ಕವಾಡಿಗರಹಟ್ಟಿ ಪ್ರಕರಣ : ಅಸ್ವಸ್ಥಗೊಂಡವರ ಚಿಕಿತ್ಸೆಗಾಗಿ ಆರೋಗ್ಯ ಇಲಾಖೆ ಹಗಲಿರುಳು ಶ್ರಮಿಸಿದೆ : ವೈದ್ಯರ ಕಾರ್ಯಕ್ಕೆ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್ ಮೆಚ್ಚುಗೆ

 

ಮಾಹಿತಿ ಮತ್ತು ಫೋಟೋ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ

ಸುದ್ದಿಒನ್, ಚಿತ್ರದುರ್ಗ (ಆ.11) : ಕವಾಡಿಗರ ಹಟ್ಟಿಯಲ್ಲಿ ಜರುಗಿದ ಕಲುಷಿತ ನೀರು ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್ ಅವರು ಶುಕ್ರವಾರ ಕವಾಡಿಗರ ಹಟ್ಟಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಇಲ್ಲಿನ ಕವಾಡಿಗರ ಹಟ್ಟಿಯಲ್ಲಿ ಕಲುಷಿತ ನೀರು ಪ್ರಕರಣದಲ್ಲಿ ಅಸ್ವಸ್ಥಗೊಂಡವರ ಚಿಕಿತ್ಸೆಗಾಗಿ ತಾತ್ಕಾಲಿಕ ಚಿಕಿತ್ಸಾ ಕೇಂದ್ರ ತೆರೆದು, ಅಗತ್ಯ ಔಷಧಿ ಹಾಗೂ ಚಿಕಿತ್ಸೆ ದೊರಕುತ್ತಿದೆ.  ದಿನದ 24 ಗಂಟೆಯೂ ಚಿಕಿತ್ಸಾ ಕೇಂದ್ರ ಕಾರ್ಯ ನಿರ್ವಹಿಸುತ್ತಿದೆ.

ಅಸ್ವಸ್ಥರನ್ನು ಪರೀಕ್ಷಿಸಿ, ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದರೆ, ನಗರದ ಜಿಲ್ಲಾ ಆಸ್ಪತ್ರೆ ಅಥವಾ ಖಾಸಗಿ ಆಸ್ಪತ್ರೆಗೆ ಕಳುಹಿಸಿಕೊಡಲಾಗುತ್ತಿದೆ, ಆಶಾ ಕಾರ್ಯಕರ್ತೆಯರು ಮನೆ ಮನೆಗೆ ತೆರಳಿ, ಸಾರ್ವಜನಿಕರ ಆರೋಗ್ಯ ಸ್ಥಿತಿಗತಿಗಳ ಕುರಿತು ಮಾಹಿತಿ ಪಡೆದು, ಸೂಕ್ತ ಸಲಹೆ ಸೂಚನೆಗಳನ್ನು ನೀಡುತ್ತಿದ್ದಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ರಂಗನಾಥ್ ಅವರು ಲೋಕಾಯುಕ್ತರಿಗೆ ಮಾಹಿತಿ ನೀಡಿದರು.

ಡಾ. ಯಶಸ್ ಅವರು, ಪ್ರತಿ ಮನೆಗೆ ಭೇಟಿ ನೀಡಿ, ಸಾರ್ವಜನಿಕರ ಆರೋಗ್ಯ ಸ್ಥಿತಿಗತಿ ಕುರಿತು ಪರಿಶೀಲಿಸುವ ಜೊತೆಗೆ, ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂಬುದಾಗಿ ಧೈರ್ಯ ಹೇಳಲಾಗುತ್ತಿದೆ, ವೈಯಕ್ತಿಕ ಸ್ವಚ್ಛತೆ ಹಾಗೂ ಶುಚಿತ್ವದ ಬಗ್ಗೆ ಆರೋಗ್ಯ ಶಿಕ್ಷಣ ನೀಡಲಾಗುತ್ತಿದೆ ಎಂದು ವಿವರಿಸಿದರು.  ಇದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಲೋಕಾಯುಕ್ತರು, ಇಂತಹ ಕ್ರಮಗಳಿಂದ ಜನರಲ್ಲಿ ಆತ್ಮವಿಶ್ವಾಸ ಮೂಡುತ್ತದೆ ಎಂದರು.

ಈ ಸಂದರ್ಭದಲ್ಲಿ ಲೋಕಾಯುಕ್ತ ಪೊಲೀಸ್ ಅಧೀಕ್ಷಕ ವಾಸುದೇವರಾಮ್, ಡಿವೈಎಸ್‍ಪಿ ಮೃತ್ಯುಂಜಯ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಹೇಂದ್ರ ಕುಮಾರ್,  ಪೌರಾಯುಕ್ತ ಶ್ರೀನಿವಾಸ್ ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

suddionenews

Recent Posts

ಬೆಳಗಾವಿಯಲ್ಲಿ ಬಸ್ ಕಂಡಕ್ಟರ್ ಮೇಲಿನ ಪೋಕ್ಸೋ ಕೇಸ್ ರದ್ದು ಮಾಡಿ : ಕರುನಾಡ ವಿಜಯಸೇನೆ ಒತ್ತಾಯ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ,ಫೆಬ್ರವರಿ. 23…

26 minutes ago

ಪರಮೇಶ್ವರ್ ಅಥವಾ ಮುನಿಯಪ್ಪನನ್ನು ಸಿಎಂ ಮಾಡಿ : ಗೋವಿಂದ ಕಾರಜೋಳ ಕಾಂಗ್ರೆಸ್ ಗೆ ಸಲಹೆ..!

ಬೆಳಗಾವಿ; ಕಾಂಗ್ರೆಸ್ ಸರ್ಕಾರದಲ್ಲಿ ಸದ್ಯ ಸಿಎಂ ಬದಲಾವಣೆ ಚರ್ಚೆ ಹಾಗೂ ಕೆಪಿಸಿಸಿ ಅಧ್ಯಕ್ಷರ ವಿಚಾರವಾಗಿ ಚರ್ಚೆ ನಡೆಯುತ್ತಿದೆ. ಕಾಂಗ್ರೆಸ್ ನಲ್ಲಿ…

2 hours ago

ಅಪ್ಪು 11 ಕ್ರಿಕೆಟ್ ಕಪ್ – 2025 : ವಿಜೇತರಾಗಿ ರಾಹುಲ್ ತಂಡ

ಸುದ್ದಿಒನ್, ಚಿತ್ರದುರ್ಗ, ಫೆ.23: ಚಿತ್ರದುರ್ಗ ಅಪ್ಪು ಗೆಳೆಯರ ಬಳಗ ವತಿಯಿಂದ ಜಗದ್ಗುರು ಶ್ರೀ ಇಮ್ಮಡಿ ಸಿದ್ಧರಾಮೇಶ್ವಕ ಸ್ವಾಮೀಜಿರವರ ನೇತೃತ್ವದಲ್ಲಿ, ಹಳೇ…

3 hours ago

ಮಾರ್ಚ್ 1ರಿಂದ ದ್ವಿತೀಯ ಪಿಯುಸಿ ಪರೀಕ್ಷೆ : ಹೇಗಿದೆ ಇಲಾಖೆಯಿಂದ ತಯಾರಿ.. ಖಡಕ್ ರೂಲ್ಸ್ ಜಾರಿ..!

    ಬೆಂಗಳೂರು; ಇನ್ನೊಂದು ವಾರವಷ್ಟೇ ಶೈಕ್ಷಣಿಕ ವರ್ಷದ ಪರೀಕ್ಷೆಗಳು ಆರಂಭವಾಗುತ್ತವೆ. ಮಾರ್ಚ್ 1ರಿಂದ ದ್ವಿತೀಯ ಪಿಯುಸಿ ಪರೀಕ್ಷೆಗಳು ಆರಂಭವಾಗುತ್ತಿವೆ.…

5 hours ago

ಭಾರತ – ಪಾಕ್ ಪಂದ್ಯಕ್ಕೆ ಕ್ಷಣಗಣನೆ : ಗೆದ್ದು ಬಾ ಇಂಡಿಯಾ : ಗೆಲುವಿಗಾಗಿ ವಿಶೇಷ ಪೂಜೆ…!

ಇಂದು ಭಾರತ ವರ್ಸಸ್ ಪಾಕ್ ಪಂದ್ಯ ನಡೆಯಲಿದೆ. ಸಾಂಪ್ರಾದಾಯಿಕ ವೈರಿಗಳನ್ನು ಕಟ್ಟಿ ಹಾಕಲು ಭಾರತ ತಂಡ ಸಜ್ಜಾಗಿದೆ. ಈ ಪಂದ್ಯವನ್ನ…

5 hours ago

IND vs PAK: ಕೆಲಹೊತ್ತಿನಲ್ಲಿ ಭಾರತ-ಪಾಕ್ ಪಂದ್ಯ : ದುಬೈನಲ್ಲಿ ಹವಾಮಾನ ಹೇಗಿದೆ ? ಪಿಚ್ ವರದಿಯ ಸಂಪೂರ್ಣ ಮಾಹಿತಿ ಇಲ್ಲಿದೆ…!

ಸುದ್ದಿಒನ್ : ಪ್ರಪಂಚದಾದ್ಯಂತದ ಕ್ರಿಕೆಟ್ ಅಭಿಮಾನಿಗಳು ಇಂದು ಮಧ್ಯಾನ್ಹ 2.30 ಕ್ಕೆ ನಡೆಯಲಿರುವ ಚಾಂಪಿಯನ್ಸ್ ಟ್ರೋಫಿಯ ಭಾರತ vs ಪಾಕಿಸ್ತಾನ…

8 hours ago