ಕೆಇಎ ಪರೀಕ್ಷೆ ಅಕ್ರಮದ ಕಿಂಗ್ ಪಿಮ್ ಆರ್ ಡಿ ಪಾಟೀಲ್ ಜಾಮೀನು ತಿರಸ್ಕಾರ..!

ಪರೀಕ್ಷಾ ಅಕ್ರಮಗಳ ಕಿಂಗ್‌ಪಿನ್‌ ಆರ್‌ಡಿ ಪಾಟೀಲ್‌ ಜಾಮೀನು ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದೆ. ಕಲಬುರಗಿ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 3 ಕೇಸ್‌ಗಳಲ್ಲೂ ಆರ್‌.ಡಿ.ಪಾಟೀಲ್‌ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ.

ಆರ್ ಡಿ ಪಾಟೀಲ್ ಮನೆ ಹಿಂದಿನ ಕಾಂಪೌಂಡ್ ಮೂಲಕ ಪರಾರಿಯಾಗಿರುವ ವಿಡಿಯೋ ವೈರಲ್ ಆಗಿದೆ. ಈ ವಿಡಿಯೋ ನೋಡಿದ ಬಿಜೆಪಿ, ಕಾಂಗ್ರೆಸ್ ಮೇಲೆ ವಾಗ್ದಾಳಿ ನಡೆಸಿದೆ‌. ಆರ್ ಡಿ ಪಾಟೀಲ್ ತಪ್ಪಿಸಿಕೊಳ್ಳುವುದಕ್ಕೆ ಸರ್ಕಾರದ ಸಚಿವರೇ ಕಾರಣ ಎಂದು ಆರೋಪಿಸಿದ್ದಾರೆ. ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹಾಗೂ ಬಿವೈ ವಿಜಯೇಂದ್ರ ಕಾಂಗ್ರೆಸ್ ಮೇಲೆ ವಾಗ್ದಾಳಿ ನಡೆಸಿದ್ದಾರೆ. ಈ ಬಗ್ಗೆ ಮಾತನಾಡಿರುವ ಬಿ ಎಸ್ ಯಡಿಯೂರಪ್ಪ, ಆರ್ ಡಿ ಪಾಟೀಲ್ ತಪ್ಪಿಸಿಕೊಂಡಿರುವ ವಿಚಾರ ನನಗೆ ಗೊತ್ತಾಗಿದೆ. ವಿಚಾರ ಏನು ಅಂತ ತಿಳಿದುಕೊಳ್ಳುವ ಪ್ರಯತ್ನ ಮಾಡುತ್ತೇನೆ. ಆತನ ಬಂಧನಕ್ಕೆ‌ ಪೊಲೀಸರು ಸೂಕ್ತ ಕ್ರಮ ಕೈಗೊಳ್ಳಲಿ ಎಂದಿದ್ದಾರೆ. ಇನ್ನು ಬಿವೈ ವಿಜಯೇಂದ್ರ ಅವರು ಮಾತನಾಡಿ, ಹಗಲಿನಲ್ಲಿಯೇ ಆರ್ ಡಿ ಪಾಟೀಲ್ ಎಸ್ಕೇಪ್ ಆಗಿದ್ದಾನೆ. ಬಿಜೆಪಿ ಸರ್ಕಾರವಿದ್ದಾಗ ನಾನಾ ರೀತಿಯ ಆರೋಪಗಳನ್ನು ಮಾಡಲಾಗಿತ್ತು. ಸಚಿವ ಪ್ರಿಯಾಂಕ್ ಖರ್ಗೆ ಬಿಜೆಪಿ ಮೇಲೆ ಗೂಬೆ ಕೂರಿಸುವ ಕೆಲಸ ಮಾಡಿದ್ದರು. ಆರ್ ಡಿ ಪಾಟೀಲ್ ಹಾಗೂ ಅವನ ಸಂಗಡಿಗರು ಕಾಂಗ್ರೆಸ್ ಕೈಗೊಂಬೆಯಂತೆ ಕೆಲಸ‌ ಮಾಡುತ್ತಿದ್ದಾರೆ. ಆರ್ ಡಿ ಪಾಟೀಲ್ ತಪ್ಪಿಸಿಕೊಂಡು ಹೋಗಿದ್ದರಲ್ಲಿ, ಸಚಿವರು ಮತ್ತು ಶಾಸಕರ ಕೈವಾಡವಿದೆ ಎಂದಿದ್ದರು.

ಈ ಸಂಬಂಧ ಸಚಿವ ಪ್ರಿಯಾಂಕ್ ಖರ್ಗೆ ಕೂಡ ಮಾತನಾಡಿದ್ದು, ಆರ್ ಡಿ ಪಾಟೀಲ್ ಇರಲಿ, ಯಾರೇ ಇರಲಿ. ಸರ್ಕಾರ ದಯೆ ತೋರಿಸಲ್ಲ. ಕಳೆದ ನಾಲ್ಕು ದಿನದಲ್ಲಿ ಈ ಪ್ರಕರಣ ಸಂಬಂಧ ಇಪ್ಪತ್ತು ಜನರ ಬಂಧನವಾಗಿದೆ. ಇನ್ನೆರಡು ದಿನದಲ್ಲಿ ಆರ್ ಡಿ ಪಾಟೀಲ್ ಬಂಧನ ಕೂಡ ಆಗಲಿದೆ ಎಂದಿದ್ದಾರೆ.

suddionenews

Recent Posts

ಕಾಯಕ ಪ್ರಜ್ಞೆ ಮೈಗೂಡಿಸಿಕೊಂಡರೆ ಬಸವ ತತ್ವ ಪಾಲಿಸಿದಂತೆ : ಸಂಸದ ಗೋವಿಂದ ಕಾರಜೋಳ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಚಿತ್ರದುರ್ಗ. ಫೆ. 25 :…

4 hours ago

ಮಾರ್ಚ್ 01 ರಿಂದ 09 ರವರೆಗೆ ವನಕಲ್ಲು ಮಲ್ಲೇಶ್ವರ ಜಾತ್ರಾ ಮಹೋತ್ಸವ : ಬಸವ ರಮಾನಂದ ಮಹಾಸ್ವಾಮಿ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…

5 hours ago

ಚಿತ್ರದುರ್ಗ ತಹಶೀಲ್ದಾರ್ ಡಾ.ನಾಗವೇಣಿ ವರ್ಗಾವಣೆ…!

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…

5 hours ago

ವೇಷಗಾರ ಸಮುದಾಯದ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ ಖಂಡಿಸಿ ಚಿತ್ರದುರ್ಗದಲ್ಲಿ ಪ್ರತಿಭಟನೆ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…

5 hours ago

ಸಂವಿಧಾನಕ್ಕೆ ಅಪಾಯವಾದರೆ ಜನಸಾಮಾನ್ಯರ ಪಾಡೇನು ?  ಜೆ.ಯಾದವರೆಡ್ಡಿ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…

5 hours ago

ಹೊಳಲ್ಕೆರೆ | ಫೆಬ್ರವರಿ 26 ರಿಂದ ಮಾರ್ಚ್ 01 ರವರೆಗೆ ಬಸವೇಶ್ವರಸ್ವಾಮಿ ಜಾತ್ರಾ ಮಹೋತ್ಸವ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…

5 hours ago