Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕೌನ್ ಬನೇಗಾ ತೆಲಂಗಾಣ ಸಿಎಂ ?  ಮುಂದುವರಿದ ಕುತೂಹಲ, ಹತಾಶೆಯಲ್ಲಿ ನಾಯಕರು…!

Facebook
Twitter
Telegram
WhatsApp

 

ಸುದ್ದಿಒನ್, ಹೈದರಾಬಾದ್ : ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಕಾಂಗ್ರೆಸ್ ಪಕ್ಷ ಇಂದು ಮುಖ್ಯಮಂತ್ರಿ ಅಭ್ಯರ್ಥಿ ಆಯ್ಕೆಗೆ ಕಸರತ್ತು ಆರಂಭಿಸಿದೆ.

ಹೈದರಾಬಾದ್‌ನ ಹೋಟೆಲ್‌ನಲ್ಲಿ ಸಿಎಲ್‌ಪಿ ಸಭೆ ನಡೆಯಿತು. ಪಕ್ಷದ ಎಲ್ಲಾ ವಿಜೇತ ಅಭ್ಯರ್ಥಿಗಳು ಇದರಲ್ಲಿ ಭಾಗವಹಿಸಿದ್ದರು.  ಎಐಸಿಸಿ ವೀಕ್ಷಕರ ಸಮ್ಮುಖದಲ್ಲಿ ಸುಮಾರು ಅರ್ಧ ಗಂಟೆ ಕಾಲ ಸಿಎಲ್‌ಪಿ ಸಭೆ ನಡೆಯಿತು.ಎಐಸಿಸಿ ನೇಮಿಸಿದ್ದ ವೀಕ್ಷಕರು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರ ಆಯ್ಕೆ ಕುರಿತು ಪಕ್ಷದ ಶಾಸಕರಿಂದ ಅಭಿಪ್ರಾಯ ಪಡೆದರು.

ಸಿಎಲ್ ಪಿ ನಾಯಕರ ಆಯ್ಕೆ ಜವಾಬ್ದಾರಿ ಹೈಕಮಾಂಡ್ ಗೆ ಬಿಟ್ಟದ್ದು ಎಂದು ನಿರ್ಣಯ ಅಂಗೀಕರಿಸಲಾಯಿತು. ಇದಲ್ಲದೇ ಚುನಾವಣಾ ಪ್ರಚಾರಕ್ಕೆ ಆಗಮಿಸಿದ ಪಕ್ಷದ ಮುಖಂಡರು ಹಾಗೂ ಪ್ರಮುಖ ನಾಯಕರಿಗೆ ಕೃತಜ್ಞತೆ ಸಲ್ಲಿಸುವ ನಿರ್ಣಯವನ್ನೂ ಅಂಗೀಕರಿಸಲಾಯಿತು. ರೇವಂತ್ ರೆಡ್ಡಿ ಈ ನಿರ್ಣಯಗಳನ್ನು ಮಂಡಿಸಿದರೆ, ತುಮ್ಮಲ ನಾಗೇಶ್ವರ ರಾವ್, ಭಟ್ಟಿ ವಿಕ್ರಮಾರ್ಕ ಮತ್ತಿತರ ಮುಖಂಡರು ಬೆಂಬಲಿಸಿದರು.  ಈ ನಿರ್ಣಯವನ್ನು ವರಿಷ್ಠರಿಗೆ ಕಳುಹಿಸಲಾಗಿದೆ.

ಮತ್ತೊಂದೆಡೆ, ಸಿಎಲ್‌ಪಿ ನಾಯಕರ ಆಯ್ಕೆಯ ಬಗ್ಗೆ ವರಿಷ್ಠರು ಆದಷ್ಟು ಬೇಗ ತನ್ನ ನಿರ್ಧಾರವನ್ನು ಬಹಿರಂಗಪಡಿಸುತ್ತದೆ ಎಂದು ನಿರೀಕ್ಷಿಸಲಾಗಿತ್ತು. ಆದರೆ ಕಾಂಗ್ರೆಸ್ ವರಿಷ್ಠರು ಈ ನಿರೀಕ್ಷೆಯನ್ನು ಹುಸಿಗೊಳಿಸಿದರು.

ತೆಲಂಗಾಣದ ನೂತನ ಸಿಎಂ ಆಗಿ ರೇವಂತ್ ರೆಡ್ಡಿ ಹೆಸರು ಬಹುತೇಕ ಅಂತಿಮಗೊಂಡಿದ್ದು, ಇಂದು ಸಂಜೆ 7 ಗಂಟೆಗೆ ರಾಜಭವನದಲ್ಲಿ ರಾಜ್ಯಪಾಲ ತಮಿಳಿಸೈ ಅವರಿಗೆ ಪ್ರಮಾಣ ವಚನ ಬೋಧಿಸಲಿದ್ದಾರೆ ಎಂದು ವರದಿಯಾಗಿತ್ತು. ಈ ಸುದ್ದಿಗೆ ಪುಷ್ಟಿ ನೀಡುವಂತೆ ಅಧಿಕಾರಿಗಳು ನೂತನ ಸಿಎಂಗಾಗಿ ರಾಜಭವನದಲ್ಲಿ ಬೆಂಗಾವಲು ಪಡೆಯನ್ನೂ ಸಿದ್ಧಪಡಿಸಿದ್ದರು.
ಇದರೊಂದಿಗೆ ಇಂದು ಸಿಎಂ ಅಭ್ಯರ್ಥಿ ಘೋಷಣೆಯಾಗಲಿದೆ ಎಂದು ಭಾವಿಸಲಾಗಿತ್ತು.

ಮತ್ತೊಂದೆಡೆ ಸೋನಿಯಾ ಗಾಂಧಿ ನಿವಾಸದಲ್ಲಿ ಸಂಸದೀಯ ಕಾರ್ಯತಂತ್ರ ಸಭೆ (Parliamentary strategy meeting)
ನಡೆದಿದೆ. ಈ ಸಭೆಯಲ್ಲಿ ತೆಲಂಗಾಣ ಸಿಎಂ ಅಭ್ಯರ್ಥಿಯನ್ನು ಅಂತಿಮಗೊಳಿಸುವ ಸಾಧ್ಯತೆ ಇದೆ ಎಂದು ಭರವಸೆ ವ್ಯಕ್ತಪಡಿಸಿದರು. ಈಗಾಗಲೇ ಗೆದ್ದಿರುವ ಶಾಸಕರ ಅಭಿಪ್ರಾಯ ಸಂಗ್ರಹದ ವರದಿಯನ್ನು ಡಿ.ಕೆ.ಶಿವಕುಮಾರ್ ಅವರು ದೆಹಲಿ ನಾಯಕರಿಗೆ ಕಳುಹಿಸಿದ್ದಾರೆ. ದೆಹಲಿಯಿಂದ ಸಿಎಂ ಅಭ್ಯರ್ಥಿ ಯಾರೆಂದು ಯಾವಾಗ ಘೋಷಣೆಯಾಗಲಿದೆ ಎಂದು ಕಾತರದಿಂದ ಕಾಂಗ್ರೆಸ್ ನಾಯಕರು ಕಾದು ಕುಳಿತಿದ್ದಾರೆ.

ಆದರೆ ನಾಯಕರ ಆಸೆಗೆ ಕಾಂಗ್ರೆಸ್ ತಣ್ಣೀರೆರಚಿದೆ. ನಾಳೆಯವರೆಗೂ ಸಿಎಂ ಅಭ್ಯರ್ಥಿ ಘೋಷಣೆಯ ಸಸ್ಪೆನ್ಸ್ ಮುಂದುವರೆದಿದೆ. ಡಿಕೆ ಶಿವಕುಮಾರ್ ಜೊತೆಗೆ ನಾಲ್ವರು ವೀಕ್ಷಕರೊಂದಿಗೆ ದೆಹಲಿಗೆ ತೆರಳಿದ್ದಾರೆ. ನಾಳೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಸಿಎಂ ಅಭ್ಯರ್ಥಿ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ. ನಂತರ ತೆಲಂಗಾಣ ರಾಜ್ಯದ ನೂತನ ಸಿಎಂ ಅಧಿಕೃತವಾಗಿ ಘೋಷಣೆಯಾಗಲಿದೆ.  ಅದೇನೇ ಇರಲಿ ನಾಳೆ ಘೋಷಣೆಯಾದ ನಂತರವೂ ಪ್ರಮಾಣ ವಚನ ಯಾವಾಗ ನಡೆಯಲಿದೆ ಎಂಬುದು ತಿಳಿಯಬೇಕಿದೆ.

ಇಂದು ಸಂಜೆ ವೇಳೆಗೆ ಸಿಎಂ ಅಭ್ಯರ್ಥಿ ಘೋಷಣೆಯಾಗಲಿದೆ ಎಂಬ ಕುತೂಹಲ ಎಲ್ಲೆಡೆ ವ್ಯಕ್ತವಾಗಿತ್ತು, ಆದರೆ ಇದೀಗ ನಾಳೆಗೆ ಮುಂದೂಡಿಕೆ ಹಿಂದಿನ ಕಾರಣಗಳು ಚರ್ಚೆಗೆ ಗ್ರಾಸವಾಗಿವೆ. ಸಿಎಲ್‌ಪಿ ನಾಯಕನ ವಿಚಾರದಲ್ಲಿ ಶಾಸಕರ ಒಮ್ಮತದ ಕೊರತೆಯೇ ಅಥವಾ ನಾಯಕರು ಕಳುಹಿಸಿದ ಹೆಸರು ಸ್ವತಃ ನಾಯಕರಿಗೇ ಇಷ್ಟವಾಗುತ್ತಿಲ್ಲವೇ ಎಂಬ ಕುತೂಹಲದ ಚರ್ಚೆ ಈಗ ನಡೆಯುತ್ತಿದೆ. ತೆಲಂಗಾಣದ ನೂತನ ಸಿಎಂ ಯಾರು ಎಂದು ನಾಳೆಯಾದರೂ  ಘೋಷಿಸುತ್ತಾರೋ ಇಲ್ಲವೋ ಎಂಬುದನ್ನು ಕಾದು ನೋಡಬೇಕಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Cold Water Side Effects : ಬೇಸಿಗೆಯಲ್ಲಿ ಫ್ರಿಡ್ಜ್ ನಲ್ಲಿರುವ ತಣ್ಣೀರು ಕುಡಿದರೆ ಎಷ್ಟೆಲ್ಲಾ ಸಮಸ್ಯೆ ಗೊತ್ತಾ ?

  ಸುದ್ದಿಒನ್ : ಈ ಬೇಸಿಗೆಯ ತಾಪವನ್ನು ನಿವಾರಿಸಲು ತಣ್ಣೀರಿಗಿಂತ ಉತ್ತಮ ಪರ್ಯಾಯವಿಲ್ಲ. ಅದಕ್ಕಾಗಿಯೇ ನಮ್ಮಲ್ಲಿ ಹೆಚ್ಚಿನವರು ಬಿಸಿಲಿನಿಂದ ಮನೆಗೆ ಬಂದ ತಕ್ಷಣ ರೆಫ್ರಿಜರೇಟರ್‌ನಿಂದ ತಣ್ಣೀರು ಕುಡಿಯುವ ಅಭ್ಯಾಸವನ್ನು ಹೊಂದಿರುತ್ತಾರೆ. ಆದರೆ ಈ ರೀತಿ

ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ

ಈ ರಾಶಿಯ ಜನಪ್ರತಿನಿಧಿಗಳಿಗೆ ಆತ್ಮೀಯರಿಂದ ಕಂಟಕ, ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ, ಈ ರಾಶಿಯ ವಿವಾಹಿತ ಜೀವನವು ಸಂತೋಷವಾಗಿ ಕಾಣುತ್ತದೆ, ಶುಕ್ರವಾರ-ರಾಶಿ ಭವಿಷ್ಯ ಮೇ-3,2024 ಸೂರ್ಯೋದಯ: 05:52, ಸೂರ್ಯಾಸ್ತ

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

error: Content is protected !!