Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹೋರಾಟದ ನಡುವೆಯೂ ತಮಿಳುನಾಡಿಗೆ ಹರಿದ ಕಾವೇರಿ : KRS ಜಲಾಶಯದ ಇಂದಿನ ಮಟ್ಟ ಎಷ್ಟು..?

Facebook
Twitter
Telegram
WhatsApp

 

ಮಂಡ್ಯ: ಕಾವೇರಿ ನೀರನ್ನು ತಮಿಳುನಾಡಿಗೆ ಬಿಡುವುದನ್ನು ವಿರೋಧಿಸಿ ರೈತರು ಇಂದು ದೊಡ್ಡಮಟ್ಟದ ಪ್ರತಿಭಟನೆ ನಡೆಸುತ್ತಿದ್ದಾರೆ. ರೈತರು, ವಿವಿಧ ಸಂಘಟನೆಗಳು ಇಂದು ಮಂಡ್ಯ ಬಂದ್ ಗೆ ಕರೆ ನೀಡಿವೆ. ಕಾವೇರಿ ನೀರನ್ನು ಯಾವುದೇ ಕಾರಣಕ್ಕೂ ತಮಿಳುನಾಡಿಗೆ ಬಿಡಬಾರದು ಎಂಬ ಉದ್ದೇಶ ಇದಾಗಿದೆ. ಆದರೆ ಇಷ್ಟು ದೊಡ್ಡಮಟ್ಟದ ಹೋರಾಟದ ನಡುವೆಯೂ ತಮಿಳುನಾಡಿಗೆ ಕಾವೇರಿ ನೀರನ್ನು ಹರಿಸಲಾಗಿದೆ. ಇದು ರೈತರಿಗೆ ಮತ್ತಷ್ಟು ಆಕ್ರೋಶಕ್ಕೆ ಕಾರಣವಾಗಿದೆ.

ಮಳೆ ಇಲ್ಲದೆ ಕೆಆರ್ಎಸ್ ನಲ್ಲಿ ಮೊದಲೇ ನೀರಿನ ಪ್ರಮಾಣ ಕಡಿಮೆ ಇದೆ. ಹೀಗಿರುವಾಗ ಇಂದು ನೀರು ಬಿಟ್ಟ ಪರಿಣಾಮ ನೀರಿನ ಮಟ್ಟ ಕುಸಿದಿದೆ. ಜಲಾಶಯಕ್ಕೆ ಬರುತ್ತಿದ್ದ ಒಳ ಹರಿವು ಸಹ ಇಳಿಮುಖವಾಗಿದೆ. ಇಂದು ಕೆಆರ್ಎಸ್ ಜಲಾಶಯದ ಮಟ್ಟ 90 ಅಡಿಗೆ ಕುಸಿದಿದೆ. ಇದು ರೈತರನ್ನು ಮತ್ತಷ್ಟು ಆತಂಕಕ್ಕೆ ಈಡು ಮಾಡಿದೆ.

ಸುಪ್ರೀಂ ಕೋರ್ಟ್ ಇನ್ನು ಹದಿನೈದು ದಿನಗಳ‌ ಕಾಲ ಪ್ರತಿದಿನ 5 ಸಾವಿರ ಕ್ಯೂಸೆಕ್ ನೀರು ಬಿಡುವಂತೆ ಆದೇಶ ನೀಡಿದೆ. ಹೀಗಾಗಿ ಹೋರಾಟದ‌ ನಡುವೆಯೂ ಇಂದು ಸರ್ಕಾರ ನೀರು ಬಿಟ್ಟಿದೆ. ಸುಮಾರು 2973 ಕ್ಯೂಸೆಕ್ ನೀರನ್ನು ತಮಿಳುನಾಡಿಗೆ ಹರಿಸಿದೆ. ಹೀಗೆ ನೀರನ್ನು ಬಿಡುತ್ತಾ ಹೋದರೆ ಮುಂದೊಂದು ದಿನ ನೀರಿನ ಸಮಸ್ಯೆ ಅನುಭವಿಸುವುದರಲ್ಲಿ ಅನುಮಾನವೇ ಇಲ್ಲ. ಕೃಷಿಯ ಉಪಯೋಗಕ್ಕೆ ಇರಲಿ, ಕುಡಿಯುವ ನೀರಿಗೂ ಬರ ಬರಲಿದೆ ಎಂಬುದು ಎಲ್ಲರ ಆತಂಕವಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರಿಗೆ ಆಸ್ತಿ ವಿಚಾರದಲ್ಲಿ ನಂಬಿಕೆ ದ್ರೋಹವಾಗಿದೆ,

ಈ ರಾಶಿಯವರಿಗೆ ಆಸ್ತಿ ವಿಚಾರದಲ್ಲಿ ನಂಬಿಕೆ ದ್ರೋಹವಾಗಿದೆ, ಈ ರಾಶಿಯವರಿಗೆ ಇಷ್ಟವಿಲ್ಲದ ಮದುವೆ, ಸೋಮವಾರ- ರಾಶಿ ಭವಿಷ್ಯ ಡಿಸೆಂಬರ್-11,2023 ಸೂರ್ಯೋದಯ: 06.31 AM, ಸೂರ್ಯಾಸ್ತ : 05.54 PM ಶಾಲಿವಾಹನ ಶಕೆ1944, ಶುಭಕೃತ ನಾಮ

ವಿದ್ಯಾರ್ಥಿಯ ಪರಿಪೂರ್ಣತೆ ಹಾಗೂ ವಿಕಸನಕ್ಕೆ ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳು ಪೂರಕ : ಆರ್. ಪುಟ್ಟಸ್ವಾಮಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್. 10 :  ವಿದ್ಯಾರ್ಥಿಯ ಪರಿಪೂರ್ಣತೆ ಹಾಗೂ ವಿಕಸನಕ್ಕೆ ಪಠ್ಯ ಸಹಿತ ಪಠ್ಯೇತರ ಚಟುವಟಿಕೆಗಳು ಪೂರಕವಾಗುತ್ತವೆ.

ಈ ವಾರ ಬಿಗ್ ಬಾಸ್ ಮನೆಯಿಂದ ಬರ್ತಾ ಯಾರು ಗೊತ್ತಾ..? ಸುದೀಪ್ ಕೊಟ್ಟ ಅವಕಾಶವನ್ನು ಬಳಸಿಕೊಳ್ಳಲಾಗಲಿಲ್ವಾ..?

ಬಿಗ್ ಬಾಸ್ ಸೀಸನ್ 10.. ಈ ವಾರವಂತು ಸಾಕಷ್ಟು ಕಠಿಣವಾಗಿತ್ತು. ಬಿಗ್ ಬಾಸ್ ಏನೋ ನಿರೀಕ್ಷೆ ಮಾಡಿ ಕೊಟ್ಟ ಟಾಸ್ಕ್ ಸಂಪೂರ್ಣವಾಗಿ ಬೇರೆ ರೀತಿಯಾಗಿಯೇ ಟರ್ನ್ ಆಗಿತ್ತು. ರಾಕ್ಷಸರು ಹಾಗೂ ಗಂಧರ್ವರು ಅಂತ ಮಾಡಿದ್ದು

error: Content is protected !!