Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಿದ್ದರಾಮೋತ್ಸವ ಕಾರ್ಯಕ್ರಮಕ್ಕೆ ಅಪಾರ್ಥ ಕಲ್ಪಿಸುವುದು ಬೇಡ : ಕೆ ಎನ್ ರಾಜಣ್ಣ

Facebook
Twitter
Telegram
WhatsApp

 

ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ 75 ವರ್ಷಗಳು ತುಂಬುತ್ತಿರುವ ಹಿನ್ನೆಲೆ ಸಿದ್ದರಾಮಯ್ಯ ಅವರ ಅಮೃತಮಹೋತ್ಸವ ಮಾಡಲು ಈಗಾಗಲೇ ಸಿದ್ಧತೆ ನಡೆಸುತ್ತಿದ್ದಾರೆ. ಅಮೃತಮೋಹತ್ಸವ ಅಧ್ಯಕ್ಷತೆ ವಹಿಸಿಕೊಂಡಿರುವ ಕೆ ಎನ್ ರಾಜಣ್ಣ ಮಾತನಾಡಿ, ಸಿದ್ದರಾಮಯ್ಯ ಈ ಆಚರಣೆ ಅವಶ್ಯಕತೆ ಇಲ್ಲ ಅಂದಿದ್ರು. ನಾವೆಲ್ಲ ಅವರ ಮನವೊಲಿಸಿ ಕಾರ್ಯಕ್ರಮ ಆಯೋಜನೆ ಮಾಡಿದ್ದೇವೆ. ರಾಹುಲ್ ಗಾಂಧಿ ಕೂಡ ಈ ಕಾರ್ಯಕ್ರಮಕ್ಕೆ ಬರ್ತಾರೆ ಎಂದಿದ್ದಾರೆ.

ಸಿದ್ದರಾಮಯ್ಯ ನಡೆದು ಬಂದ ಹಾದಿ ಹೊಸ ಪೀಳಿಗೆಗೆ ತಿಳಿಸಬೇಕು. ಅವರ ಕಷ್ಟದ ಹಾದಿ ಜನರಿಗೆ ತಿಳಿಯಬೇಕು. ಸಿದ್ದರಾಮಯ್ಯ ಕೊಟ್ಟ ಕಾರ್ಯಕ್ರಮಕ್ಕೆ ಒಂದೊಂದು ಕಾರಣ ಇದ್ದಾವೆ. ಸಿದ್ದರಾಮಯ್ಯ ಅನುಭವಿಸಿದ ಕಷ್ಟವನ್ನು ಯೋಜನೆ ರೂಪದಲ್ಲಿ ತಂದ್ರು. ಈ ಕಾರ್ಯಕ್ರಮದ ಬಗ್ಗೆ ಅನ್ಯತಾ ಭಾವಿಸಬಾರದು. ಪಕ್ಷದ ಒಳಗೆ ನಡೆಯುತ್ತಿರುವ ಕಾರ್ಯಕ್ರಮ ಇದು. ಅಪಾರ್ಥ ಕಲ್ಪಿಸುವುದು ಬೇಡ ಎಂದು ಕೆ ಎನ್ ರಾಜಣ್ಣ ಮನವಿ ಮಾಡಿದ್ದಾರೆ.

ಇದೆ ವೇಳೆ ಮಾಜಿ ಸಚಿವ ಪಿ ಜಿ ಆರ್ ಸಿಂಧ್ಯಾ ಮಾತನಾಡಿ, ಸಿದ್ದರಾಮಯ್ಯ ಈ ರಾಷ್ಟ್ರದ ಒಂದು ವಿಶೇಷ ವ್ಯಕ್ತಿ. ನಿಜಲಿಂಗಪ್ಪ, ದೇವರಾಜ್ ಅರಸು ಈ ನಾಡಿನಿಂದ ರಾಷ್ಟ್ರಕ್ಕೆ ಪರಿಚಯ ಆಗಿದ್ರು. ಈ ನಾಯಕರ ಒಡನಾಟ ಕೂಡ ಸಿದ್ದರಾಮಯ್ಯರಿಗೆ ಇತ್ತು. ಜೆಪಿ ಚಳುವಳಿ ಮೂಲಕ ಸಿದ್ದರಾಮಯ್ಯ ಹೋರಾಟ ಆರಂಭಿಸಿದ್ರು. ಹಲವು ಏಳು‌ಬೀಳು ಸಿದ್ದರಾಮಯ್ಯ ನೋಡಿದ್ದಾರೆ. ಸಮಗ್ರ ದೃಷ್ಟಿಕೋನ ಇಟ್ಟುಕೊಂಡ ನಾಯಕರು ಕಡಿಮೆ. ಸಿದ್ದರಾಮಯ್ಯ ಸಮಗ್ರ ದೃಷ್ಟಿಕೋನ ಇಟ್ಟುಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯರ ಕಾರ್ಯಕ್ರಮ ಆಯೋಜನೆ ಮಾಡಿದ್ದೇವೆ ಎಂದಿದ್ದಾರೆ.

ಬಿ ಎಲ್ ಶಂಕರ್ ಹೇಳಿಕೆ ನೀಡಿದ್ದು, ಕಾಂಗ್ರೆಸ್ಸಿಗರು ಮಾಡುವ ಕಾರ್ಯಕ್ರಮ ಇದಾದ್ರು, ಕಾಂಗ್ರೆಸ್ ಪಕ್ಷದ ಅಡಿಯಲ್ಲಿ ಕಾರ್ಯಕ್ರಮ ನಡೆಯಲ್ಲ. ಸಮಿತಿಯಿಂದ ಈ ಕಾರ್ಯಕ್ರಮ ಆಯೋಜನೆ ಆಗಿದೆ. ಸಿದ್ದರಾಮೋತ್ಸವ ಅಂತ ನಾವು ಹೆಸರು ಕೊಟ್ಟಿಲ್ಲ. ಮಾಧ್ಯಮದವರು ಈ ಹೆಸರು‌ ಕೊಟ್ಟಿದ್ದಾರೆ. ಸಿದ್ದರಾಮಯ್ಯ ಹೆಸರಲ್ಲಿ ಕಾರ್ಯಕ್ರಮ ನೆಪ ಅಷ್ಟೇ. ಅವರ ರಾಜೀನಾಮೆ ಬದುಕನ್ನು ‌ಮೆಲಕು ಹಾಕುವ ‌ಕಾರ್ಯಕ್ರಮ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ವಿಡಿಯೋ ಕೇಸ್ : ದೇಹದ ಆರೋಗ್ಯ ಮಾತ್ರವಲ್ಲ ಸಮಾಜದ ಆರೋಗ್ಯವನ್ನು ಸುಧಾರಿಸಬೇಕು ಡಾ. ಮಂಜುನಾಥ್

ರಾಮನಗರ: ರಾಜ್ಯದಲ್ಲಷ್ಟೇ ಅಲ್ಲ ದೇಶದಲ್ಲೂ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣ ಸದ್ದು ಮಾಡುತ್ತಿದೆ. ಎಸ್ಐಟಿ ಅಧಿಕಾರಿಗಳು ಪ್ರಜ್ವಲ್ ರೇವಣ್ಣ ತನಿಖೆಗೆ ಕಾಯುತ್ತಿದ್ದಾರೆ. ಆದರೆ ಪ್ರಜ್ವಲ್ ರೇವಣ್ಣ ರಾಜ್ಯಕ್ಕೆ ಬರುವ ಸಾಹಸ ಮಾಡುತ್ತಿಲ್ಲ.

ಸರ್ಕಾರಿ ಮತ್ತು ಖಾಸಗಿ ಶಾಲೆಗಳ ಗಂಭೀರ ಸಮಸ್ಯೆಗಳ ಪರಿಹಾರಕ್ಕೆ ಡಿ.ಟಿ. ಶ್ರೀನಿವಾಸ್ ಅವರನ್ನು ಬೆಂಬಲಿಸಿ : ಶಾಸಕ ಟಿ. ರಘುಮೂರ್ತಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮೇ. 18 : ಜನಪರ ಆಡಳಿತ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ ಸರ್ವರಿಗೂ ಅನುಕೂಲವಾಗುವಂತೆ ರೂಪಿಸುವ ಯೋಜನೆಗಳು

ಬೆಂಗಳೂರು ಸೇರಿದಂತೆ ಹಲವೆಡೆ ಜೋರು ಮಳೆ : ಆರ್ಸಿಬಿ ಮ್ಯಾಚ್ ನೋಡುವ ಆಸೆ ಕಿತ್ತುಕೊಂಡನಾ ವರುಣರಾಯ..!

ಇಂದು ಬೆಳಗ್ಗೆಯಿಂದಾನೇ ಮೋಡಕವಿದ ವಾತಾವರಣ ಮನೆ ಮಾಡಿತ್ತು. ಮಧ್ಯಾಹ್ನದ ವೇಳೆಗೆ ಬೆಂಗಳೂರು ನಗರದಾದ್ಯಂತ ಜೋರು ಮಳೆಯಾಗಿದೆ. ವಿಜಯನಗರ, ರಾಜಾಜಿನಗರ, ಕಾರ್ಪೋರೇಷನ್ ಸೇರಿದಂತೆ ನಗರದ ಹಲವೆಡೆ ಮಳೆಯಾಗಿದೆ. ಆದರೆ ಈ ಮಳೆಯಿಂದ ಇಂದು ಆರ್ಸಿಬಿ ಮ್ಯಾಚ್

error: Content is protected !!