Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿರತೆಯನ್ನು ಸೆರೆಹಿಡಿಯುವ ನೆಪದಲ್ಲಿ ಕೊಂದಿರುವುದು ಶಿಕ್ಷಾರ್ಹ ಅಪರಾಧ : ಕರುನಾಡ ವಿಜಯಸೇನೆ ಖಂಡನೆ

---Advertisement---

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ,ನವೆಂಬರ್.02 : ಬೆಂಗಳೂರಿನ ಬೊಮ್ಮನಹಳ್ಳಿ ಉಪವಲಯದ ವ್ಯಾಪ್ತಿಯಲ್ಲಿ ಕಾಣಿಸಿಕೊಂಡ ಚಿರತೆಯನ್ನು ಸೆರೆಹಿಡಿಯುವ ನೆಪದಲ್ಲಿ ಕೊಂದಿರುವುದು ಶಿಕ್ಷಾರ್ಹ ಅಪರಾಧ ಎಂದು ಕರುನಾಡ ವಿಜಯಸೇನೆ ಕಾರ್ಯಕರ್ತರು ಅರಣ್ಯ ಇಲಾಖೆ ಎದುರು ಪ್ರತಿಭಟನೆ ನಡೆಸಿ ಅರಣ್ಯಾಧಿಕಾರಿಗೆ ಗುರುವಾರ ಮನವಿ ಸಲ್ಲಿಸಿದರು.

ಕಳೆದ ಮೂರ್ನಾಲ್ಕು ದಿನಗಳಿಂದ ರಾತ್ರಿ ವೇಳೆಯಲ್ಲಿ ಕಾಣಿಸಿಕೊಳ್ಳುತ್ತಿದ್ದ ಚಿರತೆಗೆ ಅರವಳಿಕೆ ಚುಚ್ಚುಮದ್ದು ನೀಡಿ ಸೆರೆಹಿಡಿಯಲಾಗುವುದೆಂದು ಅರಣ್ಯ ಹಾಗೂ ಪೊಲೀಸ್ ಇಲಾಖೆಯವರು ಹೇಳಿರುವುದೇನೋ ಸರಿ. ಆದರೆ ಸೆರೆಹಿಡಿಯುವ ನೆಪದಲ್ಲಿ ಚಿರತೆಯನ್ನು ಕೊಂದಿರುವುದು ಯಾವ ನ್ಯಾಯ? ತಂತ್ರಜ್ಞಾನ ಸಾಕಷ್ಟು ಮುಂದುವರೆದಿದ್ದು, ಅರಣ್ಯ ಇಲಾಖೆಯಲ್ಲಿ ಸುರಕ್ಷತಾ ಪರಿಕರಗಳಿದ್ದರೂ ಚಿರತೆಯನ್ನು ಬಲಿತೆಗೆದುಕೊಂಡಿರುವುದು ಖಂಡನೀಯ.

ಚಿರತೆಯನ್ನು ಕೊಂದಿರುವ ಅರಣ್ಯ ಇಲಾಖೆ ಸಿಬ್ಬಂದಿಯನ್ನು ಕೂಡಲೆ ಸೇವೆಯಿಂದ ಅಮಾನತ್ತುಗೊಳಿಸಿ ಕಾನೂನು ರೀತಿಯ ಕ್ರಮ ಕೈಗೊಳ್ಳಬೇಕು. ಹುಲಿ ಉಗುರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ ವನ್ಯಜೀವಿಗಳನ್ನು ರಕ್ಷಿಸುವತ್ತ ಕಾಳಜಿ ವಹಿಸಬೇಕಿದೆ ಎಂದು ಕರುನಾಡ ವಿಜಯಸೇನೆ ಜಿಲ್ಲಾಧ್ಯಕ್ಷ ಕೆ.ಟಿ.ಶಿವಕುಮಾರ್ ಒತ್ತಾಯಿಸಿದರು.

ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ವೀಣಗೌರಣ್ಣ, ಉಪಾಧ್ಯಕ್ಷೆ ರತ್ನಮ್ಮ, ಜಗದೀಶ್, ವಿಶ್ವನಾರಾಯಣಮೂರ್ತಿ, ಹರೀಶ್, ಅಖಿಲೇಶ್, ಗೋಪಿನಾಥ್, ಪ್ರದೀಪ್, ಅವಿನಾಶ್ ಇನ್ನು ಮುಂತಾದವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...