಲಿ ಬಿಜೆಪಿ ಗೆದ್ದಿದೆ. ಯಾರು ವಿಶ್ಚಾಸಾರ್ಹರು ಎಂದು ಜನರಿಗೆ ಗೊತ್ತಿದೆ ಎಂದರು.
ಉಪ ಚುನಾಣೆಯಲ್ಲಿ ಹಣ ಹಂಚಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿ,ಇದು ಸುಳ್ಳು ಆರೋಪ. ಕಾಂಗ್ರೆಸ್ನವರು ಸತ್ಯ ಹರಿಶ್ಚಂದ್ರರಾ? ಕಾಂಗ್ರೆಸ್ನವರು ಇಷ್ಟೆಲ್ಲಾ ಟೆಂಟ್ ಹಾಕಿದ್ದಾರೆ. ಅವರು ಹಣ ಖರ್ಚೇ ಮಾಡ್ತಿಲ್ವಾ? ಅಗತ್ಯವಿರುವ ದುಡ್ಡು ಅವರು ಖರ್ಚು ಮಾಡುತಿದ್ದಾರೆ, ನಾವು ಮಾಡ್ತಿದೇವೆ ಎಂದರು.ಬಾಂಗ್ಲಾ ಹಿಂದೂಗಳ ಹಿತ ಕಾಪಾಡಲು ಭಾರತ ಸರ್ಕಾರ ಬದ್ಧ
ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದಾಳಿಗೆ ಪ್ರತಿಕ್ರಿಯೆ ನೀಡಿದ ಸಚಿವರು, ಅಲ್ಲಿನ ಸರ್ಕಾರದ ಜೊತೆ ನಮ್ಮ ಸರ್ಕಾರ ಸಂಪರ್ಕದಲ್ಲಿದೆ. ಅಲ್ಲಿಯ ಸರ್ಕಾರ ಕೂಡಾ ಕ್ರಮ ಕೈಗೊಳ್ಳುತ್ತಿದೆ. ಭಾರತ ಸರ್ಕಾರ ಅಲ್ಲಿಯ ಹಿಂದೂಗಳ ಹಿತ ಕಾಪಾಡಲು ಬದ್ಧವಾಗಿದೆ ಎಂದು ತಿಳಿಸಿದರು.ಕಲ್ಲಿದ್ದಲು ಸ್ವಲ್ಪ ಕೊರತೆಯಾಗಿತ್ತು. ಪ್ರತಿ ದಿನ 2.1 ಮಿಲಿಯನ್ ಪೂರೈಕೆ ಮಾಡುತಿದ್ದೇವೆ. ನಾಲ್ಕು ದಿನಗಳ ಸ್ಟಾರ್ ಇದ್ದು, ಅದು ಪೈಲ್ ಅಪ್ ಆಗೋಕೆ ನಾವು ಪ್ರಯತ್ನ ಮಾಡುತ್ತಿದ್ದೇವೆ ಎಂದು ಸಚಿವರು ಇದೇ ವೇಳೆ ತಿಳಿಸಿದರು.
ಚಿತ್ರದುರ್ಗ. ಫೆ.24: ಬರುವ ಮಾರ್ಚ್ 01 ರಂದು ಚಿತ್ರದುರ್ಗದ ಮುರುಘರಾಜೇಂದ್ರ ಕ್ರೀಡಾಂಗಣ (ಸರ್ಕಾರಿ ವಿಜ್ಞಾನ ಕಾಲೇಜು ಮೈದಾನ) ದಲ್ಲಿ ಬೃಹತ್…
ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳೆಗೆರೆ, ಚಳ್ಳಕೆರೆ, ಮೊ : 84314 13188 ಸುದ್ದಿಒನ್, ಚಳ್ಳಕೆರೆ, ಫೆಬ್ರವರಿ. 24 :…
ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…
ಚಿತ್ರದುರ್ಗ, ಫೆಬ್ರವರಿ. 24 : ಭದ್ರ ಮೇಲ್ದಂಡೆ ಯೋಜನೆಗೆ ಮುಂಬರುವ ರಾಜ್ಯ ಬಜೆಟ್ ನಲ್ಲಿ ಕನಿಷ್ಟ ಐದು ಸಾವಿರ ಕೋಟಿ…
ವಿಕ್ಕಿ ಕೌಶಲ್ ಹಾಗೂ ರಶ್ಮಿಕಾ ಮಂದಣ್ಣ ನಟನೆಯ ಛಾವಾ ಸಿನಿಮಾ ಎಲ್ಲೆಡೆ ಭರ್ಜರಿ ರೆಸ್ಪಾನ್ಸ್ ಪಡೆದುಕೊಳ್ಳುತ್ತಿದೆ. ಇದರಲ್ಲಿ ಸಂಭಾಜಿ ಜೀವನ…
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಚಿತ್ರದುರ್ಗ ಫೆ. 24 :…