ಹೊಸ ಪಕ್ಷ ಘೋಷಿಸಲಿರುವ ಕೆಸಿಆರ್ : ಬೆಂಗಳೂರಿನಿಂದ 20 ಶಾಸಕರ ಜೊತೆ ಹೊರಟ ಹೆಚ್ಡಿಕೆ

1 Min Read

ಬೆಂಗಳೂರು: ಮಾಜಿ ಸಿಎಂ ಕುಮಾರಸ್ವಾಮಿ ಇಂದು ಜೆಡಿಎಸ್ ಪಕ್ಷದ 20 ಶಾಸಕರ ಜೊತೆಗೆ ಹೈದ್ರಾಬಾದ್ ಗೆ ತೆರಳಿದ್ದಾರೆ. ತೆಲಂಗಾಣ ಸಿಎಂ ಕೆಸಿಆರ್ ಇತ್ತಿಚೆಗೆ ಹೊಸ ಪಕ್ಷ ಘೋಷಿಸುವುದಾಗಿ ತಿಳಿಸಿದ್ದರು. ಅದರಂತೆ ನಾಳೆ ಹೊಸ ಪಕ್ಷ ಘೋಷಿಸಲಿದ್ದಾರೆ. ಈ ಹಿನ್ನೆಲೆ ಕುಮಾರಸ್ವಾಮಿ ಅವರು ಹೈದ್ರಾಬಾದ್ ಗೆ ತೆರಳಿದ್ದಾರೆ.

ಇಂದು ವಿಶೇಷ ವಿಮಾನದಲ್ಲಿ ತೆರಳಿದ ಕುಮಾರಸ್ವಾಮಿ ಅಂಡ್ ಟೀಂ ಇಂದು ಮತ್ತು ನಾಳೆ ಹೈದ್ರಾಬಾದ್ ನಲ್ಲಿಯೇ ವಾಸ್ತವ್ಯ ಹೂಡಲಿದ್ದಾರೆ. ತೆಲಂಗಾಣ ಸಿಎಂ ಕೆ ಸಿ ಚಂದ್ರಶೇಖರ್ ಅವರ ಹೊಸ ಪಕ್ಷದ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

ಕೆ ಸಿ ಚಂದ್ರಶೇಖರ್ ಅವರ ಜೊತೆ ಕುಮಾರಸ್ವಾಮಿ ಉತ್ತಮ ಬಾಂಧವ್ಯ ಹೊಂದಿದ್ದಾರೆ. ಇತ್ತಿಚೆಗೆ ಬೆಂಗಳೂರಿಗೆ ಬಂದಿದ್ದ ಕೆಸಿಆರ್, ಮಾಜಿ ಪಿಎಂ ದೇವೇಗೌಡ ಅವರನ್ನು ಭೇಟಿ ಮಾಡಿ ಹೊಸ ಪಲ್ಷದ ಬಗ್ಗೆ ಘೋಷಣೆ ಚರ್ಚೆ ಮಾಡಿದ್ದರು. ಅದರಂತೆ ನಾಳೆ ಪಕ್ಷ ಅಧಿಕೃತವಾಗಿ ಘೋಷಣೆಯಾಗಲಿದ್ದು, ಕೆಸಿಆರ್ ಜೊತೆಗೆ ಕುಮಾರಸ್ವಾಮಿ ಬೆಂಬಲವಾಗಿ ನಿಲ್ಲಲಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *