Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸಡಗರ ಸಂಭ್ರಮದಿಂದ ನೆರವೇರಿದ ಶ್ರೀ ಮಾವಿನಹಳ್ಳಿ ಬಸವೇಶ್ವರ ಸ್ವಾಮಿಯ ಕೆಂಡಾರ್ಚನೆ, ನಾಳೆ ರಥೋತ್ಸವ

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಚಿತ್ರದುರ್ಗ, ಮಾರ್ಚ್. 18 : ತಾಲ್ಲೂಕಿನ ಹಿರೇಗುಂಟನೂರು ಹೋಬಳಿಯ ಭೀಮಸಮುದ್ರ ಮಜುರೆ ಬಸವಾಪುರದ ಶ್ರೀ ಮಾವಿನಹಳ್ಳಿ ಬಸವೇಶ್ವರ ಸ್ವಾಮಿಯ ರಥೋತ್ಸವದ ಅಂಗವಾಗಿ ಇಂದು ಸ್ವಾಮಿಯ ಕೆಂಡಾರ್ಚನೆ ಕಾರ್ಯಕ್ರಮ ನಡೆಯಿತು.

ಇಂದು ಬೆಳಿಗ್ಗೆ ಸ್ವಾಮಿಗೆ ಹೂವಿನ ಉತ್ಸವ ನಡೆದಿದ್ದು, ನಂತರ ಪಲ್ಲಕ್ಕಿಯಲ್ಲಿ ಸ್ವಾಮಿಯನ್ನು ಕುಳ್ಳರಿಸಿ ದೇವಾಲಯದ ಸುತ್ತಾ-ಮುತ್ತಾ ಪ್ರದೇಶದಲ್ಲಿ ಮೆರವಣಿಗೆಯನ್ನು ನಡೆಸಲಾಯಿತು. ರಥೋತ್ಸವದ ಅಂಗವಾಗಿ ಸ್ವಾಮಿಗೆ ಕಂಕಣಧಾರಣೆ, ಆಶ್ವೋತ್ಸವ, ವೃಷಭೋತ್ಸವ ಕಾರ್ಯಕ್ರಮ ನಡೆಯಿತು.

ಕೆಂಡಾರ್ಚನೆ ಸಮಯದಲ್ಲಿ ಕಡೂರಿನಿಂದ ಬಂದಿದ್ದ ಚನ್ನವೀರಪ್ಪ ಮತ್ತು ತಂಡದವರು ಸ್ವಾಮಿಯ ಮುಂದೆ ವೀರಭದ್ರ ಸ್ವಾಮಿಯ ಒಡಪುಗಳನ್ನು ಹೇಳುವುದರ ಮೂಲಕ ಪಲ್ಲಕ್ಕಿಯ ಮೆರವಣಿಗೆಯನ್ನು ನಡೆಸಲಾಯಿತು. ಮೆರವಣಿಗೆಯ ದಾರಿಯುದ್ದಕ್ಕೂ ಆಗಮಿಸಿದ ಭಕ್ತಾಧಿಗಳು ಮಾವಿನಹಳ್ಳಿ ಬಸವೇಶ್ವರ ಮಹಾರಾಜ್ ಕೀ ಜೈ, ವೀರಭದ್ರ ಸ್ವಾಮಿಜೀ ಕೀ ಎಂಬ ಘೋಷಣೆಗಳು ಕೇಳಿ ಬಂದವು.

ಸ್ವಾಮಿಯನ್ನು ಕುಳ್ಳರಿಸಿದ ಪಲ್ಲಕ್ಕಿಯನ್ನು ವಿವಿಧ ರೀತಿಯ ಹೂಗಳಿಂದ ಅಲಂಕಾರ ಮಾಡಲಾಗಿತ್ತು. ಅದರಲ್ಲಿ ಸ್ವಾಮಿಯ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಿ ಮೆರವಣಿಗೆಯನ್ನು ನಡೆಸಲಾಯಿತು. ನಂತರ ದೇವಾಲಯದ ಆವರಣದಲ್ಲಿ ನಿರ್ಮಾಣ ಮಾಡಲಾದ ಕೆಂಡದ ಕುಂಡದಲ್ಲಿ ಸ್ವಾಮಿಯ ಪಲ್ಲಕ್ಕಿಯನ್ನು ಹೊತ್ತ ಭಕ್ತಾಧಿಗಳು ಅದರ ಮೇಲೆ ಆಗಮಿಸುವುದರ ಮೂಲಕ ಕೆಂಡಾರ್ಚನೆ ಕಾರ್ಯಕ್ರಮವನ್ನು ನೇರವೇರಿಸಲಾಯಿತು.

ಮಾರ್ಚ್ 19 ರಂದು ಸಂಜೆ 4 ಗಂಟೆಗೆ ಸ್ವಾಮಿಗೆ ಹೂವಿನ ಪಲ್ಲಕ್ಕಿ ಉತ್ಸವದ ನಂತರ 5 ಗಂಟೆಗೆ ಶ್ರೀ ಸ್ವಾಮಿಯ ರಥೋತ್ಸವ ಕಾರ್ಯಕ್ರಮ ನಡೆಯಲಿದೆ. ಮಾ.20 ರಂದು ಸಂಜೆ 5 ಕ್ಕೆ ಕಂಕಣ ವಿಸರ್ಜನೆ ಹಾಗೂ ಮಹಾ ಮಹಾಮಂಗಳಾರತಿಯೊಂದಿಗೆ ಸ್ವಾಮಿಯ ಸೇವಾ ಕಾರ್ಯಕ್ರಮ ಮುಕ್ತಾಯವಾಗಲಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...