ಬೆಂಗಳೂರು: ರಂಗಭೂಮಿ ನಟ, ಚಿತ್ರ ನಟ, ಕಲಾ ನಿರ್ದೆಶಕ ದಿನೇಶ್ ಮಂಗ್ಳೂರು ಇಂದು ನಿಧನರಾಗಿದ್ದಾರೆ. ಇಂದು ಬೆಳಗಿನ ಜಾವ ಕುಂದಾಪುರದಲ್ಲಿ ಕೊನೆಯುಸಿರೆಳೆದಿದ್ದಾರೆ. ರಿಕ್ಕಿ, ಉಳಿದವರು ಕಂಡಂತೆ, ಕೆಜಿಎಫ್ ಸೇರಿದಂತೆ ಹಲವು ಚಿತ್ರಗಳಲ್ಲಿ ಅಭಿನಯಿಸಿದ್ದ ನಟ, ಎಲ್ಲರ ಮನಸ್ಸನ್ನ ಗೆದ್ದಿದ್ದರು. ಅದರಲ್ಲೂ ಕೆಜಿಎಫ್ ಬಾಂಬೆ ಡಾನ್ ‘ಶೆಟ್ಟಿ’ “ಕೊತ್ವಾಲನ ರೈಟ್ ಹ್ಯಾಂಡ್ ‘ಸೀತಾರಾಮ್ ಶೆಟ್ಟಿ’ ಪಾತ್ರದಲ್ಲಿ ಮಿಂಚಿದ್ದರು. ಕೆಜಿಎಫ್ ಸಿನಿಮಾದಲ್ಲಿ ಸಾಕಷ್ಟು ಖ್ಯಾತಿಯನ್ನ ಪಡೆದಿದ್ದರು.
ದಿನೇಶ್ ಮಂಗಳೂರು ಅವರು ಒಂದು ವರ್ಷದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಈ ಹಿನ್ನೆಲೆ ದಿನೇಶ್ ಮಂಗಳೂರು ಅವರಿಗೆ ಚಿಕಿತ್ಸೆಯನ್ನು ಕೊಡಿಸಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಸಾವನ್ನಪ್ಪಿದ್ದಾರೆ. ದಿನೇಶ್ ಮಂಗಳೂರು ಅವರ ನಿಧನಕ್ಕೆ ಚಿತ್ರರಂಗದವರು ಸಂತಾಪ ಸೂಚಿಸಿದ್ದಾರೆ. ಅವರ ಕುಟುಂಬಸ್ಥರು ದುಃಖತಪ್ತರಾಗಿದ್ದಾರೆ.

ಇಂದು ಸಂಜೆ ಪಾರ್ಥಿವ ಶರೀರ ಬೆಂಗಳೂರಿಗೆ ಬರಲಿದ್ದು, ನಾಳೆ ಅಂತ್ಯಸಂಸ್ಕಾರ ನಡೆಯಲಿದೆ. ಸುಮನಹಳ್ಳಿ ರುದ್ರಭೂಮಿಯಲ್ಲಿ ಅಂತ್ಯ ಸಂಸ್ಕಾರ ನಡೆಯಲಿದೆ. ಅಂತಿಮ ದರ್ಶನದ ವೇಳೆ ಹಕವು ಗಣ್ಯರು ಅಂತಿಮ ದರ್ಶನ ಪಡೆಯಲಿದ್ದಾರೆ. ಬಳಿಕ ನಾಳೆ ಅಂತ್ಯ ಸಂಸ್ಕಾರ ನಡೆಯಲಿದೆ.



















