ಹಾಸನ ಸಮಾವೇಶಕ್ಕೆ ತೆರಳುತ್ತಿದ್ದಾಗ ಕೆ.ಹೆಚ್ ಮುನಿಯಪ್ಪ ಕಾರು ಅಪಘಾತ : ಅಪಾಯದಿಂದ ಪಾರು..!

ಹಾಸನದಲ್ಲಿ ಇಂದು ಕಾಂಗ್ರೆಸ್ ನಿಂದ ಬೃಹತ್ ಸಮಾವೇಶ ನಡೆಯುತ್ತಿದೆ. ಸಿಎಂ, ಡಿಸಿಎಂ, ಸಚಿವರು, ಶಾಸಕರು, ಕಾರ್ಯಕರ್ತರೆಲ್ಲಾ ಈ ಸಮಾವೇಶದಲ್ಲಿ ನೆರೆದಿದ್ದಾರೆ. ಸಮಾವೇಶಕ್ಕೆಂದು ಹೋಗುತ್ತಿದ್ದಾಗ ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ ಅವರ ಕಾರು ಅಪಘಾತಕ್ಕೀಡಾದ ಘಟನೆ ನಡೆದಿದೆ. ಆದರೆ ಅದೃಷ್ಟವಶಾತ್ ಯಾವುದೇ ರೀತಿಯ ಪ್ರಾಣ ಅಪಾಯ ಸಂಭವಿಸಿಲ್ಲ.

ಸಚಿವ ಮುನಿಯಪ್ಪ ಅವರು ಶಾಂತಿಗ್ರಾಮ ರಸ್ತೆಯ ಮೂಲಜ ಹಾಸನಕ್ಕೆ ಆಗಮಿಸುತ್ತಿದ್ದರು. ಈ ವೇಳೆ ಶುಲ್ಕ ವಸೂಲಿ ಕೇಂದ್ರದ ಬಳಿ ಹಿಂಬದಿಯಿಂದ ಬಂದ ಕಾರು ಸಚಿವರ ಕಾರಿಗೆ ಡಿಕ್ಕಿ ಹೊಡೆದಿದೆ. ಅಪಘಾತದ ಹೊಡೆತಕ್ಕೆ ಸಚುವರ ಕಾರು ಜಖಂ ಆಗಿದೆ. ಈ ಹಿನ್ನೆಲೆ ಆಹಾರ ಸಚಿವರು ಬೇರೆ ವಾಹನದಲ್ಲಿ ಹಾಸನದ ಸಮಾವೇಶ ತಲುಪಿದ್ದಾರೆ.

ಕಾಂಗ್ರೆಸ್ ಪಕ್ಷ ವಿಧಾನಸಭಾ ಚುನಾವಣೆಯಲ್ಲಿ ಬಹುಮತದೊಂದಿಗೆ ಅಧಿಕಾರವನ್ನು ಹಿಡಿದಿದೆ. ಈ ಬಾರಿಯ ಉಪಚುನಾವಣೆಯಲ್ಲೂ ಮೂರು ಕ್ಷೇತ್ರಗಳನ್ನು ತಮ್ಮದಾಗಿಸಿಕೊಂಡಿದೆ. ಈ ಕಾರಣದಿಂದ ಕಾಂಗ್ರೆಸ್ ತಮ್ಮ ಬಲ ಪ್ರದರ್ಶನ ಮಾಡುವುದಕ್ಕೆ ಹಾಸನದಲ್ಲಿ ಜನಕಲ್ಯಾಣ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮಕ್ಕೆ ರಾಜ್ಯದ ಕಾಂಗ್ರೆಸ್ ನಾಯಕರು ಎಲ್ಲರೂ ಭಾಗಿಯಾಗಿದ್ದಾರೆ. ಈ ಸಮಾವೇಶದಲ್ಲಿ ಲಕ್ಷಾಂತರ ಜನರು ಕೂಡ ಸೇರಿದ್ದಾರೆ.

 

ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಜಿ.ಪರಮೇಶ್ವರ್ ಸೇರಿದಂತೆ ಕಾಂಗ್ರೆಸ್ ನಾಯಕರು ಜ್ಯೋತಿ ಬೆಳಗುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದಾರೆ. ಈ ಕಾರ್ಯಕ್ರಮದಲ್ಲಿ ತಮ್ಮ ಸರ್ಕಾರದ ಗ್ಯಾರಂಟಿಗಳ ಯಶಸ್ಸುನ್ನು ಒತ್ತಿ ಒತ್ತಿ ಹೇಳಲಾಗಿದೆ. ವಿರೋಧ ಪಕ್ಷಗಳಿಗೆ ತಿರುಗೇಟನ್ನು ನೀಡಲಾಗಿದೆ. ಜೆಡಿಎಸ್ ಭದ್ರಕೋಟೆಯಲ್ಲಿಯೇ ಕಾಂಗ್ರೆಸ್ ಶಕ್ತಿ ಪ್ರದರ್ಶನ ಮಾಡಿದ್ದಾರೆ. ಕಾರು ಅಪಘಾತವಾದರೂ ಆಹಾರ ಸಚಿವ ಕೆ ಹೆಚ್ ಮುನಿಯಪ್ಪ ಅವರು ಕೂಡ ಸಮಾವೇಶದಲ್ಲಿ ಭಾಗಿಯಾಗಿದ್ದಾರೆ.

suddionenews

Recent Posts

ವಿರಾಟ್ ಕೊಹ್ಲಿ ಸೂಪರ್ ಸೆಂಚುರಿ : ಪಾಕಿಸ್ತಾನವನ್ನು ಹೀನಾಯವಾಗಿ ಸೋಲಿಸಿದ ಭಾರತ

  ಸುದ್ದಿಒನ್ ಚಾಂಪಿಯನ್ಸ್ ಟ್ರೋಫಿಯ ಎರಡನೇ ಪಂದ್ಯದಲ್ಲಿ ಭಾರತ ಪಾಕಿಸ್ತಾನವನ್ನು 6 ವಿಕೆಟ್‌ಗಳಿಂದ ಹೀನಾಯವಾಗಿ ಸೋಲಿಸಿತು. ಇದರೊಂದಿಗೆ, ತಂಡವು 2017…

19 minutes ago

ಕಬೀರಾನಂದಾಶ್ರಮಕ್ಕೆ ಯಾವುದೆ ಜಾತಿ, ಧರ್ಮ ಇಲ್ಲ, ಎಲ್ಲರೂ ಸಮಾನರು : ಡಾ.ಬಸವಕುಮಾರ ಸ್ವಾಮೀಜಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ. ಫೆ. 23…

44 minutes ago

ಸಚಿನ್ ದಾಖಲೆ ಮುರಿದ ಕಿಂಗ್ ಕೊಹ್ಲಿ : ವಿಶೇಷತೆ ಏನು ಗೊತ್ತಾ?

  ಸುದ್ದಿಒನ್ ವಿರಾಟ್ ಕೊಹ್ಲಿ 14,000 ಏಕದಿನ ರನ್ ಗಳಿಸಿದ ವೇಗದ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗುವ ಮೂಲಕ ಸಚಿನ್…

1 hour ago

ವಿಜಯೇಂದ್ರ ನೇತೃತ್ವದಲ್ಲಿಯೇ ತಾಲೂಕು, ಜಿಲ್ಲಾ ಪಂಚಾಯತಿಗೆ ಸ್ಪರ್ಧೆ : ರೇಣುಕಾಚಾರ್ಯ

    ದಾವಣಗೆರೆ; ರಾಜ್ಯದಲ್ಲಿ ಇನ್ನೇನು ತಾಲೂಕು, ಜಿಲ್ಲಾ ಪಂಚಾಯತಿಗಳ ಚುನಾವಣೆಗೆ ದಿನಾಂಕ ಘೋಷಣೆಯಾಗಲಿದೆ. ಈ ಸಂಬಂಧ ರೇಣುಕಾಚಾರ್ಯ ಅವರು…

2 hours ago

ತುಮಕೂರಿನ ಈ ಪ್ರದೇಶಗಳಲ್ಲಿ ಫೆಬ್ರವರಿ 24 , 27 ಹಾಗೂ 28ರಂದು ವಿದ್ಯುತ್ ವ್ಯತ್ಯಯ…!

  ತುಮಕೂರು: ಬೆಸ್ಕಾಂ ತುಮಕೂರು ನಗರ ಉಪ ವಿಭಾಗ 1ರ ವ್ಯಾಪ್ತಿಯಲ್ಲಿ ಅಟಲ್ ಭೂ ಜಲ ಯೋಜನೆಯಡಿಯಲ್ಲಿ ಪ್ರತ್ಯೇಕ ಕೃಷಿ…

2 hours ago

ಭಾರತ vs ಪಾಕಿಸ್ತಾನ : 25 ವರ್ಷಗಳ ಹಳೆಯ ದಾಖಲೆ ಮುರಿದ ಕಿಂಗ್ ಕೊಹ್ಲಿ

    ಸುದ್ದಿಒನ್ ಪ್ರತಿಯೊಬ್ಬ ಭಾರತೀಯ ಅಭಿಮಾನಿಯೂ ಟೀಮ್ ಇಂಡಿಯಾದ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಬ್ಯಾಟ್‌ನಿಂದ ರನ್‌ಗಳನ್ನು ನಿರೀಕ್ಷಿಸುತ್ತಾರೆ.…

2 hours ago