ನವದೆಹಲಿ: ರಾಜ್ಯಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಬಿಜೆಪಿಯನ್ನು ಮಕಾಡೆ ಮಲಗಿಸಿದ್ದಾಯ್ತು. ಇದೀಗ ಲೋಲಸಭಾ ಚುನಾವಣೆಯಲ್ಲಿ ಸೋಲಿಸುವ ಪ್ಲ್ಯಾನ್ ನಡೆಯುತ್ತಿದ್ದು, ಎಲ್ಲಾ ರಾಜ್ಯದ ವಿಪಕ್ಷಗಳ ಸಭೆ ನಡೆಸಲು ಕಾಂಗ್ರೆಸ್ ಈಗಾಗಲೇ ಪ್ಲ್ಹಾನ್ ಸಿದ್ಧತೆ ನಡೆಸಿದೆ. ಈ ಸಭೆಗೆ ಇದೀಗ ದೆಹಲಿ ಸಿಎಂ ಕೇಜ್ರಿವಾಲ್ ಕೂಡ ಬೆಂಬಲ ಸೂಚಿಸಿದ್ದಾರೆ.
ಅದರಲ್ಲೂ ಕಾಂಗ್ರೆಸ್ ಸುಗ್ರೀವಾಜ್ಞೆಗೆ ಒಪ್ಪಿಗೆ ಸೂಚಿಸಿದ ಬಳಿಕ ಇಂಥದ್ದೊಂದು ಬೆಳವಣಿಗೆ ನಡೆದಿದೆ. ಜೂನ್ 23ರಂದು ಪಾಟ್ನಾದಲ್ಲಿ ಪ್ರತಿಪಕ್ಷ ನಾಯಕರ ಸಭೆ ನಡೆದಿತ್ತು. ಸುಗ್ರೀವಾಜ್ಞೆ ವಿಚಾರದಲ್ಲಿ ದೆಹಲಿ ಸರ್ಕಾರ ಹಾಗೂ ಎಎಪಿಯನ್ನು ಬೆಂಬಲಿಸದ ಪ್ರತಿ ಪಕ್ಷಗಳ ವಿರುದ್ಧ ಸಿಎಂ ಅರವಿಂದ್ ಕೇಜ್ರಿವಾಲ್ ಆಕ್ರೋಶ ಹೊರ ಹಾಕಿದ್ದರು.
ತೃಣಮೂಲ ಕಾಂಗ್ರೆಸ್ನಿಂದ ತೊಡಗಿ ಆರ್ಜೆಡಿ, ಜೆಡಿಯು, ಎನ್ಸಿಪಿ, ಸಮಾಜವಾದಿ ಪಕ್ಷ, ಉದ್ಧವ್ ಠಾಕ್ರೆ ಅವರ ಶಿವಸೇನೆ ಎಲ್ಲರೂ ಈ ದೇಶವಿರೋಧಿ ಸುಗ್ರೀವಾಜ್ಞೆಯ ವಿರುದ್ಧ ಧ್ವನಿ ಎತ್ತಿದ್ದಾರೆ. ಇದನ್ನು ಸೋಲಿಸಲು ನಾವು ಸಾಧ್ಯವಿರುವ ಎಲ್ಲ ಪ್ರಯತ್ನಗಳನ್ನು ಮಾಡುತ್ತೇವೆ ಎಂದು ರಾಘವ್ ಹೇಳಿದ್ದಾರೆ. ಅಂದು ಕಾಂಗ್ರೆಸ್ ಹೊರತುಪಡಿಸಿ ಉಳಿದೆಲ್ಲಾ ರಾಷ್ಟ್ರೀಯ ಪಕ್ಷಗಳು ಸುಗ್ರಿವಾಜ್ಞೆಗೆ ಬೆಂಬಲ ನೀಡೋದಾಗಿ ತಿಳಿಸಿದ್ದವು. ಇದೀಗ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಮಣಿಸಲು ಪ್ರತಿಪಕ್ಷಗಳ ಸಹಾಯ ಬೇಕಾಗಿದೆ. ಹೀಗಾಗಿ ಇದ್ದಕ್ಕಿದ್ದ ಹಾಗೇ ಕಾಂಗ್ರೆಸ್ ಕೂಡ ಬೆಂಬಲ ನೀಡಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.


















