Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕಿಚ್ಚ ಸುದೀಪ್ ಹೇಳಿದ್ದೆ ಒಂದು ಇಲ್ಲಿ ಆಗಿದ್ದೆ ಇನ್ನೊಂದು : ಆಪ್ತ ರಾಜು ಗೌಡ ವಿವರಿಸಿದ್ದು ಹೀಗೆ

---Advertisement---

ಬೆಂಗಳೂರು: ಸೋಷಿಯಲ್ ಮೀಡಿಯಾದಲ್ಲೆಲ್ಲಾ ಕಿಚ್ಚನ ಫ್ಯಾನ್ಸ್ ಹಾಗೂ ದರ್ಶನ್ ಫ್ಯಾನ್ಸ್ ವಾರ್ ಜೋರಾಗಿದೆ. ಹುಬ್ಬಳ್ಳಿಯಲ್ಲಿ ಕಿಚ್ಚ ಸುದೀಪ್ ನಾವೂ ಯುದ್ಧಕ್ಕೆ ಸಿದ್ಧ ಅಂದ್ರೆ ಅತ್ತ ದಾವಣಗೆರೆಯಲ್ಲಿ ವಿಜಯಲಕ್ಷ್ಮೀ, ದರ್ಶನ್ ಹೊರಗಿದ್ದಾಗ ಯಾರೂ ಮಾತಾಡ್ಲಿಲ್ಲ ಅಂದಿದ್ದಾರೆ. ಈ ಕಿಚ್ಚು ಸ್ವಲ್ಪ ಜೋರಾಗಿಯೇ ಹಚ್ಕೊಂಡಿದೆ. ಅಂದು ಹುಬ್ಬಳ್ಳಿಯಲ್ಲಿ ಸುದೀಪ್ ಆಡಿದ ಒಂದೊಂದು ಮಾತಿನ ಅರ್ಥ ಏನು..? ಅಪಾರ್ಥ ಆಗಿದ್ದೆಲ್ಲಿ ಎಂಬುದನ್ನ ಅವರ ಆಪ್ತ ರಾಜುಗೌಡ ತಿಳಿಸಿದ್ದಾರೆ.

ನಾನು ಮತ್ತು ಸುದೀಪ್ ಅವರು ಜೊತೆಯಲ್ಲಿ ಇದ್ದಾಗ ಅವರಿಗೆ ಒಂದು ಫೋನ್ ಬಂತು. ಈ ಬಾರಿ ನಿಮ್ಮ ವಿರುದ್ಧ ಭಾರಿ ಪ್ರಬಲವಾಗಿ ಪೈರಸಿ ಸಂಚು ನಡೆದಿದೆ. ಆದಷ್ಟು ನೀವೂ ನಿಮ್ಮ ಅಭಿಮಾನಿಗಳಿಗೆ ಎಚ್ಚರಿಕೆ ನೀಡಿ ಅಂತ ಆ ಫೋನ್ ಕರೆಯಲ್ಲಿ ಹೇಳಲಾಯಿತು. ಸುದೀಪ್ ಅವರ ಅಭಿಮಾನಿಗಳ ಹೆಸರಲ್ಲಿ ನಕಲಿ ಸಂಘಗಳನ್ನು ಸೃಷ್ಟಿ ಮಾಡಿಕೊಂಡು ಏನೇನೋ ಹಾಕುತ್ತಿದ್ದಾರೆ. ಆ ವಿಚಾರವನ್ನೇ ಸುದೀಪ್ ಅವರು ವೇದಿಕೆಯಲ್ಲಿ ಮಾತನಾಡಿದ್ದು, ನಾವೆಲ್ಲರೂ ಯುದ್ಧಕ್ಕೆ ಸಿದ್ಧ ಅಂತ ಸುದೀಪ್ ಅವರು ಹೇಳಿದ್ದು, ಯಾವುದೇ ಒಬ್ಬ ಸ್ಟಾರ್ ನಟರ ವಿರುದ್ಧವಾಗಿ ಅಲ್ಲ. ಯಾವುದೇ ಒಂದು ಸಿನಿಮಾ ಬಗ್ಗೆಯೂ ಅವರು ಹೇಳಿಕೆ ನೀಡಿಲ್ಲ.

ಅವರು ಹೇಳಿದ್ದೇ ಬೇರೆ. ಇಲ್ಲಿ ಆಗುತ್ತಿರುವ ಚರ್ಚೆಯೇ ಬೇರೆ. ಪೈರಸಿ ವಿರುದ್ಧ ನಮ್ಮ ಹೋರಾಟ. ನಕಲಿ ಫ್ಯಾಬ್ಸ್ ಸಂಘಟನೆಗಳಿಂದ ಆಗುತ್ತಿರುವ ಅಪಪ್ರಚಾರ ಸರಿ ಅಲ್ಲ ಅಂತ ಸುದೀಪ್ ಹೇಳಿದ್ದು. ದರ್ಶನ್ ವಿರುದ್ಧವಾಗಿ ಸುದೀಪ್ ಅವರು ಹೇಳಿಕೆ ನೀಡಿಲ್ಲ. ಆ ರೀತಿಯ ಸಂದರ್ಭ ಕೂಡ ಇಲ್ಲ. ಯಾರಿಗೆ ತಟ್ಟಬೇಕೋ ತಟ್ಟುತ್ತೆ ಅಂತ ಸುದೀಪ್ ಅವರು ಹೇಳಿದ್ದು ಪೈರಸಿಯವರಿಗೆ ಎಂದಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now