Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಜಿಲ್ಲಾಧಿಕಾರಿ ಸಭೆಯಲ್ಲಿ ಕೋಡಿಹಳ್ಳಿ ಬೆಂಬಲಿಗರು ; ಸಭೆ ಬಹಿಷ್ಕರಿಸಿ ಹೊರನಡೆದ ಕರ್ನಾಟಕ ರಾಜ್ಯ ರೈತ ಸಂಘದ ಪದಾಧಿಕಾರಿಗಳು

Facebook
Twitter
Telegram
WhatsApp

ಚಿತ್ರದುರ್ಗ : ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜೂನ್ 4 ರಂದು ಹಿರಿಯೂರು ಮತ್ತು ಹೊಸದುರ್ಗಕ್ಕೆ ಆಗಮಿಸುತ್ತಿರುವುದರಿಂದ ಜಿಲ್ಲಾಧಿಕಾರಿ ತಮ್ಮ ಕಚೇರಿಯಲ್ಲಿ ಗುರುವಾರ ಕರೆದಿದ್ದ ರೈತರ ಪೂರ್ವಭಾವಿ ಸಭೆಯಲ್ಲಿ ಕೋಡಿಹಳ್ಳಿ ಚಂದ್ರಶೇಖರ್ ಕಡೆಯವರು ಇದ್ದುದನ್ನು ಗಮನಿಸಿದ ಕರ್ನಾಟಕ ರಾಜ್ಯ ರೈತ ಸಂಘದವರು ಸಭೆಯನ್ನು ಬಹಿಷ್ಕರಿಸಿ ಹೊರ ಬಂದ ಪ್ರಸಂಗ ನಡೆಯಿತು.

ನಿಮ್ಮ ಬೇಡಿಕೆಗಳೇನಾದರೂ ಇದ್ದರೆ ನೇರವಾಗಿ ನಮಗೆ ಕೊಡಿ ಸರ್ಕಾರಕ್ಕೆ ಕಳಿಸುತ್ತೇವೆ ಎಂದು ಜಿಲ್ಲಾಧಿಕಾರಿಗಳು ಕರ್ನಾಟಕ ರಾಜ್ಯ ರೈತ ಸಂಘದ ಪದಾಧಿಕಾರಿಗಳಿಗೆ ತಿಳಿಸಿದಾಗ ಮುಖ್ಯಮಂತ್ರಿಗಳು ಜಿಲ್ಲೆಗೆ ಬರುತ್ತಿರುವುದರಿಂದ ನಾವೇ ನೇರವಾಗಿ ಕಂಡು ನಮ್ಮ ಅಹವಾಲು ಹಾಗೂ ಸಮಸ್ಯೆಗಳನ್ನು ಹೇಳಿಕೊಳ್ಳುತ್ತೇವೆ.

ಅವಕಾಶ ಕೊಡಿ ಎಂದು ಮನವಿ ಮಾಡಿದ್ದಕ್ಕೆ ಕಾಲಾವಕಾಶ ಕಡಿಮೆಯಿರುವುದರಿಂದ ಮುಖ್ಯಮಂತ್ರಿಗಳನ್ನು ನೇರವಾಗಿ ನೀವುಗಳು ಭೇಟಿ ಮಾಡಲು ಆಗುವುದಿಲ್ಲ ಎಂದು ಉತ್ತರಿಸಿದಾಗ ಅಸಮಾಧಾನಗೊಂಡ ರೈತರು ಅವ್ಯವಹಾರದ ಆರೋಪ ಹೊತ್ತಿರುವ ಕೋಡಿಹಳ್ಳಿ ಚಂದ್ರಶೇಖರ್ ಕಡೆಯವರಾದ ರೆಡ್ಡಿಹಳ್ಳಿ ವೀರಣ್ಣ, ನಾಗರಾಜ್ ಇವರುಗಳ ಜೊತೆ ನಾವುಗಳು ಸಭೆಯಲ್ಲಿ ಕುಳಿತುಕೊಳ್ಳುವುದಿಲ್ಲ ಎಂದು ಜಿಲ್ಲಾಧಿಕಾರಿಗೆ ನಿಷ್ಟೂರವಾಗಿ ಹೇಳಿದ ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಟಿ.ನುಲೇನೂರು ಶಂಕರಪ್ಪ, ಜಿಲ್ಲಾಧ್ಯಕ್ಷ ಬಸ್ತಿಹಳ್ಳಿ ಜಿ.ಸುರೇಶ್‍ಬಾಬು ಇವರುಗಳು ನಾಜೂಕಾಗಿ ಸಭೆಯಿಂದ ಹೊರಟರು.

ಹೊರಕೇರಪ್ಪ, ಧನಂಜಯ ಹಂಪಯ್ಯನಮಾಳಿಗೆ, ಕುರುಬರಹಳ್ಳಿ ಶಿವಣ್ಣ, ಹಿರಿಯೂರು ತಾಲ್ಲೂಕು ರೈತ ಸಂಘದ ಅಧ್ಯಕ್ಷ ಶಿವಕುಮಾರ್, ಲಕ್ಷ್ಮಿಕಾಂತ್ ಇನ್ನು ಅನೇಕರು ಈ ಸಂದರ್ಭದಲ್ಲಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬಿ.ಎನ್.ಚಂದ್ರಪ್ಪ ಗೆಲುವು ಚಿತ್ರದುರ್ಗದ ಸಮಗ್ರ ಅಭಿವೃದ್ಧಿಗೆ ಸಹಕಾರಿ : ಸತೀಶ್ ಜಾರಕಿಹೊಳಿ

ಚಿತ್ರದುರ್ಗ, ಏ. 24 :  ವೀರ ಮದಕರಿ ನಾಯಕ ನಾಡಿನ ಎಲ್ಲ ಜಾತಿ ಜನರ ಪ್ರೀತಿ ಗಳಿಸಿರುವ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಗೆಲುವು ಚಿತ್ರದುರ್ಗದ ಸಮಗ್ರ ಅಭಿವೃದ್ಧಿಗೆ ಸಹಕಾರಿ ಆಗಲಿದೆ ಎಂದು ಸಚಿವ ಸತೀಶ್

ಮೈಸೂರಿನಲ್ಲಿ ಅಭ್ಯರ್ಥಿ ಬದಲಾಯಿಸಿದ್ದೇಕೆ..? ಯದುವೀರ್ ಗೆ ಟಿಕೆಟ್ ಕೊಟ್ಟಿದ್ದೇಕೆ..?: ಸ್ಪಷ್ಟನೆ ನೀಡಿದ ವಿಜಯೇಂದ್ರ

ಬೆಂಗಳೂರು: ಲೋಕಸಭಾ ಚುನಾವಣೆಯ ಪ್ರಚಾರ ಭರ್ಜರಿಯಾಗಿ ನಡೆಯುತ್ತಿದೆ. ಇಂದು ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ. ಅದರಲ್ಲೂ ಈ ಬಾರಿ ಬಿಜೆಪಿಯಲ್ಲಿ ಹೊಸಬರಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಘಟಾನುಘಟಿಗಳಿಗೆ ಟಿಕೆಟ್ ಮಿಸ್ ಆಗಿದೆ. ಮೈಸೂರಿನಿಂದ ಪ್ರತಾಪ್

ಡಾ.ರಾಜ್ 95ನೇ ಹುಟ್ಟುಹಬ್ಬ : ಸಮಾಧಿಗೆ ಪೂಜೆ ಸಲ್ಲಿಸಿದ ರಾಘಣ್ಣ, ಅಶ್ವಿನಿ, ವಂದಿತಾ

ಬೆಂಗಳೂರು: ಇಂದು ವರನಟ ಡಾ.ರಾಜ್ ಕುಮಾರ್ ಅವರ 95ನೇ ವರ್ಷದ ಹುಟ್ಟುಹಬ್ಬ. ಅವರ ಅಭಿಮಾನಿಗಳು ರಾಜ್ಯಾದ್ಯಂತ ಈ ಸಂಭ್ರಮವನ್ನು ಆಚರಿಸುತ್ತಿದ್ದಾರೆ. ಸಮಾಜಮುಖಿ ಕೆಲಸಗಳನ್ನು ಮಾಡುತ್ತಾ, ಅಣ್ಣಾವ್ರ ಹುಟ್ಟುಹಬ್ಬವನ್ನು ಸಾರ್ಥಕ ಮಾಡುತ್ತಿದ್ದಾರೆ. ಅವರ ಅಭಿಮಾನಿಗಳಿಂದ ಪ್ರತಿ

error: Content is protected !!