Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಎಸ್.ಜೆ.ಎಂ. ವಿದ್ಯಾಪೀಠದ ಕಾರ್ಯದರ್ಶಿಯಾಗಿ ಕೆ.ಸಿ.ವೀರೇಂದ್ರ ಪಪ್ಪಿ ನೇಮಕ

---Advertisement---

 

ಸುದ್ದಿಒನ್, ಚಿತ್ರದುರ್ಗ,(ಜೂ. 13) :  ಎಸ್.ಜೆ.ಎಂ. ವಿದ್ಯಾಪೀಠದ ನೂತನ ಕಾರ್ಯದರ್ಶಿಯಾಗಿ ಶಾಸಕರಾದ ಕೆ.ಸಿ. ವೀರೇಂದ್ರ (ಪಪ್ಪಿ) ಅಧಿಕಾರ ವಹಿಸಿಕೊಂಡಿದ್ದಾರೆ.

ನಂತರ ಮಾತನಾಡಿದ ಅವರು, ಇದೊಂದು ನನಗೆ ಬಯಸದೆ ಬಂದ ಭಾಗ್ಯ. ನನ್ನ ಮೇಲೆ ನಂಬಿಕೆಯಿಟ್ಟು ಈ ಹುದ್ದೆ ನೀಡಿರುವುದಕ್ಕೆ ನನಗೆ ಅತೀವ ಸಂತೋಷವಾಗಿದೆ. ಶ್ರೀಮಠದ ಎಲ್ಲ ದಾಖಲೆಗಳನ್ನು ಈಗಿರುವ ಆಡಳಿತಾಧಿಕಾರಿಗಳು ಹಸ್ತಾಂತರಿಸಬೇಕು.

ಶ್ರೀಮಠದಲ್ಲಿ ಹಿಂದೆ ಕಾರ್ಯಕಲಾಪಗಳು ಹೇಗೆ ನಡೆಯುತ್ತಿದ್ದವೋ ಹಾಗೆಯೇ ಇನ್ನುಮುಂದೆ ನಡೆಯುತ್ತವೆ ಎಂದರು.

ಶ್ರೀ ಬಸವಪ್ರಭು ಸ್ವಾಮಿಗಳು ಮಾತನಾಡಿ, ಎಸ್.ಜೆ.ಎಂ ವಿದ್ಯಾಪೀಠದ ನೂತನ ಕಾರ್ಯದರ್ಶಿಯಾಗಿ ಆಯ್ಕೆಯಾಗಿರುವ ಕೆ.ಸಿ. ವೀರೇಂದ್ರ ಪಪ್ಪಿ ಅವರಿಗೆ ಅಭಿನಂದನೆಗಳು. ಈ ಮೊದಲು ಶ್ರೀಮಠದಲ್ಲಿ ಕಾರ್ಯಕಲಾಪಗಳು ಹೇಗೆ ನಡೆಯುತ್ತಿದ್ದವೋ ಹಾಗೆಯೇ ಸಮಿತಿಯ ಎಲ್ಲರೂ ಸೇರಿ ಮುಂದುವರಿಸಲಾಗುವುದು ಎಂದರು.

ಕಾರ್ಯಕ್ರಮದಲ್ಲಿ ಎಚ್.ಆನಂದಪ್ಪ, ಡಿ.ಎಸ್. ಮಲ್ಲಿಕಾರ್ಜುನ್, ಶ್ರೀಮತಿ ದೇವಿಕುಮಾರಿ, ಶ್ರೀರಾಮ್, ಫಾತ್ಯರಾಜನ್, ನಾಗರಾಜ್, ಟಿ.ಎ.ಟಿ. ಸುರೇಶ್‍ಬಾಬು, ಎಂ.ಕೆ. ತಾಜ್‍ಪೀರ್, ವೀರೇಂದ್ರಕುಮಾರ್, ಜಯಕುಮಾರ್, ಎಸ್.ಪರಮೇಶ್, ಮಾರುತಿ, ಎಚ್.ಎಂ. ಮಂಜುನಾಥ, ಕಾರ್ತಿಕ್, ಪೊಲೀಸ್ ಮಲ್ಲಿಕಾರ್ಜುನ್, ಅನೀಸ್, ಎಸ್.ಜೆ.ಎಂ. ವಿದ್ಯಾಪೀಠದ ಕಾರ್ಯಕಾರಿ ಮಂಡಳಿ ಸದಸ್ಯರು ಹಾಜರಿದ್ದರು. ಪ್ರತಾಪ್ ಜೋಗಿ ಸ್ವಾಗತಿಸಿ, ವಂದಿಸಿದರು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment