ಕೋಡಿ ಮಠದ ಸ್ವಾಮೀಜಿಗಳ ಭವಿಷ್ಯದ ಬಗ್ಗೆ ಸಾಕಷ್ಟು ಕುತೂಹಲವಂತೂ ಇದ್ದೇ ಇರುತ್ತದೆ. ರಾಜ್ಯ ಮಳೆ, ಬೆಳೆ, ರಾಜಕಾರಣದ ಬಗ್ಗೆ ಭವಿಷ್ಯ ನುಡಿದು ಗಮನ ಸೆಳೆಯುತ್ತಾರೆ. ಇದೀಗ ರಾಜ್ಯ ರಾಜಕೀಯದ ಬಗ್ಗೆ ಮಹತ್ವದ ಭವಿಷ್ಯ ನುಡಿದಿದ್ದಾರೆ. ರಾಜ್ಯ ರಾಜಕಾರಣದಲ್ಲಿ ಸಿಎಂ ಬದಲಾವಣೆಯ ಚರ್ಚೆ ಆಗಾಗ ಚರ್ಚೆಗೆ ಬರುತ್ತಲೇ ಇರುತ್ತದೆ. ಇನ್ನೇನು ಸಿಎಂ ಸ್ಥಾನದಿಂದ ಸಿದ್ದರಾಮಯ್ಯ ಅವರು ಇಳಿದೇ ಬಿಡುತ್ತಾರೆ ಎಂಬೆಲ್ಲಾ ರೀತಿ ವಿಪಕ್ಷಗಳು ವಾಗ್ದಾಳಿ ನಡೆಸಿವೆ. ಆದರೆ ಆ ವಿಚಾರ ಅಲ್ಲಿಗಲ್ಲಿಗೆ ನಿಂತಿದೆ. ಇದೀಗ ಕೋಡಿಮಠದ ಸ್ವಾಮಿಗಳು ಸಿಎಂ ಸ್ಥಾಮದ ಬಗ್ಗೆ ಭವಿಷ್ಯ ನುಡಿದಿದ್ದಾರೆ.
ಡಾ.ಶಿವಯೋಗಿ ಶಿವಾನಂದ ಸ್ವಾಮೀಜಿಯವರು ವಿಜಯಪುರದಲ್ಲಿ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಈ ವೇಳೆ ಮಾತನಾಡಿ, ಮೊನ್ನೆ ಸಿಎಂ ಸಿದ್ದರಾಮಯ್ಯ ಅವರ ಜೊತೆಗೆ ಮಾತನಾಡುತ್ತಿದ್ದೆ. ಉತ್ತರ ಕರ್ನಾಟಕದಿಂದ ಯಾರಾದರೂ ಸಿಎಂ ಆದರೆ ಎಂಬಿ ಪಾಟೀಲ್ ಆಗಲಿ ಎಂದೆ ಎಂದು ಹೇಳಿದರು. ಈ ಮಾತನ್ನು ಕೇಳಿಸಿಕಿಂಡ ಎಂಬಿ ಪಾಟೀಲ್ ಖುಷಿ ಪಟ್ಟರು.
ಒಂದೇ ವೇದಿಕೆಯಲ್ಲಿ ಸಚಿವ ಎಂಬಿ ಪಾಟೀಲ್ ಹಾಗೂ ಕೋಡಿಮಠದ ಶಿವಯೋಗಿ ಶಿವಾನಂದ ಸ್ವಾಮೀಜಿಗಳು ಇದ್ದರು. ಸ್ವಾಮೀಜಿಗೆ ತನ್ನ ಮೇಲೆ ಇರುವ ಆತ್ಮೀಯತೆಗೆ ಖುಷಿ ಪಟ್ಟರು. ಸಿಎಂ ಸ್ಥಾನದಲ್ಲಿ ತನ್ನನ್ನು ನೋಡಲು ಇಚ್ಛಿಸುತ್ತಿದ್ದಾರೆ ಎಂಬ ಖುಷಿ ಅವರಲ್ಲಿ ಕಂಡಿತ್ತು. ಇನ್ನು ಸಿಎಂ ವಿಚಾರಕ್ಕೇನೆ ಕಳೆದ ಬಾರಿಯೂ ಕೋಡಿ ಮಠದ ಶ್ರೀಗಳ ಭವಿಷ್ಯ ಸದ್ದು ಮಾಡಿತ್ತು. ಈ ಬಾರಿ ಮಹಿಳೆ ಸಿಎಂ ಆಗ್ತಾರೆ ಎಂಬ ಭವಿಷ್ಯ ನುಡಿದ ಬೆನ್ನಲ್ಲೇ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೆಸರು ಚರ್ಚೆಗೆ ಬಂದಿತ್ತು.
ಚಿತ್ರದುರ್ಗ.ಎಪ್ರಿಲ್.11: ಜಿಲ್ಲೆಯಲ್ಲಿ ಪೋಕ್ಸೋ ಹಾಗೂ ಬಾಲ್ಯ ವಿವಾಹ ಪ್ರಕರಣಗಳ ತಡೆಗೆ ಸಮಗ್ರ ಯೋಜನೆ ರೂಪಿಸುವುದರೊಂದಿಗೆ ಹಳ್ಳಿ, ಗ್ರಾಮ ಪಂಚಾಯಿತಿ, ತಾಲ್ಲೂಕು…
ಸುದ್ದಿಒನ್, ದಾವಣಗೆರೆ, ಏಪ್ರಿಲ್. 11 : ಮಹಾನಗರ ಪಾಲಿಕೆಯ ಕಾಂಗ್ರೆಸ್ ಮಾಜಿ ಕಾರ್ಪೊರೇಟರ್ ವಕ್ಫ್ ಬಿಲ್ ವಿರೋಧಿಸಿ ಪ್ರಚೋದನಕಾರಿಯಾಗಿ ಆಡಿದ…
ಹುಬ್ಬಳ್ಳಿ; ಇತ್ತೀಚೆಗಷ್ಟೇ ಶಾಸಕ ಯತ್ನಾಳ್ ಅವರನ್ನು ಬಿಜೆಪಿ ಉಚ್ಛಾಟನೆ ಮಾಡಿದೆ. ಆರು ವರ್ಷಗಳ ಕಾಲ ಪಕ್ಷದಿಂದ ಹೊರಗಿಟ್ಟಿದೆ. ಹೀಗಾಗಿ ಪಂಚಮಸಾಲಿ…
ಸುದ್ದಿಒನ್, ಹಿರಿಯೂರು, ಏಪ್ರಿಲ್. 11 : ನಗರ ಪ್ರದೇಶ ಹಾಗೂ ತಾಲೂಕಿನ ವಿವಿಧ ಕಡೆಗಳಲ್ಲಿ ಗಾಳಿ, ಗುಡುಗು, ಮಿಂಚು ಸೇರಿದಂತೆ…
ಚೆನ್ನೈ; ತಮಿಳುನಾಡಿನ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಅಣ್ಣಾಮಲೈ ರಾಜೀನಾಮೆ ಕೊಟ್ಟ ಬಳಿಕ ಇದೀಗ ಅವಿರೋಧ ಆಯ್ಕೆ ಮಾಡಲಾಗಿದೆ.…
ಬೆಂಗಳೂರು, ಏಪ್ರಿಲ್ 11: ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಆರೋಪಗಳ ಬಗ್ಗೆ ಗೌರವಾನ್ವಿತ ನ್ಯಾಯಮೂರ್ತಿ ಹೆಚ್.ಎನ್.ನಾಗಮೋಹನ್ದಾಸ್ ಅವರ…