‘ಭಾರತ್ ರಾಷ್ಟ್ರ ಸಮಿತಿ’ಯನ್ನು ಅಧಿಕೃತವಾಗಿ ಘೋಷಿಸಿದ ಕೆಸಿಆರ್

ತೆಲಂಗಾಣ: ತೆಲಂಗಾಣ ಮುಖ್ಯಮಂತ್ರಿ ಇಂದು ಹೊಸ ರಾಷ್ಟ್ರೀಯ ಪಕ್ಷವನ್ನು ಘೋಷಣೆ ಮಾಡಿದ್ದಾರೆ. ಭಾರತ್ ರಾಷ್ಟ್ರ ಸಮಿತಿ ಎಂಬ ಪಕ್ಷವನ್ನು ಇಂದು ಅಧಿಕೃತವಾಗಿ ಅದ್ದೂರಿ ಕಾರ್ಯಕ್ರಮದಲ್ಲಿ ಘೋಷಣೆ ಮಾಡಿದ್ದಾರೆ. ಈ ಕಾರ್ಯಕ್ರಮದಲ್ಲಿ ಕರ್ನಾಟಕದಿಂದ ಮಾಜಿ ಸಿಎಂ ಕುಮಾರಸ್ವಾಮಿ ಮತ್ತು ಶಾಸಕರು, ಮಾಜಿ ಸಚಿವ ಎಚ್ ಡಿ ರೇವಣ್ಣ ಕೂಡ ಭಾಗಿಯಾಗಿದ್ದರು.

2024ರ ಲೋಕಸಭಾ ಚುನಾವಣೆಯ ಮೇಲೆ ಕೆಸಿಆರ್ ತಮ್ಮ ಪಕ್ಷವನ್ನು ಗೆಲ್ಲಿಸಲೇಬೇಕೆಂಬ ಹಠ ತೊಟ್ಟಿದ್ದಾರೆ. ಇಂದು ಮಧ್ಯಾಹ್ನ 1.19ಕ್ಕೆ ಪಕ್ಷದ ಹೆಸರನ್ನು ಘೋಷಿಸಿದ್ದಾರೆ. ತೆಲಂಗಾಣ ಭವನದಲ್ಲಿ ಈ ಕಾರ್ಯಕ್ರಮ ನಡೆದಿದೆ.

ರಾಷ್ಟ್ರೀಯ ಪಕ್ಷ ಘೋಷಿಸುವ ಕಾರ್ಯಕ್ರಮದಲ್ಲಿ ತೆಲಂಗಾಣ ನಾಯಕರು, ಜೆಡಿಎಸ್ ನಾಯಕರು ಹಾಗೂ ತೃತೀಯ ರಂಗ ಬೆಂಬಲಿತರು ಕೂಡ ಭಾಗಿಯಾಗಿದ್ದರು. ಮುಂದಿನ ಚುನಾವಣೆಯಲ್ಲಿ ಗೆಲ್ಲಲೇಬೇಕು. ಕಾಂಗ್ರೆಸ್ ಹಾಗೂ ಬಿಜೆಪಿಯನ್ನು ಮೀರಿಸಲೇಬೇಕು ಎಂಬ ಕಾರಣಕ್ಕೆ ಎಲ್ಲಾ ಪ್ರಾದೇಶಿಕ ಪಕ್ಷಗಳು ಒಗ್ಗಟ್ಟಿನ ಸಮರ ಸಾರಿವೆ.

Share This Article
Leave a Comment

Leave a Reply

Your email address will not be published. Required fields are marked *