Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ದೇಹದ ಮೇಲೆಲ್ಲಾ ಖರ್ಗೆಯ ಸಾಧನೆಯದ್ದೇ ಟ್ಯಾಟೂ : ಅಭಿಮಾನ ಮನಸ್ಸಲ್ಲಲ್ಲಾ ಮೈಮೇಲಿದೆ..!

Facebook
Twitter
Telegram
WhatsApp

ಸಿನಿಮಾ ಸೆಲೆಬ್ರೆಟಿಗಳಿಗೆ, ಕ್ರಿಕೆಟರ್ಸ್ ಗಳಿಗೆ ಅಭಿಮಾನಿಗಳಿರುವುದು ಸಹಜ. ರಾಜಕಾರಣಿಗಳು ಅಭಿಮಾನಿಗಳಿರುತ್ತಾರೆ‌. ಅವರ ಸಿದ್ಧಾಂತಗಳನ್ನು ಬೆಂಬಲಿಸುತ್ತಾರೆ. ಆದರೆ ಇಲ್ಲೊಬ್ಬ ಅಭಿಮಾನಿ ತನ್ನ ದೇಹದ ಮೇಲೆಲ್ಲಾ ಖರ್ಗೆ ಅವರ ಸಾಧನೆಯನ್ನೇ ಟ್ಯಾಟೂ ಹಾಕಿಸಿಕೊಂಡಿದ್ದಾರೆ. ಇದನ್ನು ಕಂಡ ಖರ್ಗೆ ಫ್ಯಾಮಿಲಿ ಶಾಕ್ ಆಗುವುದರ ಜೊತೆಗೆ ಆತನ ಅಭಿಮಾನಕ್ಕೆ ಮನಸೋತಿದೆ.

ಹಣಮಂತಪ್ಪ ಹೊಸಮನಿ ಎಂಬುವವರು ಈ ರೀತಿ ಟ್ಯಾಟೂ ಹಾಕಿಸಿಕೊಂಡಿರುವವರು. ಇವರು ಪ್ರಿಯಾಂಕ್ ಖರ್ಗೆ ಅವರ ಅಭಿಮಾನಿಯಾಗಿದ್ದಾರೆ. ಇದೀಗ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾಧನೆಯ ಬಗ್ಗೆ ಟ್ಯಾಟೂ ಹಾಕಿಸಿಕೊಂಡಿದ್ದಾರೆ. ಅಷ್ಟೇ ಅಲ್ಲ‌ ಖರ್ಗೆ ಎಂದು ಬುರುಡೆಯಲ್ಲಿ ಬರೆದುಕೊಂಡಿದ್ದಾರೆ.

ಎದೆಯ ಮೇಲೆ ಡಾ. ಖರ್ಗೆ, ಪ್ರಿಯಾಂಕ್‌ ಭಾವಚಿತ್ರ ಟ್ಯಾಟೂ ಹಾಕಿಸಿಕೊಂಡಿದ್ದಾರೆ. ತಲೆಯ ಮೇಲೆ ಪಿಕೆ ಬಾಸ್‌ ಎಂದು ಕೇಶ ವಿನ್ಯಾಸ ಮಾಡಿಸಿಕೊಂಡಿದ್ದಾರೆ. ಬೆನ್ನ ಮೇಲೆಲ್ಲಾ ಡಾ.ಮಲ್ಲಿಕಾರ್ಜುನ ಖರ್ಗೆಯವರು ರಾಜಕೀಯವಾಗಿ 5 ದಶಕಗಳ ಕಾಲ ನಡೆದು ಬಂದ ದಾರಿಯ ಮಾಹಿತಿಯನ್ನು ಟ್ಯಾಟೂ ಮೂಲಕ ಬರೆದುಕೊಂಡಿದ್ದಾರೆ.

 

ಮುತ್ಸದ್ದಿ ನಾಯಕ, ಕಲ್ಯಾಣ ಕರ್ನಾಟಕದ ಕಲ್ಯಾಣದ ಹರಿಹಾರ, ಎಐಸಿಸಿ ಅಧ್ಯಕ್ಷರಾದ ಶ್ರೀ @kharge ಅವರು ತಮ್ಮ ಸಾಧನೆ, ಜನಪರ ಕೆಲಸಗಳಿಂದಲೇ ಮೇರು ನಾಯಕರಾಗಿ ಬೆಳೆದು ನಿಂತಿದ್ದಾರೆ.

ಶೋಷಿತರ ದನಿಯಾಗಿ, ಶಕ್ತಿಯಾಗಿ, ಕಾಂಗ್ರೆಸ್ ಪಕ್ಷದ ಸಾರಥಿಯಾಗಿರುವ ಖರ್ಗೆಯವರ ಅಭಿಮಾನಿಯೊಬ್ಬರು ಅವರ ಸಾಧನೆಗಳ ಪಟ್ಟಿಯನ್ನೇ ಮೈಯಲ್ಲಿ ಹಚ್ಚೆ ಹಾಕಿಸಿಕೊಂಡಿದ್ದಾರೆ. ಇವರ ಅಭಿಮಾನಕ್ಕೆ ಶರಣು ಎಂದು ಕಾಂಗ್ರೆಸ್ ಟ್ವೀಟ್ ಕೂಡ ಮಾಡಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

ಹೆಚ್ಚುತ್ತಿರುವ ಬಿಸಿಲ ಝಳ : ಸಾರ್ವಜನಿಕರು ಅನುಸರಿಸಬೇಕಾದ ಸರಳ ಉಪಾಯಗಳ ಬಗ್ಗೆ ಮಾಹಿತಿ ನೀಡಿದ ಜಿಲ್ಲಾ ಆಯುಷ್ ಅಧಿಕಾರಿ ಡಾ.ಚಂದ್ರಕಾಂತ್ ಎಸ್.ನಾಗಸಮುದ್ರ

ಚಿತ್ರದುರ್ಗ. ಮೇ.02: ರಾಜ್ಯಾದ್ಯಂತ ಬಿಸಿಲಬೇಗೆ ದಿನೇ ದಿನೇ ಹೆಚ್ಚಾಗುತ್ತಿದ್ದು, ಇನ್ನೂ ಕೆಲವು ದಿನಗಳ ಕಾಲ ಉಷ್ಣ ಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಿಸಿಲ ಝಳವು ಮನುಷ್ಯನ ಆರೋಗ್ಯದ ಮೇಲೆ ತೀವ್ರತರವಾದ

ಕಾರ್ಮಿಕರು ಕೆಲಸದ ಜೊತೆ ಆರೋಗ್ಯದ ಕಡೆಗೂ ಹೆಚ್ಚಿನ ಗಮನ ಕೊಡಬೇಕು : ನ್ಯಾಯಾಧೀಶೆ ಬಿ.ಗೀತ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 02 : ಅನೇಕ ಸೌಲಭ್ಯಗಳಿಂದ ವಂಚಿತರಾಗಿರುವ ಅಸಂಘಟಿತ ಕಾರ್ಮಿಕರಿಗೆ ಹಕ್ಕುಗಳ ಕುರಿತು ಕಾನೂನು ಜಾಗೃತಿ

error: Content is protected !!