Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

Knowledge : ನೀರಿನ ಬಾಟಲಿಯ ಮುಚ್ಚಳಗಳು ಏಕೆ ನೀಲಿ ಬಣ್ಣದಿಂದಿರುತ್ತವೆ ? ಇಲ್ಲಿದೆ ಮಾಹಿತಿ…!

---Advertisement---

 

ಸುದ್ದಿಒನ್ :  ಇತ್ತೀಚಿನ ದಿನಗಳಲ್ಲಿ ನೀರಿನ ಬಾಟಲಿಗಳ ಬಳಕೆ ಹೆಚ್ಚಾಗಿದೆ. ಪ್ರಯಾಣ ಮಾಡುವಾಗ, ಸಭೆ ಸಮಾರಂಭಗಳಲ್ಲಿ ನಾವು ನೀರಿನ ಬಾಟಲಿಗಳನ್ನು ಖರೀದಿಸುತ್ತೇವೆ. ಆದರೆ ನಮಗೆ ಕಾಣುವ ನೀರಿನ ಬಾಟಲಿಗಳಲ್ಲಿ ಹೆಚ್ಚಿನವು ನೀಲಿ ಬಣ್ಣದ ಮುಚ್ಚಳ (ಕ್ಯಾಪ್)  ಇರುವವುಗಳಾಗಿವೆ. 

ಹಾಗಾದರೆ ನೀರಿನ ಬಾಟಲ್ ಕ್ಯಾಪ್‌ಗಳಿಗೆ ನೀಲಿ ಬಣ್ಣದ ಕ್ಯಾಪ್‌ಗಳನ್ನು ಏಕೆ ಬಳಸಲಾಗುತ್ತದೆ ? ಇದರ ಹಿಂದಿನ ಅರ್ಥವೇನು? ಈಗ ಪ್ರತಿಯೊಂದು ಬಣ್ಣದ ಅರ್ಥವನ್ನು ತಿಳಿಯೋಣ.

ನೀರಿನ ಬಾಟಲಿಯ ಮೇಲೆ ನೀಲಿ ಬಣ್ಣದ ಕ್ಯಾಪ್ ಇದ್ದರೆ ಖನಿಜಯುಕ್ತ(Mineral Water)  ನೀರನ್ನು ಸೂಚಿಸುತ್ತದೆ. ಈ ನೀಲಿ ಕ್ಯಾಪ್ ನೀರಿನ ಬಾಟಲಿಗಳಲ್ಲಿನ ನೀರು ಖನಿಜಯುಕ್ತ ನೀರು ಎಂದು ಹೇಳಲಾಗುತ್ತದೆ.

ಇನ್ನು ಕೆಲವು ಬಾಟಲಿಗಳಿಗೆ ಬಿಳಿ ಮತ್ತು ಹಸಿರು ಬಣ್ಣಗಳ ಕ್ಯಾಪ್ ಗಳಿರುವುದು ಕಂಡು ಬರುತ್ತದೆ. ಆದರೆ ಇದರರ್ಥ ಹಸಿರು ಬಣ್ಣದ ಮುಚ್ಚಳವಿದ್ದರೆ ( ಕ್ಯಾಪ್) ಬಾಟಲಿಯ ನೀರಿಗೆ ಹೆಚ್ಚುವರಿ ರುಚಿಗಳನ್ನು (Added minerals)  ಸೇರಿಸಲಾಗಿದೆ. ಕೆಲವು ನೀರಿನ ಬಾಟಲ್ ಕಂಪನಿಗಳು ನೀರಿನ ಜೊತೆಗೆ ಎಲೆಕ್ಟ್ರೋಲೈಟ್‌ಗಳಂತಹ ರುಚಿಗಳನ್ನು ಸೇರಿಸುತ್ತವೆ. ಅಂತಹ ನೀರಿನ ಬಾಟಲಿಗಳ ಮೇಲಿನ ಕವರ್ ಅನ್ನು ನೀವು ನೋಡಿದರೆ, ನಿಮಗೆ ಇದು ಸ್ಪಷ್ಟವಾಗಿ ಅರ್ಥವಾಗುತ್ತದೆ.  ನೀರಿಗೆ ಸೇರಿಸಲಾದ ಸುವಾಸನೆಗಳನ್ನು (Flavors) ಅದರಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಲಾಗಿರುತ್ತದೆ.

ಕೆಲವು ನೀರಿನ ಬಾಟಲಿಗಳು ಕೆಂಪು, ಹಳದಿ, ಕಪ್ಪು ಮತ್ತು ಗುಲಾಬಿ ಬಣ್ಣದ ಮುಚ್ಚಳ  (ಕ್ಯಾಪ್) ಹೊಂದಿರುತ್ತವೆ. ಕೆಂಪು ಬಣ್ಣದ ಕ್ಯಾಪ್ ಹೊಂದಿರುವ ನೀರಿನ ಬಾಟಲಿಗಳು ಕಾರ್ಬೊನೇಟೆಡ್ ನೀರನ್ನು ಹೊಂದಿರುತ್ತವೆ ಎಂದು ತಿಳಿಯಬೇಕು. ಹಳದಿ ಬಣ್ಣದ ಕ್ಯಾಪ್ ಹೊಂದಿರುವ ನೀರಿನ ಬಾಟಲಿಯು ವಿಟಮಿನ್ ಗಳು ಮತ್ತು ಎಲೆಕ್ಟ್ರೋಲೈಟ್ಗಳನ್ನು ಹೊಂದಿರುತ್ತದೆ ಎಂದು ತಿಳಿಯಬೇಕು. ನೀರಿನಲ್ಲಿರುವ ವ್ಯತ್ಯಾಸವನ್ನು ತಿಳಿಸಲು ಕ್ಯಾಪ್‌ಗಳಿಗೆ ಬೇರೆ ಬಣ್ಣವನ್ನು ನಿಗದಿಪಡಿಸಲಾಗಿದೆ.

ಕಪ್ಪು ಬಣ್ಣದ ಕ್ಯಾಪ್ ಇದ್ದರೆ ಈ ಬಾಟಲಿಯಲ್ಲಿ ಕ್ಷಾರೀಯ ನೀರು (Wlkaline Water) ಇದೆ ಎಂದು ಅರ್ಥಮಾಡಿಕೊಳ್ಳಬೇಕು.  ಕಪ್ಪು ಬಣ್ಣದ ಕ್ಯಾಪ್ ಇರುವ ನೀರಿನ ಬಾಟಲಿಗಳು ಬಹಳ ಅಪರೂಪ. ಇವುಗಳನ್ನು ಪ್ರೀಮಿಯಂ ನೀರಿನ ಉತ್ಪನ್ನಗಳಿಗೆ ಮಾತ್ರ ಬಳಸಲಾಗುತ್ತದೆ. ಹೆಚ್ಚಾಗಿ ಸೆಲೆಬ್ರಿಟಿಗಳು ಈ ನೀರನ್ನು ಕುಡಿಯುತ್ತಾರೆ. ಪಿಂಕ್ ಕಲರ್ ಕ್ಯಾಪ್ ಇರುವ ನೀರಿನ ಬಾಟಲಿಗಳ ಬಗ್ಗೆ ಹೇಳುವುದಾದರೆ, ಸ್ತನ ಕ್ಯಾನ್ಸರ್ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಅನೇಕ ಚಾರಿಟಿಗಳು ಇದೇ ರೀತಿಯ ಕ್ಯಾಪ್ ಗಳನ್ನು ಬಳಸುತ್ತವೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...