Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕಾಂಗ್ರೆಸ್ ಬಿಟ್ಟು ಬಿಜೆಪಿಯತ್ತ ಹೆಜ್ಜೆ ಹಾಕಲು ಪ್ಲ್ಯಾನ್ ಮಾಡಿದ್ರಾ ಕೆ.ಎನ್.ರಾಜಣ್ಣ ಪುತ್ರ..?

---Advertisement---

ತುಮಕೂರು: ಕಾಂಗ್ರೆಸ್ ಸರ್ಕಾರದಲ್ಲಿ ಸಾಕಷ್ಟು ಬದಲಾವಣೆಗಳು ನಡೆಯುತ್ತಾ ಇದೆ. ಕುರ್ಚಿ ಕದನದ ನಡುವೆ ಇದೀಗ ಕೆ.ಎನ್.ರಾಜಣ್ಣ ಪುತ್ರನ ನಡೆ ಇನ್ನಷ್ಟು ಚರ್ಚೆಗೆ ಗ್ರಾಸವಾಗಿದೆ. ಕೆ.ಎನ್‌.ರಾಜಣ್ಣ ಕಾಂಗ್ರೆಸ್ ಸರ್ಕಾರದಲ್ಲಿಯೇ ಸಚಿವರಾಗಿದ್ದವರು. ಆದರೆ ಆಡಿದ ಒಂದು ಮಾತಿನಿಂದ ಸಚಿವ ಸ್ಥಾನವನ್ನು ಕಳೆದುಕೊಂಡರು. ಸಿಎಂ ಅವರ ಆಪ್ತರಾಗಿದ್ದರು ಕೂಡ ರಾಜಣ್ಣ ತಮ್ಮ ಸ್ಥಾನವನ್ನು ಕಳೆದುಕೊಂಡರು. ಇದರಿಂದ ರಾಜಣ್ಣ ಪುತ್ರ ರಾಜೇಂದ್ರ ಅವರ ಮನಸ್ಸು ನೊಂದಿರುತ್ತೆ. ತನಗೂ ಕಾಂಗ್ರೆಸ್ ನಲ್ಲಿ ಸ್ಥಾನಮಾನ ಸಿಗುವುದು ಅನುಮಾನ, ತಂದೆಯಂತೆ ಮೂಲೆಗುಂಪು ಮಾಡ್ತಾರಾ ಎಂಬ ಅನುಮಾನ ಅವರನ್ನು ಕಾಡಿರಬಹುದು. ಹೀಗಾಗಿಯೇ ಬಿಜೆಪಿ ಕಡೆ ವಾಲಿದರಾ ಎಂಬ ಅನುಮಾನ ಕಾಡಿದೆ.

 

ಯಾಕಂದ್ರೆ ಈಗ ವೈರಲ್ ಆಗಿರುವ ಫೋಟೋ ಹಿಂದೆ ಈ ಪ್ರಶ್ನೆಗಳು ಓಡಾಡುತ್ತಿವೆ. ಯಾಕಂದ್ರೆ ಇತ್ತೀಚೆಗಷ್ಟೇ ಕಾಂಗ್ರೆಸ್ ಪರಿಷತ್ ಸದಸ್ಯರಾದ ಆರ್ ರಾಜೇಂದ್ರ ಅವರು ಮೊನ್ನೆಯಷ್ಟೇ ಕೇಂದ್ರ ಸಚಿವ ವಿ.ಸೋಮಣ್ಣ ಅವರನ್ನು ಭೇಟಿಯಾಗಿದ್ದರು. ಇದರ ಬೆನ್ನಲ್ಲೇ ನಿನ್ನೆ ಕೇಂದ್ರ ಸಚಿವ ಸೋಮಣ್ಣ ಅವರನ್ನು ಭೇಟಿಯಾಗಿದ್ದರು. ಈಗ ನೋಡಿದ್ರೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರನ್ನು ಭೇಟಿಯಾಗಿದ್ದಾರೆ. ಬಿಜೆಪಿ ನಾಯಕರ ಜೊತೆಗೆ ರಾಜೇಂದ್ರ ಅವರು ಮಾತುಕತೆ ನಡೆಸುತ್ತಿರುವುದು ಸಾಕಷ್ಟು ಚರ್ಚೆಗೆ ಕಾರಣವಾಗಿದೆ.

 

ಕಳೆದ ತಿಂಗಳು 20ರಂದು ಅಮಿತ್ ಶಾ ಅವರನ್ನು ಭೇಟಿ ಮಾಡಿದ್ರು. ಸಹಕಾರ ಸಮಾವೇಶದ ನೆಪದಲ್ಲಿ ಅಮಿತ್ ಶಾ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದರು. ಈ ಭೇಟಿಯಲ್ಲಿ ಅಮಿತ್ ಶಾ ಅವರು, ರಾಜೇಂದ್ರ ಅವರ ಕೈಕುಲುಕಿ ಮಾತನಾಡಿದ್ದರು. ಇದೆಲ್ಲವನ್ನು ನೋಡಿದಾಗ ಅಮಿತ್ ಶಾ ಅವರು ಕರ್ನಾಟಕ ರಾಜ್ಯ ಸರ್ಕಾರದ ಮೇಲೆ ಕಣ್ಣಿಟ್ಟಿದ್ದಾರಾ ಎಂಬ ಪ್ರಶ್ನೆ ಎಲ್ಲರನ್ನು ಕಾಡಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now