ಬೆಂಗಳೂರು.ಜುಲೈ.14: ರಾಜ್ಯದ ಪ್ರತಿಷ್ಠಿತ ಎಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ಗಳ ಪ್ರವೇಶಾತಿಗೆ ಕಾಯುತ್ತಿದ್ದ ವಿದ್ಯಾರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಮಹತ್ವದ ಸುದ್ದಿಯೊಂದನ್ನು ನೀಡಿದೆ. ಯುಜಿಸಿಇಟಿ–2026ರ ಮೊದಲನೇ ಸುತ್ತಿನ ಸೀಟು ಹಂಚಿಕೆಯ ತಾತ್ಕಾಲಿಕ ಫಲಿತಾಂಶವನ್ನು ಪ್ರಾಧಿಕಾರವು ಅಧಿಕೃತ ವೆಬ್ಸೈಟ್ನಲ್ಲಿ ಪ್ರಕಟಿಸಿದೆ.
ಅಭ್ಯರ್ಥಿಗಳು ಜುಲೈ 9ರ ಬೆಳಿಗ್ಗೆ 11 ಗಂಟೆಯವರೆಗೆ ಆನ್ಲೈನ್ನಲ್ಲಿ ದಾಖಲಿಸಿದ್ದ ಇಚ್ಛೆ ಹಾಗೂ ಆಯ್ಕೆಗಳ (Options) ಆದ್ಯತಾ ಕ್ರಮವನ್ನು ಪರಿಗಣಿಸಿ ಈ ನಿಯಮಾನುಸಾರ ಸೀಟು ಹಂಚಿಕೆ ಮಾಡಲಾಗಿದೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕರಾದ ಹೆಚ್. ಪ್ರಸನ್ನ ಅವರು ಮಾಹಿತಿ ನೀಡಿದ್ದಾರೆ.
#UGCET-2026: ಎಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಮೊದಲ ಸುತ್ತಿನ ಸೀಟು ಹಂಚಿಕೆಯ ತಾತ್ಕಾಲಿಕ ಫಲಿತಾಂಶವನ್ನು #KEA ಇಂದು ರಾತ್ರಿ ಪ್ರಕಟಿಸಿದೆ.
ಅಭ್ಯರ್ಥಿಗಳು #KEA ವೆಬ್ ಸೈಟ್ ನಲ್ಲಿ ಬಿಟ್ಟಿರುವ ಲಿಂಕ್ ಮೂಲಕ ಫಲಿತಾಂಶ ಪಡೆಯಬಹುದು.
ತಾತ್ಕಾಲಿಕ ಫಲಿತಾಂಶಕ್ಕೆ ಆಕ್ಷೇಪಣೆ ಇದ್ದಲ್ಲಿ ಜುಲೈ 14ರಂದು ಸಂಜೆ… pic.twitter.com/G7jFgwi74X
— ಕರ್ನಾಟಕ ಪರೀಕ್ಷಾ ಪ್ರಾಧಿಕಾರ KEA (@KEA_karnataka) July 13, 2026
ಇಂದೇ ಆಕ್ಷೇಪಣೆ ಸಲ್ಲಿಸಲು ಕೊನೆಯ ಅವಕಾಶ
ಪ್ರಕಟಿತ ತಾತ್ಕಾಲಿಕ ಫಲಿತಾಂಶದಲ್ಲಿ ಏನಾದರೂ ನಿರ್ದಿಷ್ಟ ಲೋಪದೋಷಗಳು ಕಂಡುಬಂದಲ್ಲಿ ಅಭ್ಯರ್ಥಿಗಳು ಆಕ್ಷೇಪಣೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಕಟ್ಆಫ್ ಅಂಕಗಳು ಮ್ಯಾಚ್ ಆಗುತ್ತಿದ್ದರೂ ಅಥವಾ ಇಚ್ಛೆಗಳನ್ನು ಸರಿಯಾಗಿ ನಮೂದಿಸಿದ್ದರೂ ಯಾವುದೇ ಸೀಟು ಹಂಚಿಕೆಯಾಗದೇ ಇರುವಂತಹ ತಾಂತ್ರಿಕ ತೊಂದರೆಗಳಿದ್ದಲ್ಲಿ, ಸೂಕ್ತ ಆಧಾರಗಳೊಂದಿಗೆ ಜುಲೈ 14ರ ಸಂಜೆ 5:00 ಗಂಟೆಯೊಳಗೆ keauthority-ka@nic.in ಇಮೇಲ್ ವಿಳಾಸಕ್ಕೆ ದೂರು ಕಳುಹಿಸಬಹುದಾಗಿದೆ.
ಆದರೆ, ಅಭ್ಯರ್ಥಿಗಳು ತಮ್ಮ ಕಡೆಯಿಂದ ಆಪ್ಷನ್ ಎಂಟ್ರಿ ಮಾಡದ ಕಾರಣ ಸೀಟು ಸಿಗದೇ ಇದ್ದರೆ ಅಂತಹ ಆಕ್ಷೇಪಣೆಗಳನ್ನು ಸ್ವೀಕರಿಸಲಾಗುವುದಿಲ್ಲ. ಅಷ್ಟೇ ಅಲ್ಲದೆ, ಈ ಹಂತದಲ್ಲಿ ಹೊಸದಾಗಿ ಆಯ್ಕೆಗಳನ್ನು ಬದಲಾಯಿಸಲು ಯಾವುದೇ ರೀತಿಯಲ್ಲಿಯೂ ಆಸ್ಪದ ಇರುವುದಿಲ್ಲ. ಸಲ್ಲಿಕೆಯಾಗುವ ಅರ್ಹ ಆಕ್ಷೇಪಣೆಗಳನ್ನು ಪರಿಶೀಲಿಸಿದ ನಂತರವೇ ಮೊದಲ ಸುತ್ತಿನ ಅಂತಿಮ ಸೀಟು ಹಂಚಿಕೆಯ ರಿಸಲ್ಟ್ ಹೊರಬೀಳಲಿದೆ. ಮುಂದಿನ ಅಪ್ಡೇಟ್ಗಳಿಗಾಗಿ ವಿದ್ಯಾರ್ಥಿಗಳು ಕೆಇಎ ವೆಬ್ಸೈಟ್ ಅನ್ನು ನಿರಂತರವಾಗಿ ಗಮನಿಸುತ್ತಿರಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.









