ಮೋದಿ ಸರ್ಕಾರ ಗೂಂಡಾಗಿರಿ ಮಾಡ್ತಿದೆ : ಮನೀಶ್ ಸಿಸೋಡಿಯಾ ಬಂಧನ ಖಂಡಿಸಿ ಆಕ್ರೋಶ ವ್ಯಕ್ತಪಡಿಸಿದ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್..!

 

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಬಿಜೆಪಿ ವರ್ಸಸ್ ಎಎಪಿ ಪಕ್ಷದ ಕಿತ್ತಾಟ ತಾರಕಕ್ಕೇರಿದೆ. ಇತ್ತಿಚೆಗಷ್ಟೇ ಮಹಾನಗರ ಪಾಲಿಕೆಯಲ್ಲಿ ಆಮ್ ಆದ್ಮಿ ಪಕ್ಷ ಅಧಿಕಾರಕ್ಕೇರಿದೆ. ಇದರಿಂದ ಪಾಲಿಕೆಯ ಒಳಗೆ ರಣರಂಗವೇ ಆಗಿ ಹೋಗಿದೆ. ಪಾಲಿಕೆ ಸದಸ್ಯರು ಎನ್ನದೆ ಎಲ್ಲರೂ ಚಪ್ಪಲಿ, ಚೇರು ಅಂತ ಸಿಕ್ಕಿ ಸಿಕ್ಕಿದರಲ್ಲಿ ಹೊಡೆದಾಡಿದ್ದಾರೆ. ಈಗ ನಿನ್ನೆಯಷ್ಟೇ ಎಎಪಿ ಪಕ್ಷದ ಮನೀಶ್ ಸಿಸೋಡಿಯಾ ಅರೆಸ್ಟ್ ಆಗಿದ್ದು, ಸಿಎಂ ಕೇಜ್ರಿವಾಲ್ ಮತ್ತಷ್ಟು ಆಕ್ರೋಶ ಹೊರ ಹಾಕಿದ್ದಾರೆ.

ಆಮ್ ಆದ್ಮಿ ಪಕ್ಷ ಭ್ರಷ್ಟಾಚಾರ ಮುಕ್ತ ಮಾಡುವ ಮಂತ್ರ ಹೇಳಿ ಅಧಿಕಾರಕ್ಕೆ ಏರಿದೆ. ಅದರಂತೆ ಭ್ರಷ್ಟಾಚಾರದ ವಿರುದ್ಧವೂ ಹೋರಾಟ ನಡೆಸಿದೆ. ಆದರೆ ಎಎಪಿ ಸರ್ಕಾರದ ಒಳಗಿರುವ ಕೆಲವರು ಭ್ರಷ್ಟಾಚಾರದ ಸುಳಿಯಲ್ಲಿ ಸಿಲುಕುತ್ತಿದ್ದಾರೆ. ಈಗಾಗಲೇ ಆರೋಗ್ಯ ಸಚಿವರಾಗಿದ್ದ ಸತ್ಯೇಂದ್ರ ಜೈನ್ ಅಕ್ರಮ ಹಣ ವರ್ಗಾವಣೆ ಕೇಸ್ ನಲ್ಲಿ ಜೈಲು ಪಾಲಾಗಿದ್ದಾರೆ. ಈಗ ಕೇಜ್ರಿವಾಲ್ ಅತ್ಯಾಪ್ತ ಮನೀಶ್ ಸಿಸೋಡಿಯಾ ನಿನ್ನೆ ಬಂಧನವಾಗಿದೆ.

ಇದರಿಂದ ದೆಹಲಿಯಲ್ಲಿ ಪ್ರತಿಭಟನೆಗಳನ್ನು ನಡೆಸಿದ್ದಾರೆ. ಈ ಬಗ್ಗೆ ಸಿಎಂ ಕೇಜ್ರಿವಾಲ್ ಆಕ್ರೋಶ ಹೊರ ಹಾಕಿದ್ದು, ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಗೂಂಡಾಗಿರಿ ಮಾಡ್ತಿದೆ. ಮನೀಶ್ ಸಿಸೋಡಿಯಾ ಅವರನ್ನು ಬೇಕಂತಲೇ ಅರೆಸ್ಟ್ ಮಾಡಿದ್ದಾರೆ. ಇದು ಗೂಂಡಾಗಿರಿಯ ಪರಮಾವಧಿ. ಇದಕ್ಕೆಲ್ಲಾ ನಾವೂ ಹೆದರುವುದಿಲ್ಲ ಎಂದಿದ್ದಾರೆ.

suddionenews

Recent Posts

ಮೈಕ್ರೋ ಫೈನಾನ್ಸ್ ಸುಗ್ರಿವಾಜ್ಞೆಗೆ ಅಂಕಿತ ಹಾಕದ ರಾಜ್ಯಪಾಲರು : ಸರ್ಕಾರಕ್ಕೆ ಹಿನ್ನಡೆ

ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…

55 minutes ago

ಚಿತ್ರದುರ್ಗ APMC | ಶೇಂಗಾ, ಕಡಲೆ ಸೇರಿದಂತೆ ಇತರೆ ಉತ್ಪನ್ನಗಳ ಫೆಬ್ರವರಿ 07 ರ ಮಾರುಕಟ್ಟೆ ಧಾರಣೆ ವಿವಿರ ಇಲ್ಲಿದೆ…!

  ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…

1 hour ago

ಚಿತ್ರದುರ್ಗದ ಅಳಿಯ ಡಾಲಿ ಮೇಲೆ ದರ್ಶನ್ ಫ್ಯಾನ್ಸ್ ಗರಂ : ಫುಲ್ ಟ್ರೋಲ್..!

ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…

4 hours ago

ಮೂಡಾ ಅಪ್ಡೇಟ್: ಸಿಎಂ ಸಿದ್ದರಾಮಯ್ಯರಿಗೆ ರಿಲೀಫ್ ನೀಡಿದ ಹೈಕೋರ್ಟ್

ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…

4 hours ago

ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ

ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…

11 hours ago

ಫೆಬ್ರವರಿ 10ಕ್ಕೆ ಕರ್ನಾಟಕದಲ್ಲಿ ಕುಂಭಮೇಳ : ಹೇಗಿದೆ ತಯಾರಿ..?

  144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…

20 hours ago