Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಪ್ರಾಥಮಿಕ ಶಾಲಾ ಪಠ್ಯದಲ್ಲಿ ಕೆಂಪೇಗೌಡರ ಪಾಠ : ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದೇನು..?

ಡಿಕೆ ಶಿವಕುಮಾರ್
---Advertisement---

ಬೆಂಗಳೂರು; ಪ್ರಾಥಮಿಕ ಶಾಲಾ ಪಠ್ಯದಲ್ಲಿ ಕೆಂಪೇಗೌಡರ ಕುರಿತು ಒಂದು ಪಾಠ ಸೇರಿಸಲು ಸರ್ಕಾರ ತೀರ್ಮಾನ ಮಾಡಿದೆ. ಈ ಸಂಬಂಧ ಶಿಕ್ಷಣ ಇಲಾಖೆ ಸಚಿವ ಮಧು ಬಂಗಾರಪ್ಪ ಅವರಿಗೆ ತಿಳಿಸುತ್ತೇನೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಅವರು ಹೇಳಿದ್ದಾರೆ. ನಾಡಪ್ರಭು ಕೆಂಪೇಗೌಡರ 516ನೇ ಜಯಂತಿಯನ್ನು ಇಂದು ಆಚರಣೆ ಮಾಡಲಾಯ್ತು. ಈ ವೇಳೆ ಕೆಂಪೇಗೌಡರ ಬಗ್ಗೆ ಮುಂದಿನ ಪೀಳಿಗೆಗೂ ತಿಳಿಯಲಿ ಎಂಬ ಉದ್ದೇಶದಿಂದ ಈ ನಿರ್ಧಾರ ಮಾಡಲಾಗಿದೆ.

ಜೂನ್ 27ರಂದು ಕೆಂಪೇಗೌಡ ಜನ್ಮದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಗುತ್ತದೆ. ಬಾಬು ಜಗಜೀವನ್ ರಾಮ್ ಭವನದಲ್ಲಿ ಕಾರ್ಯಕ್ರಮ ನಡೆಯುತ್ತದೆ. ಕೆಂಪೇಗೌಡ ಪ್ರಾಧಿಕಾರ ನಿರ್ಮಾಣಕ್ಕೆ ಸುಮ್ಮನಹಳ್ಳಿಯಲ್ಲಿ ಐದು ಎಕರೆ ಜಮೀನು ಖರೀದಿಸಲಾಗಿದೆ. ಹೀಗಾಗಿ ಕೆಂಪೇಗೌಡರ ಜಯಂತಿಯಂದೇ ಭೂಮಿ ಪೂಜೆ ನೆರವೇರಿಸಲಾಗುತ್ತದೆ. ನಾಡಪ್ರಭು ಕೆಂಪೇಗೌಡ ಅವರ ಹೆಸರಿನಲ್ಲಿ ಸಂಸ್ಥೆಗಳು ಮತ್ತು ಎಲ್ಲಾ ವರ್ಗದ ಸಾಧಕರಿಗೆ ಪ್ರಶಸ್ತಿ ನೀಡಿಗೌರವಿಸಲಾಗುತ್ತದೆ. ಈ ಸಂಬಂಧ ಸಮಿತಿಯನ್ನು ರಚಿಸಲಾಗುತ್ತದೆ ಎಂದಿದ್ದಾರೆ.

ಇದೆ ವೇಳೆ, ಪಠ್ಯ ಪುಸ್ತಕದಲ್ಲಿ ಕೆಂಪೇಗೌಡರ ಹೆಸರನ್ನು ಸೇರಿಸುವ ಬಗ್ಗೆ ಮಾತನಾಡಿದ್ದಾರೆ. ನಮ್ಮ ಮೆಟ್ರೋಗೆ ಕೆಂಪೇಗೌಡ ಮೆಟ್ರೋ ಅಂತ ಹೆಸರಿಡಬೇಕೆಂದು ಮನವಿ ಸಲ್ಲಿಸಿದ್ದಾರೆ. ಆದರೆ ನಮ್ಮ ನಿಮ್ಮ ಮೆಟ್ರೋ ಅಷ್ಟೇ. ವಿಮಾನ ನಿಲ್ದಾಣದ ಬಳಿಕ ಕೆಂಪೇಗೌಡರ ಪ್ರತಿಮೆ ನಿರ್ಮಿಸಿ ಹೋದರು. ಆದರೆ, ಹಣ ನೀಡಿಲ್ಲ. ಈಗ ನಾವೆಲ್ಲ ಇದನ್ನು ಕ್ಲಿಯರ್ ಮಾಡುತ್ತಿದ್ದೇವೆ. ದೆಹಲಿಯಲ್ಲಿ ಕೆಂಪೇಗೌಡರ ಪ್ರತಿಮೆ ನಿರ್ಮಾಣ ಮಾಡುವ ವಿಚಾರವಾಗಿ ಮಾತನಾಡಿದ ಅವರು, ನಾವು ಅಲ್ಲಿಗೆ ಹೋಗಿ ಪ್ರತಿಮೆ ನಿರ್ಮಿಸಲು ಆಗಲ್ಲ. ದೆಹಲಿ ಸಿಎಂ ಮತ್ತು ಅಲ್ಲಿನ ಸರ್ಕಾರಕ್ಕೆ ಮನವಿ ಮಾಡಬೇಕಾಗುತ್ತದೆ. ಈ ಬಗ್ಗೆ ಎಲ್ಲಾ ಸಂಸದರಿಗೂ ನಾನು ಮನವಿ ಮಾಡುತ್ತೇನೆ ಎಂದಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment