ಮೈಸೂರು: ಲೋಕಸಭಾ ಚುನಾವಣೆಯ ಹಿನ್ನೆಲೆ ಕೇಂದ್ರ ಗೃಹ ಸಚಿವ ಅಮಿತ್, ರಾಜಕೀಯ ಚಾಣಾಕ್ಯ ರಾಜ್ಯಕ್ಕೆ ಆಗಮಿಸಿದ್ದಾರೆ. ರಾಜ್ಯದಲ್ಲಿ ಲೋಕಸಭಾ ಚುನಾವಣೆಗೆ ಭರ್ಜರಿ ಸ್ಪರ್ಧೆ ಇದೆ. ಹೀಗಾಗಿ ಚುನಾವಣೆಯ ಬಗ್ಗೆ ಬಿಜೆಪಿ ನಾಯಕರ ಜೊತೆ ಮಹತ್ವ ಪೂರ್ಣ ಚರ್ಚೆ ನಡೆಸುವ ಸಾಧ್ಯತೆಯೂ ಇದೆ.
ಮೈಸೂರಿಗೆ ಅಮಿತ್ ಶಾ ಬರುವುದಕ್ಕೂ ಮುನ್ನ ವಿಮಾನ ನಿಲ್ದಾಣದಲ್ಲಿಯೇ ಸಂಸದರು ಮತ್ತು ಮಾಜಿ ಶಾಸಕರು ಕಿತ್ತಾಡಿಕೊಂಡಿರುವ ಪ್ರಸಂಗ ನಡೆದಿದೆ. ಮೈಸೂರಿನ ಮಂಡಕಹಳ್ಳಿ ವಿಮಾನ ನಿಲ್ದಾಣದಲ್ಲಿ ಪರಸ್ಪರ ಮಾತಿಗೆ ಮಾತು ಬೆಳೆದು, ಸಂಸದ ಪ್ರತಾಪ್ ಸಿಂಹ ಹಾಗೂ ಹಾಸನ ಮಾಜಿ ಶಾಸಕ ಪ್ರೀತಂಗೌಡ ಕಿತ್ತಾಡಿಕೊಂಡಿದ್ದಾರೆ.
ವಿಮಾನ ನಿಲ್ದಾಣದಲ್ಲಿ ಪ್ರೀತಂ ಗೌಡ ಹಾಗೂ ಪ್ರತಾಪ್ ಸಿಂಹ ಇಬ್ಬರಿಗೂ ಸ್ವಾಗತಕ್ಕೆ ನಿಲ್ಲುವಂತೆ ಪೊಲೀಸರು ಮನವಿ ಮಾಡಿದ್ದರು. ಇದಕ್ಕೆ ಮಾಜಿ ಶಾಸಕ ಪ್ರೀತಂ ಗೌಡ ಆಕ್ಷೇಪ ವ್ಯಕ್ತಪಡಿಸಿದರು. ಈ ವಿಚಾರವಾಗಿ ಸಂಸದ ಪ್ರತಾಪ್ ಸಿಂಹ ತಿರುಗೇಟು ನೀಡಿದರು. ಇದೆಲ್ಲವನ್ನು ಹಾಸನದಲ್ಲಿ ಇಟ್ಟುಕೋ ನಮ್ಮಲ್ಲಿ ನಡೆಯುವುದಿಲ್ಲ ಎಂದರು. ಈ ಮಾತಿಗೆ ಪ್ರೀತಂ ಗೌಡ ಕೋಪಿಸಿಕಿಂಡರು. ಅಲ್ಲಿಯೇ ಇದ್ದ ಸ್ಥಳೀಯ ನಾಯಕರು ಮಧ್ಯಪ್ರವೇಶ ಮಾಡಿ, ಮನಸ್ತಾಪವನ್ನು ದೂರ ಮಾಡಿದರು. ಆ ಜಗಳವನ್ನು ನಿಲ್ಲಿಸಿದರು.

ಗೃಹ ಸಚಿವ ಅಮಿತ್ ಶಾ, ಎರಡು ದಿನಗಳ ಕಾಲ ರಾಜ್ಯ ಪ್ರವಾಸ ಕೈಗೊಂಡಿದ್ದಾರೆ. ಲೋಕಸಭೆಯ ಚುನಾವಣೆಯನ್ನೇ ಗಮನದಲ್ಲಿಟ್ಟುಕೊಂಡು ರಾಜ್ಯ ಪ್ರವಾಸ ಕೈಗೊಂಡಿರುವ ಅಮಿತ್ ಶಾ, ಜೆಡಿಎಸ್ ಹಾಗೂ ಬಿಜೆಪಿ ನಾಯಕರ ಜೊತೆಗೆ ಚುನಾವಣೆ ಬಗ್ಗೆ ಚರ್ಚೆ ನಡೆಸಲಿದ್ದಾರೆ. ಮೈತ್ರಿ ಅಭ್ಯರ್ಥಿಗಳ ಬಗ್ಗೆಯೂ ತೀರ್ಮಾನ ಮಾಡುವ ಸಾಧ್ಯತೆ ಇದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.










