Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮಕ್ಕಳನ್ನು ಮೊಬೈಲ್‍ನಿಂದ ದೂರವಿಡಿ, ಅದರ ಬದಲು ಪುಸ್ತಕ ನೀಡಿ : ಕೆ.ಪಿ.ಎಂ.ಗಣೇಶಯ್ಯ

---Advertisement---

ಸುದ್ದಿಒನ್, ಚಿತ್ರದುರ್ಗ, ಮಾರ್ಚ್.04 : ಶಾಲಾ ಕಾಲೇಜುಗಳಲ್ಲಿ ಸಾಂಸ್ಕøತಿಕ ನೀತಿ ರೂಪುಗೊಳ್ಳಬೇಕು. ನಲಿಕಲಿ, ಚಿಗುರು, ಆಟಪಾಠಗಳ ಮೂಲಕ ಮಕ್ಕಳಿಗೆ ಶಿಕ್ಷಣ ಒದಗಬೇಕು. ಮಕ್ಕಳಲ್ಲಿ ಸುಪ್ತವಾಗಿರುವ ಪ್ರತಿಭೆಗಳು ಸಾಂಸ್ಕøತಿಕವಾಗಿ ಬೋಧಿಸಿದಾಗ ಪರಿಣಾಮಕಾರಿಯಾಗಿರುತ್ತದೆ ಎಂದು ಹಿರಿಯ ರಂಗ ನಿರ್ದೇಶಕ ಹಾಗೂ ಕಸಾಪ ಜಿಲ್ಲಾ ಕಾರ್ಯದರ್ಶಿ ಕೆ.ಪಿ.ಎಂ.ಗಣೇಶಯ್ಯ ಅಭಿಪ್ರಾಯಪಟ್ಟರು.

ನಗರದ ಐಯುಡಿಪಿ ಬಡಾವಣೆಯ ಲಿಲ್ ಬ್ರೂಕ್ಸ್ ಶಾಲಾ ಆವರಣದಲ್ಲಿ ಶನಿವಾರ ಆಯೋಜಿಸಿದ್ದ ಶಾಲಾ ವಾರ್ಷಿಕೋತ್ಸವ  ಕಾರ್ಯಕ್ರಮ ಉದ್ಧಾಟಿಸಿ ಮಾತನಾಡಿದರು.

ಮಕ್ಕಳಿಗೆ ಒಳ್ಳೆಯ ಪುಸ್ತಕಗಳನ್ನು ಓದುವ ಹವ್ಯಾಸ ಬೆಳಸಬೇಕು. ಸಣ್ಣಕತೆಗಳ ಮೂಲಕ ಮಕ್ಕಳಲ್ಲಿ ಜೀವನಮೌಲ್ಯಗಳನ್ನು ಬೆಳಸಬಹುದು. ಮೊಬೈಲ್‍ನಿಂದ ಮಕ್ಕಳನ್ನು ದೂರವಿಡಿ ಅದರ ಬದಲು ಪುಸ್ತಕ ನೀಡಿ. ಓದುವ ಹವ್ಯಾಸ ಬೆಳಸಿದರೆ ಅವರಲ್ಲಿ ಭಾಷಾಜ್ಞಾನ ಬೆಳಸಿದಂತಾಗುತ್ತದೆ. ಕನ್ನಡನಾಡಿನ ಕವಿ, ಕೃತಿ, ಕಾದಂಬರಿಗಳನ್ನು ಹೆಚ್ಚಾಗಿ ಓದುವಂತೆ ಮಕ್ಕಳಿಗೆ ಪ್ರೇರೇಪಿಸಬಹುದು ಎಂದು ತಿಳಿಸಿದರು.
ಬಾದರದಿನ್ನಿ ಆಟ್ರ್ಸ್ ಅಕಾಡೆಮಿ ಕಾರ್ಯದರ್ಶಿ ಪ್ರಕಾಶ್ ಬಾದರದಿನ್ನಿ ಮಾತನಾಡಿ, ಪಾಠೋಪಕರಣಗಳ ಪರಿಚಯ ಮಾಡಿಸಬೇಕು. ಪಠ್ಯಪುಸ್ತಕಗಳಲ್ಲಿನ ವಿಷಯಗಳನ್ನು ಆಟೋಟಗಳಿಂದ ಪರಿಚಯಿಸಬೇಕು. ಚಿಕ್ಕವಯಸ್ಸಿನಲ್ಲಿ ಮಕ್ಕಳಿಗೆ ಓದುವ ಬರೆಯುವ ಹವ್ಯಾಸ ಮೂಡುವಂತೆ ಮನೆಯಲ್ಲಿ ಪೋಷಕರು ಉತ್ತಮ ವಾತಾವರಣ ನಿರ್ಮಾಣ ಮಾಡಿ ಪ್ರೋತ್ಸಾಹಿಸಬೇಕು ಎಂದರು.
ಕಾರ್ಯಕ್ರಮದಲ್ಲಿ ಶಾಲೆ ಟ್ರಸ್ಟಿ ಶಿಲ್ಪಾ ಅವರಾದಿ, ಬಾದರದಿನ್ನಿ ಆಟ್ರ್ಸ್ ಅಕಾಡೆಮಿ ಅಧ್ಯಕ್ಷೆ ಅನಸೂಯ ಬಾದರದಿನ್ನಿ, ಕಲಾವಿದೆ ಶೋಭಾ ಮಲ್ಲಿಕಾರ್ಜುನ್, ಮುಖ್ಯಶಿಕ್ಷಕಿ ನಾಗಶ್ರೀ, ಶಿಕ್ಷಕಿಯರಾದ ಸೀಮಾ, ಆಯಿಷಾ ಸಿದ್ದಿಕಿ, ನೀಸಾ ಅವರಾದಿ, ನೈತಿ,್ರ ರಂಗಭೂಮಿ ಕಲಾವಿದರಾದ  ಗುರುಕಿರಣ, ರಾಘವೇಂದ್ರ ಇದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment