Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನಟ ಸುಶಾಂತ್ ಆತ್ಮಹತ್ಯೆ ಮಾಡಿಕೊಂಡ ಮನೆ ಖರೀದಿಸಿದ ‘ಕೇರಳ ಸ್ಟೋರಿ’ ನಟಿ

---Advertisement---

2020ರಲ್ಲಿ ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ತಮ್ಮ ನಿವಾಸದಲ್ಲಿಯೇ ಆತ್ಮಹತ್ಯೆಗೆ ಶರಣಾಗಿದ್ದರು. ಅಂದಿನಿಂದ ಇಂದಿನವರೆಗೂ ಆ ಅಪಾರ್ಟ್ಮೆಂಟ್ ಖಾಲಿಯಾಗಿಯೇ ಉಳಿದಿತ್ತು. ಯಾರು ಕೂಡ ಖರೀದಿಸುವ ಸಾಹಸ ಮಾಡಿರಲಿಲ್ಲ. ಇದೀಗ ಅದಾ ಶರ್ಮಾ ಈ ಅಪಾರ್ಟ್ಮೆಂಟ್ ಖರೀದಿಸಿದ್ದಾರೆ. ಸುಶಾಂತ್ ವಾಸವಾಗಿದ್ದು 4 ಬಿಎಚ್​ಕೆ ಮನೆ. ಸಮುದ್ರಕ್ಕೆ ಮುಖ ಮಾಡಿ ಈ ಮನೆ ಇದ್ದು, 2500 ಸ್ಕ್ವೇರ್ ಫೀಟ್ ಇದೆ. 6ನೇ ಅಂತಸ್ತಿನಲ್ಲಿ ಈ ಮನೆ ಇದೆ. 2022ರಲ್ಲಿ ಈ ಮನೆ ಮಾರಾಟದ ಬಗ್ಗೆ ಸುದ್ದಿ ಬಿತ್ತರ ಆಗಿತ್ತು.

ದಿ ಕೇರಳ ಸ್ಟೋರಿ ಸಿನಿಮಾ ಮೂಲಕ ಅದಾ ಶರ್ಮಾ ಸಿಕ್ಕಾಪಟ್ಟೆ ಫೇಮಸ್ ಆಗಿದ್ದರು. ಇದೀಗ ಸುಶಾಂತ್ ಅಪಾರ್ಟ್ಮೆಂಟ್ ಖರೀದಿ ಮಾಡುವ ಮೂಲಕ ಮತ್ತೊಮ್ಮೆ ಸುದ್ದಿಯಾಗಿದ್ದಾರೆ. ಮುಂಬೈನ ಮೋಂಟ್ ಬ್ಲಾಂಕ್ ಅಪಾರ್ಟ್ಮೆಂಟ್ ನಲ್ಲಿ ಸುಶಾಂತ್ ಉಳಿದುಕೊಂಡಿದ್ದರು. ಇದೇ ಫ್ಲ್ಯಾಟ್ ಅನ್ನು ಈಗ ಅದಾ ಶರ್ಮಾ ಖರೀದಿ ಮಾಡಿದ್ದಾರೆ.

ಈ ಬಗ್ಗೆ ಮಾತನಾಡಿರುವ ಅದಾ ಶರ್ಮಾ, ನಾನು ಆ ಮನೆ ನೋಡಲು ಹೋದಾಗ ಮಾಧ್ಯಮದವರ ಸಂಪೂರ್ಣ ಗಮನ ನನ್ನ ಮೇಲಿತ್ತು. ಖಾಸಗಿ ವಿಚಾರಗಳನ್ನು ನಾನು ನನ್ನಲ್ಲೇ ಇಟ್ಟುಕೊಳ್ಳಲು ಬಯಸುತ್ತೇನೆ. ನನ್ನ ಸಿನಿಮಾಗಳ ವುಚಾರವಾಗಿ ಮಾತ್ರ ಸುದ್ದಿಯಲ್ಲಿ ಇರುವುದಕ್ಕೆ ಬಯಸುತ್ತೇನೆ. ಉಳಿದ ವಿಚಾರಗಳಲ್ಲಿ ಗೌಪ್ಯತೆ ಕಾಪಾಡಿಕೊಳ್ಳುತ್ತೇನೆ. ಈ ಜಗತ್ತಿನಲ್ಲಿ ಇಲ್ಲದ ವ್ಯಕ್ತಿಯ ಬಗ್ಗೆ ನಾನು ಮಾತನಾಡುವುದಕ್ಕೆ ಇಷ್ಟ ಪಡುವುದಿಲ್ಲ, ಅವರ ಬಗ್ಗೆ ನನಗೆ ತುಂಬಾ ಗೌರವ ಇದೆ. ಹೀಗಾಗಿಯೇ ನಾನು ಅವರ ಮನೆಯನ್ನು ಖರೀದಿಸಿದ್ದೇನೆ ಎಂದಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment