Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕೆಸಿಇಟಿ ಫಲಿತಾಂಶ : ಮಹೇಶ್ ಪಿ.ಯು ಕಾಲೇಜ್ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ

---Advertisement---

ಸುದ್ದಿಒನ್, ಚಿತ್ರದುರ್ಗ, ಮೇ.25 : ನಗರದ ಮಹೇಶ್ ಪಿ.ಯು ಕಾಲೇಜ್, ವಿದ್ಯಾ ವಿಕಾಸ ವಿದ್ಯಾ ಸಂಸ್ಥೆ (ರಿ) 2025 ರ ಏಪ್ರಿಲ್ ನಲ್ಲಿ ನಡೆದ ಕೆ.ಸಿ.ಇ.ಟಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ವಿವಿಧ ಕೋರ್ಸ್‍ಗಳಲ್ಲಿ ರಾಜ್ಯದಲ್ಲಿ ಉತ್ತಮ ಶ್ರೇಣಿಯನ್ನು ಪಡೆದಿರುತ್ತಾರೆ.

ಇಂಜಿನೀಯರಿಂಗ್ ವಿಭಾಗದಲ್ಲಿ ಉತ್ತಮ ಶ್ರೇಣಿಯನ್ನು ಪಡೆದ ವಿದ್ಯಾರ್ಥಿ ಗುರುಕಿರಣ್ 4814 ನೇ ರ್ಯಾಂಕ್ ಮತ್ತು ವಿನಯ್ 5883 ನೇ ರ್ಯಾಂಕ್ ಪಡೆದಿರುತ್ತಾರೆ, ಹಾಗೂ ಬಿ.ಎಸ್ಸಿ ಅಗ್ರಿಕಲ್ಚರ್ ವಿಭಾಗದಲ್ಲಿ ವಿನಯ್ 2060 ನೇ ರ್ಯಾಂಕ ಮತ್ತು ನಿತ್ಯ 2870 ನೇ ರ್ಯಾಂಕ್ ಪಡೆದಿರುತ್ತಾರೆ. ಮತ್ತು ವಿನಯ್ ವೆಟರ್ನರಿ, ಬಿ.ಫಾರ್ಮ ಮತ್ತು ಡಿ.ಫಾರ್ಮ ವಿಭಾಗದಲ್ಲಿ ಕ್ರಮವಾಗಿ 4866, 6941 ನೇ ರ್ಯಾಂಕನ್ನು ಪಡೆದು ಕಾಲೇಜಿಗೆ ಕೀರ್ತಿಯನ್ನು ತಂದಿರುತ್ತಾರೆ.

ಮಹೇಶ್ ಪಿ.ಯು ಕಾಲೇಜುನಲ್ಲಿ ನೀಟ್, ಜೆ.ಇ.ಇ ಮತ್ತು ಕೆ.ಸಿ.ಇ.ಟಿ ಗೆ ಉತ್ತಮ ತರಬೇತಿಯನ್ನು ಕೊಡುವ ಅತ್ಯುತ್ತಮ ಶಿಕ್ಷಕರನ್ನು ಹಾಗೂ ಶ್ಯೆಕ್ಷಣಿಕ ಯೋಜನೆಯ ಮೂಲಕ ಉತ್ತಮ ತರಬೇತಿಯನ್ನು ನೀಡುವಲ್ಲಿ ಯಶಸ್ವಿಯಾಗಿದೆ. ಮುಂದಿನ ಶ್ಯೆಕ್ಷಣಿಕ ವರ್ಷಗಳಲ್ಲಿ ಇನ್ನೂ ಉತ್ತಮ ಫಲಿತಾಂಶವನ್ನು ತರುವ ದೃಷ್ಟಿಯಿಂದ ಮತ್ತು ವಿದ್ಯಾರ್ಥಿಗಳ ಸರ್ವತೋಮುಕ ಬೆಳವಣಿಗೆಗೆ ಸಾಯಂಕಾಲ 5 ರಿಂದ 7.30 ರ ತನಕ ವಿಶೇಷ ತರಗತಿಗಳನ್ನು ನಡೆಸುತ್ತಿದೆ.
2025 ರ ಕೆ.ಸಿ.ಇ.ಟಿ ಪರೀಕ್ಷೆಯಲ್ಲಿ ಸಾಧನೆ ಮಾಡಿದ ಎಲ್ಲಾ ವಿದ್ಯಾರ್ಥಿಳಿಗೆ ಸಂಸ್ಥೆಯ ಕಾರ್ಯದರ್ಶಿಗಳು, ವಿಜಯ ಕುಮಾರ ಎಸ್. ಎಮ್, ಪೃಥ್ವಿಷಾ, ಪ್ರಾಂಶುಪಾಲ ಕೆಂಚನ ಗೌಡ ಹಾಗೂ ಎಲ್ಲಾ ಬೋಧಕ – ಬೋಧಕೇತರ ಸಿಬ್ಬಂಧಿಯವರು ಹೃದಯಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment