Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕೀನ್ಯಾದಲ್ಲಿ ಭೀಕರ ರಸ್ತೆ ಅಪಘಾತ : 48 ಮಂದಿ ಸಾವು

---Advertisement---

ಸುದ್ದಿಒನ್

ಆಫ್ರಿಕಾದ ಕೀನ್ಯಾದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಟ್ರಕ್ ನಿಯಂತ್ರಣ ತಪ್ಪಿ ವಾಹನಗಳಿಗೆ ಗುದ್ದಿ ಪಾದಚಾರಿಗಳ ಮೇಲೆ ನುಗ್ಗಿ ಅವಾಂತರ ಸೃಷ್ಟಿಸಿದೆ. ಈ ಅಪಘಾತದಲ್ಲಿ ಕನಿಷ್ಠ 48 ಜನರು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು 30 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಭಾರತೀಯ ಕಾಲಮಾನ ಶುಕ್ರವಾರ ರಾತ್ರಿ ಪಶ್ಚಿಮ ಕೀನ್ಯಾದ ಜನನಿಬಿಡ ಲೊಂಡಿಯಾನಿ ಜಂಕ್ಷನ್‌ನಲ್ಲಿ ಅಪಘಾತ ಸಂಭವಿಸಿದೆ.

ಟ್ರಕ್ ನಿಯಂತ್ರಣ ತಪ್ಪಿ ಇತರ ವಾಹನಗಳಿಗೆ ಡಿಕ್ಕಿ ಹೊಡೆದು ಪಾದಚಾರಿಗಳ ಮೇಲೆ ಹರಿದಿದೆ. ಇದರಿಂದ ಹತ್ತಾರು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಇದುವರೆಗೆ 48 ಜನರು ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯ ಪೊಲೀಸ್ ಕಮಾಂಡರ್ ಜೆಫ್ರಿ ಮಾಯೆಕ್ ಹೇಳಿದ್ದಾರೆ.

ಇನ್ನೂ 30 ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಅಪಘಾತಕ್ಕೆ ಕಾರಣವಾದ ಲಾರಿಯಲ್ಲಿ ಒಬ್ಬಿಬ್ಬರು ಸಿಕ್ಕಿಬಿದ್ದಿದ್ದಾರೆ ಎನ್ನಲಾಗಿದೆ. ಅಪಘಾತ ಸ್ಥಳದಲ್ಲಿ ಪ್ರತಿಕೂಲ ವಾತಾವರಣವಿದ್ದು, ಟ್ರಕ್ ಡಿಕ್ಕಿಯಾಗಿ ಹಲವು ಮಿನಿ ಬಸ್ಸುಗಳು ನಜ್ಜುಗುಜ್ಜಾಗಿವೆ. ವಾಹನಗಳೊಳಗೆ ಸಿಲುಕಿರುವ ಜನರನ್ನು ಬಹಳ ಕಷ್ಟಪಟ್ಟು ಹೊರ ತೆಗೆಯಲಾಗುತ್ತಿದೆ. ಗಂಭೀರವಾಗಿ ಗಾಯಗೊಂಡ 30 ಜನರನ್ನು ವಿವಿಧ ಆಸ್ಪತ್ರೆಗಳಿಗೆ ರವಾನಿಸಲಾಗಿದೆ ಎಂದು ಪೊಲೀಸ್ ಕಮಾಂಡರ್ ತಿಳಿಸಿದ್ದಾರೆ.  ಕೆರಿಚೋ ಮತ್ತು ನಕುರು ಪಟ್ಟಣಗಳನ್ನು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದೆ.

ಕೆರಿಚೋ ಕಡೆಗೆ ಹೋಗುತ್ತಿದ್ದ ಟ್ರಕ್ ನಿಯಂತ್ರಣ ಕಳೆದುಕೊಂಡು ಎಂಟು ಮಿನಿ ಬಸ್‌ಗಳು, ಹಲವಾರು ದ್ವಿಚಕ್ರ ವಾಹನಗಳು ಮತ್ತು ರಸ್ತೆ ಬದಿಯಲ್ಲಿದ್ದ ಜನರಿಗೆ ಡಿಕ್ಕಿ ಹೊಡೆದಿದೆ ಎಂದು ರಿಫ್ಟ್ ವ್ಯಾಲಿ ಪ್ರಾದೇಶಿಕ ಪೊಲೀಸ್ ಕಮಾಂಡರ್ ಟಾಮ್ ಬೊಯೊ ಓಡೆರೊ ಹೇಳಿದ್ದಾರೆ. ಘಟನೆಯ ಬಗ್ಗೆ ಕೀನ್ಯಾ ಅಧ್ಯಕ್ಷ ವಿಲಿಯಂ ರುಟೊ ಸಂತಾಪ ವ್ಯಕ್ತಪಡಿಸಿದ್ದಾರೆ. ಅಪಘಾತದ ಬಗ್ಗೆ ತನಿಖೆಯನ್ನು ಪ್ರಾರಂಭಿಸಲಾಗುವುದು ಎಂದು ಕೀನ್ಯಾದ ಸಾರಿಗೆ ಸಚಿವ ಕಿಪ್ಶುಂಬಾ ಮುರ್ಕೊಮೆನ್ ಘೋಷಿಸಿದ್ದಾರೆ.

ಕೆರಿಚೋ ಕೌಂಟಿ ಆಸ್ಪತ್ರೆಯ ಹಿರಿಯ ಡಾ. ಕಾಲಿನ್ಸ್ ಅವರು 45 ಮೃತ ದೇಹಗಳನ್ನು ತಮ್ಮ ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದೆ  ಮತ್ತು ಕೆಲವನ್ನು ಇತರ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದೆ ಎಂದು ತಿಳಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment