Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

‘ಕಾವೇರಿ’ದ ಹೋರಾಟ : ಸಂಜೆಯ ಸಂಪುಟ ಸಭೆಯಲ್ಲಿ ಏನೆಲ್ಲಾ ತೀರ್ಮಾನವಾಗಲಿದೆ..?

Facebook
Twitter
Telegram
WhatsApp

 

ಬೆಂಗಳೂರು: ಸದ್ಯಕ್ಕೆ ಇರುವ ಕಾವೇರಿ ನೀರನ್ನು ಹಾಗೆಯೇ ಉಳಿಸಿಕೊಂಡರೆ ರೈತರಿಗೆ, ಕುಡಿಯುವುದಕ್ಕೆ ಅನುಕೂಲವಾಗಲಿದೆ. ಆದರೆ ಈಗಿರುವ ಅಷ್ಟೊ ಇಷ್ಟೋ ನೀರಿನಲ್ಲಿಯೇ ಪ್ರತಿದಿನ ತಮಿಳುನಾಡಿಗೆ 5 ಸಾವಿರ‌ ಕ್ಯೂಸೆಕ್ ಬಿಡುವಂತೆ ಸುಪ್ರೀಂ ಕೋರ್ಟ್ ಕೂಡ ಸೂಚನೆ ನೀಡಿದೆ. ಹೀಗಾಗಿ ರೈತರು ರೊಚ್ಚಿಗೆದ್ದಿದ್ದಾರೆ. ಇನ್ನು ಕಾವೇರಿ ಗಲಾಟೆ ಹೆಚ್ಚಾಗುತ್ತಿರುವ ಬೆನ್ನಲ್ಲೇ ಇಂದು ಸಿದ್ದರಾಮಯ್ಯ ಅವರು ಸಂಪುಟ ಸಭೆ ಕರೆದಿದ್ದಾರೆ.

ಇಂದು ಸಂಜೆ 6 ಗಂಟೆಗೆ ವಿಧಾನಸೌಧದಲ್ಲಿ ಸಂಪುಟ ಸಭೆ ನಡೆಯಲಿದೆ. ಈ ವೇಳೆ ಕಾವೇರಿ ವಿಚಾರಕ್ಕೆ ಸುಪ್ರೀಂ ಕೋರ್ಟ್ ನೀಡಿರುವ ಹೇಳಿಕೆ ಸಂಬಂಧ ಚರ್ಚೆ ನಡೆಯುವ ಸಾಧ್ಯತೆ ಇದೆ. ಕಾವೇರಿ ನೀರು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಇದೆ. ಹೀಗಾಗಿ ಉಳಿಸಿಕೊಳ್ಳಬಹುದಾದ ಮಾರ್ಗ ಯಾವುದು ಎಂಬುದನ್ನು ಸಿಎಂ ಸಿದ್ದರಾಮಯ್ಯ ಅವರು ಸಚಿವರ ಜೊತೆಗೆ ಚರ್ಚೆ ಮಾಡಲಿದ್ದಾರೆ.

ಮಳೆ‌ ಕೊರತೆ ಇರುವ ಕಾರಣ ಕಾವೇರಿ ಕೊಳ್ಳದಲ್ಲಿ ನೀರು ಕಡಿಮೆ ಪ್ರಮಾಣದಲ್ಲಿ ಸಂಗ್ರಹವಾಗಿದೆ. ಕೆಆರ್ಎಸ್, ಹೇಮಾವತಿ, ಕಬಿನಿ, ಹಾರಂಗಿಯಲ್ಲಿ ಈಗ ಕೇವಲ 42.15 ಅಡಿಗಳಷ್ಟು ನೀರು ಮಾತ್ರ ಬಳಸಿಕೊಳ್ಳಲು ಸಾಧ್ಯವಿದೆ. ಆ ನೀರು ನಮ್ಮ ರಾಜ್ಯದ ಜನರಿಗೆ ಕುಡಿಯುವ ಹಾಗೂ ಕೃಷಿ ಕಾರ್ಯಗಳಿಗೆ ಸಾಕಾಗುವುದಿಲ್ಲ. ಇನ್ನು ತಮಿಳುನಾಡಿಗೂ ಬಿಡಬೇಕು ಎಂದರೆ ಕಷ್ಟಸಾಧ್ಯ ಅಂತಾನೇ ರೈತರು ನಿರಂತರ ಹೋರಾಟದಲ್ಲಿ ತೊಡಗಿದ್ದಾರೆ.

ಮಂಡ್ಯ ಭಾಗದಲ್ಲಿ ಕಾವೇರಿಗಾಗಿ ರೈತರ ಹೋರಾಟ‌ ಕಾವೇರಿದೆ. ರಾಜ್ಯದ ಜನರಲ್ಲೂ ಈ ಹೋರಾಟಕ್ಕೆ ಬೆಂಬಲ ಸೂಚಿಸಲು ರೈತರು ಮನವಿ ಮಾಡಿದ್ದಾರೆ. ಅದರಲ್ಲೂ ಬೆಂಗಳೂರಿನ ಮಂದಿಗೆ ಎಚ್ವರಿಕೆ ನೀಡಿದ್ದಾರೆ. ಹೆಚ್ಚಿನ ಪ್ರಮಾಣದಲ್ಲಿ ಬೆಂಗಳೂರಿನ ಮಂದಿಗೆ ಕುಡಿಯುವ ನೀರಿಗೆ ಬೇಕಾಗಿರುವುದು ಕಾವೇರಿ. ಹೀಗಾಗಿ ರೈತರ ಜೊತೆಗೆ ಕೈಜೋಡಿಸಿ ಎಂದೇ ಹೇಳುತ್ತಿದ್ದಾರೆ. ಈಗಾಗಲೇ ಸ್ಯಾಂಡಲ್ ವುಡ್ ಸೆಲೆಬ್ರೆಟಿಗಳು ಸೋಷಿಯಲ್ ಮೀಡಿಯಾ‌ ಮೂಲಕವೇ ಬೆಂಬಲ ಸೂಚಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹಿರಿಯೂರು | ಬೈಕ್ ಅಪಘಾತ, ಸ್ಥಳದಲ್ಲೇ ಓರ್ವ ಸಾವು..!

ಸುದ್ದಿಒನ್,  ಹಿರಿಯೂರು, ಮೇ. 05 : ನಗರದ ರಾಷ್ಟ್ರೀಯ ಹೆದ್ದಾರಿ ನಾಲ್ಕರ ಆಲೂರು ಕ್ರಾಸ್ ಚಾನೆಲ್ ಬಳಿ ಸ್ಕೂಟಿ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಾಯಗೊಂಡ

ಪ್ರಜ್ವಲ್ ರೇವಣ್ಣ ಜೊತೆ ವಿಡಿಯೋದಲ್ಲಿದ್ದ ಮಹಿಳಾ ಅಧಿಕಾರಿಗಳಿಗೂ ಸಂಕಷ್ಟ : ಎಸ್ಐಟಿಯಿಂದ ನೋಟೀಸ್

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋದಲ್ಲಿ ಸರ್ಕಾರಿ ಅಧಿಕಾರಿಗಳು ಕೂಡ ಇರುವುದು ಗಮನಕ್ಕೆ ಬಂದಿದೆ. ಪೊಲೀಸ್ ಅಧಿಕಾರಿ, ಅರಣ್ಯಾಧಿಕಾರಿ, ಬೆಂಗಳೂರಿನ ಎಇಇ ಫೋಟೋ, ವಿಡಿಯೋಗಳು ವೈರಲ್ ಆಗಿದ್ದವು. ಇದೀಗ ಅವರಿಗೆಲ್ಲಾ ಟೆನ್ಶನ್ ಶುರುವಾಗಿದೆ. ಎಸ್ಐಟಿ

ಈಗ ನಡೆಯುತ್ತಿರುವ ಲೋಕಸಭಾ ಚುನಾವಣೆ ಎರಡನೇ ಸ್ವಾತಂತ್ರ್ಯ ಹೋರಾಟ : ಮುಖ್ಯಮಂತ್ರಿ ಸಿದ್ದರಾಮಯ್ಯ

  ಬೆಳಗಾವಿ , ಮೇ 05 : ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ 400 ಸ್ಥಾನಗಳನ್ನು ನೀಡಿದರೆ ಸಂವಿಧಾನವನ್ನು ಬದಲಾವಣೆ ಮಾಡುವುದಾಗಿ ಬಿಜೆಪಿ ಹಾಗೂ ಆರ್ ಎಸ್ ಎಸ್ ಹೇಳುತ್ತಿದ್ದು, ಈ ಚುನಾವಣೆ ಎರಡನೇ ಸ್ವಾತಂತ್ರ್ಯ

error: Content is protected !!