Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಚಿಂತನೆ : ಲಿಂಗಾಯತರಿಗೆ ನೀಡಲು ಒತ್ತಾಯ

Facebook
Twitter
Telegram
WhatsApp

ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ಸಿಎಂ ಸ್ಥಾನ ಬದಲಾವಣೆ, ಡಿಸಿಎಂ ಹುದ್ದೆಗಳ ಹೆಚ್ಚಳದ್ದೇ ಸುದ್ದಿಯಾಗಿದೆ. ಸಿಎಂ ಸ್ಥಾನ ಬದಲಾವಣೆಯ ಬಗ್ಗೆ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅವರ ನಡುವೆ ಅಂತ ವೈಮನಸ್ಸಾಗಲಿ, ಒಬ್ಬರಿಗೊಬ್ಬರು ವಿರೋಧ ಹೇಳಿಕೆ ಕೊಡುವುದಾಗಲಿ ಕಾಣಿಸುತ್ತಿಲ್ಲ. ಆದರೆ ಡಿಸಿಎಂ ಹುದ್ದೆಗಳ ಹೆಚ್ಚಳದ ಒತ್ತಡವನ್ನು ಮಣಿಸಲು ಹೈಕಮಾಂಡ್ ಕೆಪಿಸಿಸಿ ಅಧ್ಯಕ್ಷರ ನೂತನ ನೇಮಕದ ಚಿಂತನೆ ನಡೆಸಿದೆ ಎನ್ನಲಾಗಿದೆ.

ಅಧಿವೇಶನದ ಬಳಿಕ ಕೆಪಿಸಿಸಿ ನೂತನ ಅಧ್ಯಕ್ಷರ ಬದಲಾವಣೆಯ ಸುಳಿವು ಸಿಕ್ಕಿದೆ. ಬದಲಾವಣೆಯ ಸುಳಿವು ಸಿಗುತ್ತಿದ್ದಂತೆ ಅಧ್ಯಕ್ಷಗಿರಿಗೆ ಡಿಮ್ಯಾಂಡ್ ಜಾಸ್ತಿಯಾಗಿದೆ. ಈ ಬಾರಿ ಲಿಂಗಾಯತರಿಗೆ ನೀಡಬೇಕೆಂದು ಒತ್ತಾಯಗಳು ಕೇಳಿ ಬರುತ್ತಿವೆ. ಈಗಾಗಲೇ ಕೆಪಿಸಿಸಿ ಅಧ್ಯಕ್ಷರಾಗಿ ದಲಿತರಿಗೆ, ಬ್ರಾಹ್ಮಣರಿಗೆ, ಒಕ್ಕಲಿಗರಿಗೆ ಅವಕಾಶ ನೀಡಿ ಆಗಿದೆ. ಈಗ ಲಿಂಗಾಯತರಿಗೆ ನೀಡಿ ಎಂಬ ಒತ್ತಾಯಗಳು ಕೇಳಿ ಬರುತ್ತಿವೆ.

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಸಚಿವ ಈಶ್ವರ್ ಖಂಡ್ರೆ, ಸತೀಶ್ ಜಾರಕಿಹೊಳಿ‌, ಬಿ.ಕೆ. ಹರಿಪ್ರಸಾದ್ ಲಾಬಿ ನಡೆಸುತ್ತಿದ್ದಾರೆ. ಅಲ್ಲದೇ ಸತೀಶ್ ಜಾರಕಿಹೊಳಿ‌, ಕೆ.ಎನ್. ರಾಜಣ್ಣ ಹೆಸರುಗಳು ಮುನ್ನೆಲೆಗೆ ಬಂದಿವೆ. ಈಗಾಗಲೇ ನಾನು ಅಧ್ಯಕ್ಷನಾಗಲು ಸಿದ್ಧ ಎಂದು ಸಚಿವ ಕೆ.ಎನ್. ರಾಜಣ್ಣ ಹೇಳಿದ್ದಾರೆ. ಮತ್ತೊಂದೆದೆ ಹಿಂದುಳಿದ ವರ್ಗಗಳ ಕೋಟಾದಡಿ ಬಿ.ಕೆ. ಹರಿಪ್ರಸಾದ್ ಹೆಸರು ಚರ್ಚೆಯಾಗುತ್ತಿದೆ. ಆದರೆ ಜಾತಿ ಮತ್ತು ಪ್ರಾದೇಶಿಕ ಆಧಾರಿತವಾಗಿ ಅಧ್ಯಕ್ಷರ ಆಯ್ಕೆ ಮಾಡಲು ಹೈ ಕಮಾಂಡ್‌ ಚಿಂತನೆ ನಡೆಸುತ್ತಿದೆ ಎನ್ನಲಾಗಿದೆ. ಈ ಬಾರಿ ಲಿಂಗಾಯತ ಹಾಗೂ ಕಲ್ಯಾಣ ಕರ್ನಾಟಕದ ನಾಯಕರಿಗೆ ಮಣೆ ಹಾಕುವ ಸಾಧ್ಯತೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಈಶ್ವರ್ ಖಂಡ್ರೆ ಅವರ ಹೆಸರು ಮುನ್ನೆಲೆಯಲ್ಲಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ನನಗೂ ಸಿಗರೇಟ್ ಸೇದುವ ಅಭ್ಯಾಸವಿತ್ತು : ಸಿಎಂ ಸಿದ್ದರಾಮಯ್ಯ ಕಿವಿ ಮಾತು

  ಬೆಂಗಳೂರು: ಸಿಗರೇಟ್ ಸೇದುವುದು ಆರೋಗ್ಯಕ್ಕೆ ಹಾನಿಕಾರಕ ಎಂಬುದು ಎಲ್ಲರಿಗೂ ಗೊತ್ತು. ಆ ಪ್ಯಾಕ್ ಮೇಲೆ ಕೂಡ ಬರೆದಿರುತ್ತೆ. ಆದರೆ ಸಾಕಷ್ಟು ಜನ ಇಂದು ಸಿಗರೇಟಿಗೆ ದಾಸರಾಗಿದ್ದಾರೆ. ಈ ಸಂಬಂಧ ಸಿಎಂ ಸಿದ್ದರಾಮಯ್ಯ ಅವರು

ಗೋಲ್ ಮಾಲ್ ಬಗ್ಗೆ ಪಕ್ಷದ ಮುಖಂಡರಿಗೆ ತಿಳಿಸಿದ್ದೇನೆ : ವಿನಯ್ ಕುಲಕರ್ಣಿ

  ಬೆಂಗಳೂರು: ಈಗಾಗಲೇ ರಾಜ್ಯದಲ್ಲಿ ವಾಲ್ಮೀಕಿ ನಿಗಮ, ಮೈಸೂರು ಮೂಡಾದ ಹಗರಣಗಳು ಸಾಕಷ್ಟು ಸದ್ದು ಮಾಡುತ್ತಿರುವಾಗಲೇ ರಾಜ್ಯದಲ್ಲಿ ಮತ್ತಷ್ಟು ಹಗರಣಗಳ ಬಗ್ಗೆ ಶಾಸಕ ವಿನಯ್ ಕುಲಕರ್ಣಿ ಮಾತನಾಡಿದ್ದಾರೆ. ಪಕ್ಷದ ಮುಖಂಡರಿಗೂ ಈ ಬಗ್ಗೆ ಪತ್ರ

ಮೂಡಾ ಗೋಲ್ಮಾಲ್ ವಿಚಾರ : ಸಿಎಂ ₹4,000 ಕೋಟಿ ಗುಳುಂ : ಆರ್ ಅಶೋಕ್ ವಾಗ್ದಾಳಿ..!

  ಬೆಂಗಳೂರು: ಮೂಡಾ ಗೋಲ್ಮಾಲ್ ವಿಚಾರಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಆರ್ ಅಶೋಕ್, ಗೋಲ್ಮಾಲ್ ಸಿಎಂ ₹4,000 ಕೋಟಿ ಗುಳುಂ ಎಂದು ಆಕ್ರೋಶ ಹೊರ ಹಾಕಿದ್ದಾರೆ.   ವಾಲ್ಮೀಕಿ ಅಭಿವೃದ್ಧಿ ನಿಗಮದ 187 ಕೋಟಿ

error: Content is protected !!