Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಪ್ರಧಾನಿಯಾಗಿ ಖರ್ಗೆ ಹೆಸರು ಪ್ರಸ್ತಾಪ : ಇಂಡಿಯಾ ಒಕ್ಕೂಟದಲ್ಲಿ ಒಡಕು…!

---Advertisement---

 

ನವದೆಹಲಿ:  ಇಂಡಿಯಾ ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿಯ ಬಗ್ಗೆ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್  ಪ್ರಮುಖ ಹೇಳಿಕೆಯೊಂದನ್ನು ನೀಡಿದ್ದಾರೆ. 1977ರ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ಅಭ್ಯರ್ಥಿಯ ಹೆಸರನ್ನು ಅಂತಿಮಗೊಳಿಸದೆ ಚುನಾವಣೆ ನಡೆಸಲಾಗಿತ್ತು ಎಂದು ಸ್ಮರಿಸಿದರು. 2024ರಲ್ಲಿ ನಡೆಯಲಿರುವ ಸಾರ್ವತ್ರಿಕ ಚುನಾವಣೆಗೆ ಇಂಡಿಯಾ ಮೈತ್ರಿಕೂಟದ ಪರವಾಗಿ ಪ್ರಧಾನಿ ಅಭ್ಯರ್ಥಿ ಯಾರು ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಶರದ್ ಪವಾರ್ ಪ್ರತಿಕ್ರಿಯಿಸಿದ್ದಾರೆ.

1977ರ ಚುನಾವಣೆಯಲ್ಲಿ ಗೆದ್ದ ನಂತರ ಮೊರಾರ್ಜಿ ದೇಸಾಯಿ ಪ್ರಧಾನಿಯಾದರು. ಪ್ರಧಾನಿ ಅಭ್ಯರ್ಥಿಯ ಹೆಸರನ್ನು ಮೊದಲೇ ಘೋಷಿಸದಿದ್ದರೂ ಯಾವುದೇ ಸಮಸ್ಯೆ ಇರಲಿಲ್ಲ. ಜನರು ಬದಲಾವಣೆ ಬಯಸಿದ್ದರು. ಹೊಸಬರು ಪ್ರಧಾನಿಯಾಗಿದ್ದರು’ ಎಂದು ಪವಾರ್ ಹೇಳಿದರು. ಆದರೆ.. ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಸೇರಿದಂತೆ ಕೆಲವು ಪಕ್ಷಗಳು ಈಗಾಗಲೇ ಇಂಡಿಯಾ ಮೈತ್ರಿಕೂಟದ ಪರವಾಗಿ ಪ್ರಧಾನಿ ಅಭ್ಯರ್ಥಿಯಾಗಿ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರ ಹೆಸರನ್ನು ಸೂಚಿಸಿವೆ.

ಶರದ್ ಪವಾರ್ ಅವರ ಹೇಳಿಕೆಗೆ ಬಿಜೆಪಿ ವಕ್ತಾರ ಶೆಹಬಾದ್ ಪೂನಾವಾಲಾ ಪ್ರತಿಕ್ರಿಯಿಸಿದ್ದಾರೆ. ಮಮತಾ ಬ್ಯಾನರ್ಜಿಯವರು ಪ್ರಸ್ತಾಪಿಸಿರುವ ಪ್ರಧಾನಿ ಅಭ್ಯರ್ಥಿ ಬಗ್ಗೆ ಕಾಂಗ್ರೆಸ್ ಕೂಡ ಒಮ್ಮತಕ್ಕೆ ಬಂದಿಲ್ಲ. ಇಂಡಿಯಾ ಮೈತ್ರಿಯಲ್ಲಿ ಬಿರುಕು ಸ್ಪಷ್ಟವಾಗಿ ಗೋಚರಿಸುತ್ತಿದೆ ಎಂದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...