Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನಟ ಸುಶಾಂತ್ ಆತ್ಮಹತ್ಯೆ ಮಾಡಿಕೊಂಡ ಮನೆ ಖರೀದಿಸಿದ ‘ಕೇರಳ ಸ್ಟೋರಿ’ ನಟಿ

Facebook
Twitter
Telegram
WhatsApp

2020ರಲ್ಲಿ ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ತಮ್ಮ ನಿವಾಸದಲ್ಲಿಯೇ ಆತ್ಮಹತ್ಯೆಗೆ ಶರಣಾಗಿದ್ದರು. ಅಂದಿನಿಂದ ಇಂದಿನವರೆಗೂ ಆ ಅಪಾರ್ಟ್ಮೆಂಟ್ ಖಾಲಿಯಾಗಿಯೇ ಉಳಿದಿತ್ತು. ಯಾರು ಕೂಡ ಖರೀದಿಸುವ ಸಾಹಸ ಮಾಡಿರಲಿಲ್ಲ. ಇದೀಗ ಅದಾ ಶರ್ಮಾ ಈ ಅಪಾರ್ಟ್ಮೆಂಟ್ ಖರೀದಿಸಿದ್ದಾರೆ. ಸುಶಾಂತ್ ವಾಸವಾಗಿದ್ದು 4 ಬಿಎಚ್​ಕೆ ಮನೆ. ಸಮುದ್ರಕ್ಕೆ ಮುಖ ಮಾಡಿ ಈ ಮನೆ ಇದ್ದು, 2500 ಸ್ಕ್ವೇರ್ ಫೀಟ್ ಇದೆ. 6ನೇ ಅಂತಸ್ತಿನಲ್ಲಿ ಈ ಮನೆ ಇದೆ. 2022ರಲ್ಲಿ ಈ ಮನೆ ಮಾರಾಟದ ಬಗ್ಗೆ ಸುದ್ದಿ ಬಿತ್ತರ ಆಗಿತ್ತು.

ದಿ ಕೇರಳ ಸ್ಟೋರಿ ಸಿನಿಮಾ ಮೂಲಕ ಅದಾ ಶರ್ಮಾ ಸಿಕ್ಕಾಪಟ್ಟೆ ಫೇಮಸ್ ಆಗಿದ್ದರು. ಇದೀಗ ಸುಶಾಂತ್ ಅಪಾರ್ಟ್ಮೆಂಟ್ ಖರೀದಿ ಮಾಡುವ ಮೂಲಕ ಮತ್ತೊಮ್ಮೆ ಸುದ್ದಿಯಾಗಿದ್ದಾರೆ. ಮುಂಬೈನ ಮೋಂಟ್ ಬ್ಲಾಂಕ್ ಅಪಾರ್ಟ್ಮೆಂಟ್ ನಲ್ಲಿ ಸುಶಾಂತ್ ಉಳಿದುಕೊಂಡಿದ್ದರು. ಇದೇ ಫ್ಲ್ಯಾಟ್ ಅನ್ನು ಈಗ ಅದಾ ಶರ್ಮಾ ಖರೀದಿ ಮಾಡಿದ್ದಾರೆ.

ಈ ಬಗ್ಗೆ ಮಾತನಾಡಿರುವ ಅದಾ ಶರ್ಮಾ, ನಾನು ಆ ಮನೆ ನೋಡಲು ಹೋದಾಗ ಮಾಧ್ಯಮದವರ ಸಂಪೂರ್ಣ ಗಮನ ನನ್ನ ಮೇಲಿತ್ತು. ಖಾಸಗಿ ವಿಚಾರಗಳನ್ನು ನಾನು ನನ್ನಲ್ಲೇ ಇಟ್ಟುಕೊಳ್ಳಲು ಬಯಸುತ್ತೇನೆ. ನನ್ನ ಸಿನಿಮಾಗಳ ವುಚಾರವಾಗಿ ಮಾತ್ರ ಸುದ್ದಿಯಲ್ಲಿ ಇರುವುದಕ್ಕೆ ಬಯಸುತ್ತೇನೆ. ಉಳಿದ ವಿಚಾರಗಳಲ್ಲಿ ಗೌಪ್ಯತೆ ಕಾಪಾಡಿಕೊಳ್ಳುತ್ತೇನೆ. ಈ ಜಗತ್ತಿನಲ್ಲಿ ಇಲ್ಲದ ವ್ಯಕ್ತಿಯ ಬಗ್ಗೆ ನಾನು ಮಾತನಾಡುವುದಕ್ಕೆ ಇಷ್ಟ ಪಡುವುದಿಲ್ಲ, ಅವರ ಬಗ್ಗೆ ನನಗೆ ತುಂಬಾ ಗೌರವ ಇದೆ. ಹೀಗಾಗಿಯೇ ನಾನು ಅವರ ಮನೆಯನ್ನು ಖರೀದಿಸಿದ್ದೇನೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹಿರಿಯೂರು | ಬೈಕ್ ಅಪಘಾತ, ಸ್ಥಳದಲ್ಲೇ ಓರ್ವ ಸಾವು..!

ಸುದ್ದಿಒನ್,  ಹಿರಿಯೂರು, ಮೇ. 05 : ನಗರದ ರಾಷ್ಟ್ರೀಯ ಹೆದ್ದಾರಿ ನಾಲ್ಕರ ಆಲೂರು ಕ್ರಾಸ್ ಚಾನೆಲ್ ಬಳಿ ಸ್ಕೂಟಿ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಾಯಗೊಂಡ

ಪ್ರಜ್ವಲ್ ರೇವಣ್ಣ ಜೊತೆ ವಿಡಿಯೋದಲ್ಲಿದ್ದ ಮಹಿಳಾ ಅಧಿಕಾರಿಗಳಿಗೂ ಸಂಕಷ್ಟ : ಎಸ್ಐಟಿಯಿಂದ ನೋಟೀಸ್

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋದಲ್ಲಿ ಸರ್ಕಾರಿ ಅಧಿಕಾರಿಗಳು ಕೂಡ ಇರುವುದು ಗಮನಕ್ಕೆ ಬಂದಿದೆ. ಪೊಲೀಸ್ ಅಧಿಕಾರಿ, ಅರಣ್ಯಾಧಿಕಾರಿ, ಬೆಂಗಳೂರಿನ ಎಇಇ ಫೋಟೋ, ವಿಡಿಯೋಗಳು ವೈರಲ್ ಆಗಿದ್ದವು. ಇದೀಗ ಅವರಿಗೆಲ್ಲಾ ಟೆನ್ಶನ್ ಶುರುವಾಗಿದೆ. ಎಸ್ಐಟಿ

ಈಗ ನಡೆಯುತ್ತಿರುವ ಲೋಕಸಭಾ ಚುನಾವಣೆ ಎರಡನೇ ಸ್ವಾತಂತ್ರ್ಯ ಹೋರಾಟ : ಮುಖ್ಯಮಂತ್ರಿ ಸಿದ್ದರಾಮಯ್ಯ

  ಬೆಳಗಾವಿ , ಮೇ 05 : ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ 400 ಸ್ಥಾನಗಳನ್ನು ನೀಡಿದರೆ ಸಂವಿಧಾನವನ್ನು ಬದಲಾವಣೆ ಮಾಡುವುದಾಗಿ ಬಿಜೆಪಿ ಹಾಗೂ ಆರ್ ಎಸ್ ಎಸ್ ಹೇಳುತ್ತಿದ್ದು, ಈ ಚುನಾವಣೆ ಎರಡನೇ ಸ್ವಾತಂತ್ರ್ಯ

error: Content is protected !!