Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮೋದಿ ಸರ್ಕಾರ ಗೂಂಡಾಗಿರಿ ಮಾಡ್ತಿದೆ : ಮನೀಶ್ ಸಿಸೋಡಿಯಾ ಬಂಧನ ಖಂಡಿಸಿ ಆಕ್ರೋಶ ವ್ಯಕ್ತಪಡಿಸಿದ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್..!

---Advertisement---

 

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಬಿಜೆಪಿ ವರ್ಸಸ್ ಎಎಪಿ ಪಕ್ಷದ ಕಿತ್ತಾಟ ತಾರಕಕ್ಕೇರಿದೆ. ಇತ್ತಿಚೆಗಷ್ಟೇ ಮಹಾನಗರ ಪಾಲಿಕೆಯಲ್ಲಿ ಆಮ್ ಆದ್ಮಿ ಪಕ್ಷ ಅಧಿಕಾರಕ್ಕೇರಿದೆ. ಇದರಿಂದ ಪಾಲಿಕೆಯ ಒಳಗೆ ರಣರಂಗವೇ ಆಗಿ ಹೋಗಿದೆ. ಪಾಲಿಕೆ ಸದಸ್ಯರು ಎನ್ನದೆ ಎಲ್ಲರೂ ಚಪ್ಪಲಿ, ಚೇರು ಅಂತ ಸಿಕ್ಕಿ ಸಿಕ್ಕಿದರಲ್ಲಿ ಹೊಡೆದಾಡಿದ್ದಾರೆ. ಈಗ ನಿನ್ನೆಯಷ್ಟೇ ಎಎಪಿ ಪಕ್ಷದ ಮನೀಶ್ ಸಿಸೋಡಿಯಾ ಅರೆಸ್ಟ್ ಆಗಿದ್ದು, ಸಿಎಂ ಕೇಜ್ರಿವಾಲ್ ಮತ್ತಷ್ಟು ಆಕ್ರೋಶ ಹೊರ ಹಾಕಿದ್ದಾರೆ.

ಆಮ್ ಆದ್ಮಿ ಪಕ್ಷ ಭ್ರಷ್ಟಾಚಾರ ಮುಕ್ತ ಮಾಡುವ ಮಂತ್ರ ಹೇಳಿ ಅಧಿಕಾರಕ್ಕೆ ಏರಿದೆ. ಅದರಂತೆ ಭ್ರಷ್ಟಾಚಾರದ ವಿರುದ್ಧವೂ ಹೋರಾಟ ನಡೆಸಿದೆ. ಆದರೆ ಎಎಪಿ ಸರ್ಕಾರದ ಒಳಗಿರುವ ಕೆಲವರು ಭ್ರಷ್ಟಾಚಾರದ ಸುಳಿಯಲ್ಲಿ ಸಿಲುಕುತ್ತಿದ್ದಾರೆ. ಈಗಾಗಲೇ ಆರೋಗ್ಯ ಸಚಿವರಾಗಿದ್ದ ಸತ್ಯೇಂದ್ರ ಜೈನ್ ಅಕ್ರಮ ಹಣ ವರ್ಗಾವಣೆ ಕೇಸ್ ನಲ್ಲಿ ಜೈಲು ಪಾಲಾಗಿದ್ದಾರೆ. ಈಗ ಕೇಜ್ರಿವಾಲ್ ಅತ್ಯಾಪ್ತ ಮನೀಶ್ ಸಿಸೋಡಿಯಾ ನಿನ್ನೆ ಬಂಧನವಾಗಿದೆ.

ಇದರಿಂದ ದೆಹಲಿಯಲ್ಲಿ ಪ್ರತಿಭಟನೆಗಳನ್ನು ನಡೆಸಿದ್ದಾರೆ. ಈ ಬಗ್ಗೆ ಸಿಎಂ ಕೇಜ್ರಿವಾಲ್ ಆಕ್ರೋಶ ಹೊರ ಹಾಕಿದ್ದು, ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಗೂಂಡಾಗಿರಿ ಮಾಡ್ತಿದೆ. ಮನೀಶ್ ಸಿಸೋಡಿಯಾ ಅವರನ್ನು ಬೇಕಂತಲೇ ಅರೆಸ್ಟ್ ಮಾಡಿದ್ದಾರೆ. ಇದು ಗೂಂಡಾಗಿರಿಯ ಪರಮಾವಧಿ. ಇದಕ್ಕೆಲ್ಲಾ ನಾವೂ ಹೆದರುವುದಿಲ್ಲ ಎಂದಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...