Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಅಗ್ನಿವೀರ್ ಯೋಜನೆ ರದ್ದುಗೊಳಿಸಲು ಖರ್ಗೆ ಆಗ್ರಹ..!

---Advertisement---

ನವದೆಹಲಿ: ರಾಜ್ಯಸಭಾ ಅಧಿವೇಶನದಲ್ಲಿ ಅಗ್ನಿವೀರ್ ಯೋಜನೆ ಸದ್ದು ಮಾಡಿದೆ. ಇಂದು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಈ ಬಗ್ಗೆ ಒತ್ತಾಯಿಸಿದ್ದಾರೆ. ಅಗ್ನಿವೀರ್ ಯೋಜನೆಯನ್ನು ರದ್ದುಗೊಳಿಸಬೇಕೆಂದು ಒತ್ತಾಯಿಸಿದ್ದಾರೆ.

ಅಗ್ನುವೀರ್ ನಂತಹ ಯೋಜಿತವಲ್ಲದ ಮತ್ತು ತುಘಲಕಿ ಯೋಜನೆಯನ್ನು ಜಾರಿಗೆ ತರುವ ಮೂಲಕ ಯುವಕರ ನೈತಿಕ ಸ್ಥೈರ್ಯವನ್ನು ಛಿದ್ರಗೊಳಿಸಲಾಗಿದೆ. ಹೀಗಾಗಿ ಅಗ್ನಿವೀರ್ ಯೋಜನೆಯನ್ನು ರದ್ದುಗೊಳಿಸಬೇಕೆಂದು ನಾನು ಒತ್ತಾಯಿಸುತ್ತೇ ಎಂದಿದ್ದಾರೆ. ರಾಜ್ಯಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣಕ್ಕೆ ಕೃತಜ್ಞತಾ ನಿರ್ಣಯದ ಮೇಲಿನ ಚರ್ಚೆಯಲ್ಲಿ ಭಾಗವಹಿಸಿದ್ದಾಗ ಈ ವಿಚಾರ ಪ್ರಸ್ತಾಪಿಸಿದ್ದಾರೆ.

2024ರ ಲೋಕಸಭಾ ಚುನಾವಣೆಯ ಸಂವಿಧಾನವನ್ನು ಸಮಸ್ಯೆಯಾಗಿಸಿದ ಮೊದಲ ಚುನಾವಣೆಯಾಗಿದೆ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಸಂವಿಧಾನ ಇದ್ದಾಗ ಮಾತ್ರ ಚುನಾವಣೆ ನಡೆಸಬಹುದು. ಕೆಲವರು ಸಂವಿಧಾನದ ಬಗ್ಗೆ ಮಾತನಾಡುವುದನ್ನು ವಿರೋಧಿಸುತ್ತಾರೆ. ಅದನ್ನು ಚುನಾವಣಾ ವಿಷಯವಾಗಿ ಮಾಡುವುದು ಸರಿಯಲ್ಲ. ಪ್ರಧಾನಿ ನರೇಂದ್ರ ಮೋದಿ ಕೇವಲ ಘೋಷಣೆಗಳನ್ನು ನೀಡುವುದರಲ್ಲಿ ನಿಪುಣರು. ಕಳೆದ ವರ್ಷದಿಂದ ಮಣಿಪುರ ಹೊತ್ತಿ ಉರಿಯುತ್ತಿದೆ. ಆದರೆ ಆ ರಾಜ್ಯಕ್ಕೆ ಪ್ರಧಾನಿ ಯಾಕೆ ಭೇಟಿ ನೀಡಲಿಲ್ಲ..? ಪ್ರಧಾನಿ ಮೋದಿಯವರು ಚುನಾವಣಾ ಸಮಯದಲ್ಲಿ ತಮ್ಮ ಭಾಷಣದ ಮೂಲಕ ಸಮಾಜವನ್ನು ಒಡೆಯಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದ ಖರ್ಗೆ ಅವರು ಈ ಹಿಂದರ ಯಾವ ಪ್ರಧಾನಿಯೂ ಈ ರೀತಿ ಮಾಡಿರಲಿಲ್ಲ ಎಂದಿದ್ದಾರೆ.

 

ರಕ್ಷಣಾ ಆಧುನೀಕರಣದ ಭಾಗವಾಗಿ ಜೂನ್ 2022ರಲರಲಿತರಲಾದ ಅಗ್ನಿಪಥ್ ಯೋಜನೆಯಡಿ ಯುವಕರನ್ನು 4 ವರ್ಷಗಳವರೆಗೆ ನೇಮಿಸಿಕೊಳ್ಳಲಾಗುತ್ತದೆ. ಅವರನ್ನು ಅಗ್ನಿವೀರ್ ಎಂದು ಕರೆಯಲಾಗುತ್ತದೆ. ನಾಲ್ಕು ವರ್ಷಗಳ ಬಳಿಕ ಶೇಕಡ 25 ರಷ್ಡು ಅಗ್ನಿವೀರ್ ಗಳನ್ನು ಉಳಿಸಿಕೊಳ್ಳಲಾಗುತ್ತದೆ. ಉಳಿದವರನ್ನು ಕರ್ತವ್ಯದಿಂದ ತೆಗೆದುಹಾಕಲಾಗುತ್ತದೆ. ಬಳಿಕ ಅಗ್ನಿಪತ್ ನಲ್ಲಿ ಸೇವೆ ಸಲ್ಲಿಸಿದವರು ಸೇನೆಗೆ ಸಂಬಂಧಿಸಿದಂತೆ ಕೆಲಸಗಳನ್ನು ಆಯ್ಕೆ ಮಾಡಿಕೊಳ್ಳಬಹುದು ಎಂಬ ಮಾತಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ಉದ್ಯೋಗ ಸೃಷ್ಟಿ ಹಾಗೂ ಕೌಶಲ್ಯಾಭಿವೃದ್ಧಿಗೆ ವಿಶ್ವವಿದ್ಯಾಲಯಗಳು ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಕೈಗಾರಿಕಾ ಸಹಭಾಗಿತ್ವದ “ಹೈಪರ್-ಆಕ್ಟಿವ್ ಇನ್ನೋವೇಷನ್ ಹಬ್”ಗಳ ನಿರ್ಮಾಣ ಅತ್ಯಗತ್ಯ

ತೆಳ್ಳಗಿದ್ದರೆ ಮಾತ್ರ ಫಿಟ್ ಎಂದರ್ಥವಲ್ಲ: ನಿಜವಾದ ಫಿಟ್‌ನೆಸ್‌ನ ಗುರುತುಗಳೇನು? ತಜ್ಞರ ಸಲಹೆ ಇಲ್ಲಿದೆ

ಕೂದಲು ಉದುರುವಿಕೆ ತಡೆದು, ದಟ್ಟವಾಗಿ ಬೆಳೆಯಲು ಈ ‘ಸೂಪರ್‌ಫುಡ್‌’ಗಳನ್ನು ನಿಮ್ಮ ಆಹಾರದಲ್ಲಿ ತಪ್ಪದೇ ಸೇರಿಸಿ!

ಚಿತ್ರದುರ್ಗ : ಮೊಳಕಾಲ್ಮೂರಿನಲ್ಲಿ ಭೀಕರ ರಸ್ತೆ ಅಪಘಾತ : ಸೇತುವೆಗೆ ಕಾರು ಡಿಕ್ಕಿಯಾಗಿ ಇಬ್ಬರು ಸಾವು!

ಮೊಬೈಲ್‌-ಸ್ಕ್ರೀನ್‌ಗೆ ಬ್ರೇಕ್ ನೀಡಿ: ಮಾನಸಿಕ ಆರೋಗ್ಯ ಕಾಪಾಡಲು ‘ಡಿಜಿಟಲ್ ಡಿಟಾಕ್ಸ್’ ಏಕೆ ಮುಖ್ಯ?

ನೀತಿ ಕಥೆ: ನಂಬಿಕೆದ್ರೋಹಕ್ಕೆ ಕ್ಷಮೆಯಿಲ್ಲ (ಯುವರಾಜ ಮತ್ತು ಕರಡಿಯ ಕಥೆ)

Leave a Comment