Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಕೋಟಿ ವೃಕ್ಷ ಅಭಿಯಾನ : ಪ್ರಸಕ್ತ ವರ್ಷದಲ್ಲಿ ಐವತ್ತು ಸಾವಿರ ಗಿಡಗಳನ್ನು ನೆಡಲಾಗುವುದು : ದೇನಾ ಭಗತ್ ಸ್ವಾಮೀಜಿ

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ
ಮೊ : 97398 75729

 

ಸುದ್ದಿಒನ್, ಚಳ್ಳಕೆರೆ:  ಕೋಟಿ ವೃಕ್ಷ ಅಭಿಯಾನದಡಿ ಔಷಧಿ ಹಾಗೂ ಪ್ರಾಣಿ ಪಕ್ಷಿಗಳಿಗೆ ಜಾನುವಾರುಗಳಿಗೆ ಉಪಯೋಗವಾಗುವಂತಹ ಗಿಡಗಳನ್ನು ಬೆಳೆಸಲಾಗುತ್ತದೆ. ಅಮೃತ ಮಹಲ್ ಕಾವಲಿನಲ್ಲಿ ಒಂದು ಲಕ್ಷ ಗಿಡ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ರೇಖಲಗೆರೆ ಗ್ರಾಮದ ರಾಜಯೋಗ ವಿದ್ಯಾ ಶ್ರಮದ ದೇನಾ ಭಗತ್ ಸ್ವಾಮೀಜಿ ಹೇಳಿದರು.

ಚಳ್ಳಕೆರೆ ತಾಲೂಕಿನ  ರೇಕಲಗೆರೆ ಅಮೃತ್ ಮಹಲ್ ಕಾವಲಿನಲ್ಲಿ ಹಮ್ಮಿಕೊಂಡಿದ್ದ ಗಿಡ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ,  ಸರ್ಕಾರದ ಒಪ್ಪಿಗೆಯಂತೆ ರಾಜ್ಯಪಾಲರ ಅಂಕಿತವಾಗಿ ನಮ್ಮ ಟ್ರಸ್ಟ್ ಸುಪರ್ದಿಗೆ 1500 ಎಕರೆ ಕಾವಲು ಭೂಮಿಯನ್ನು ಮೂವತ್ತು ವರ್ಷದ ಅವಧಿಗೆ ನೀಡಲಾಗಿದೆ. ಸರ್ಕಾರದ ಮಾರ್ಗಸೂಚಿಯಂತೆ ಪರಿಸರ ಸಂರಕ್ಷಣೆ, ಔಷಧೀಯ ಗಿಡಗಳ ಬೆಳವಣಿಗೆ, ಜಾನುವಾರುಗಳಿ ಹುಲ್ಲುಗಾವಲು ಮತ್ತು ಭೂಮಿಯ ಫಲವತ್ತತೆ ಕಾಪಾಡುವ ಜವಾಬ್ದಾರಿ ನೋಡಿಕೊಳ್ಳಬೇಕಿದೆ.

ಇದರಂತೆ ಈಗಾಗಲೇ ಬೇವು, ಅರಳಿ, ಅತ್ತಿ, ಹೊಂಗೆ, ಹುಣಸೆ, ಗೋಣಿನಲ್ಲಿ ಸೇರಿದಂತೆ ವಿವಿಧ ತಳಿಯ ಐವತ್ತು ಸಾವಿರ ಗಿಡ ನೆಡಲಾಗಿದೆ. ಟ್ಯಾಂಕರ್ ಮೂಲಕ ನೀರು ಹಾಕಲಾಗುತ್ತದೆ. ಜಾನುವಾರುಗಳಿಗಾಗಿ ಗೋಕಟ್ಟೆ ಮತ್ತು ಚೆಕ್ ಡ್ಯಾಂಗಳನ್ನು ನಿರ್ಮಿಸಲಾಗಿದೆ. ಪ್ರಸಕ್ತ ವರ್ಷದಲ್ಲಿ ಐವತ್ತು ಸಾವಿರ ಗಿಡ ನಡೆಸಲು ಕ್ರಮವಹಿಸಲಾಗಿದೆ.

ಜಾನುವಾರುಗಳ ಹುಲ್ಲುಗಾವಲಿಗಾಗಿ ಮತ್ತು ಸಮೃದ್ಧ ಗಿಡಗಳ ಬೆಳವಣಿಗಾಗಿ ಜಾಲಿ, ತುಗ್ಲಿ ಗಿಡಗಳನ್ನು ತೆರವುಗೊಳಿಸಿ ಹೊಸ ಗಿಡ ಹಾಕಲಾಗಿದೆ. ಇದನ್ನೇ ಕೆಲವರು ತಪ್ಪಾಗಿ ತಿಳಿದು ಅರಣ್ಯ ನಾಶ ಮಾಡಲಾಗುತ್ತಿದೆ ಎಂದು ಹೇಳಲಾಗಿದೆ. ಸಾಮಾಜಿಕವಾಗಿ ಒಳ್ಳೆಯ ಕೆಲಸ ಮಾಡುವಾಗ ನಿಂಧನೆ ಮತ್ತು ಅಪಮಾನ ಬರುವುದು ಸಹಜ. ಒಮ್ಮೆ ಪರಾಮರ್ಶೆ ಮಾಡಿ ಮಾತನಾಡಬೇಕೆಂದು ಮನವಿ ಮಾಡಿದರು.

ಸರ್ಕಾರದ ಹಂತದಲ್ಲಿ ಒಬ್ಬ ವ್ಯಕ್ತಿಗೆ 1500 ಎಕರೆ ಭೂಮಿ ಕೊಡಲು ಸಾಧ್ಯವಿಲ್ಲ. ಅಧಿಕಾರಿಗಳ ಮತ್ತು ಇಲಾಖೆಯ ಸುಪರ್ದಿನಲ್ಲೆ ಭೂಮಿ ಇದೆ. ಸರ್ಕಾರದ ಸೂಚನೆಯಂತೆ ಅರಣ್ಯೀಕರಣ ಮಾಡಲಾಗುತ್ತಿದೆ ಎಂದು ಈಗಾಲೆ ಹಾಕಿರುವ ಗಿಡಗಳನ್ನು ಸಂರಕ್ಷಣೆ ಮಾಡಲಾಗುತ್ತಿದ್ದು ಅವುಗಳಿಗೆ ಟ್ಯಾಂಕರ್ ಮೂಲಕ ನೀರು ಹಾಕುವಂಥ ಕಾರ್ಯ ನಡೆಯುತ್ತಿದೆ. ಹಾಕಿದ ಗಿಡಗಳ ರಸಂ ರಕ್ಷಣೆಗೆ ಹಲವು ರೀತಿಯ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.

ಈ ಸಮಯದಲ್ಲಿ ಗಿಡ ಬೆಳೆಸುವ ಕಾರ್ಮಿಕರಾದ ದೇವೆಂದ್ರ, ಮಾದೇಶ್, ಎ. ಪಾಲಯ್ಯ, ತಿಮ್ಮಣ್ಣ, ಸುರೇಶ್ ಮತ್ತಿತರರು ಇದ್ದರು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...