ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸೋಷಿಯಲ್ ಮೀಡಿಯಾ ಸಿಕ್ಕಾಪಟ್ಟೆ ಆಕ್ಟೀವ್ ಆಗಿದೆ. ಕಾಂಗ್ರೆಸ್ ಕಾರ್ಯಕ್ರಮಗಳು, ಸುದ್ದಿಗೋಷ್ಟಿಗಳನ್ನು ನೀಡುತ್ತಾ, ಬಿಜೆಪಿ, ಜೆಡಿಎಸ್ ಮೇಲೆ ಸೋಷಿಯಲ್ ಮೀಡಿಯಾದಲ್ಲಿ ಗದಾಪ್ರಹಾರ ಕೂಡ ಮಾಡುತ್ತಾ ಇರುತ್ತಾರೆ. ಸಾಕಣ್ಟು ಜನ ಕೆಲಸ ಕೂಡ ಮಾಡುತ್ತಾ ಇದ್ದಾರೆ. ಇದೀಗ ಕೆಪಿಸಿಸಿ ಸೋಷಿಯಲ್ ಮೀಡಿಯಾ ವಿಭಾಗಕ್ಕೆ ಅಧ್ಯಕ್ಚರನ್ನ ಆಯ್ಕೆ ಮಾಡಲಾಗಿದೆ. ಇವರ ಹೆಸರು ಐಶ್ವರ್ಯ ಮಹದೇವ್.
ಮಾಜಿ ಶಾಸಕ ಮಂಚನಹಳ್ಳಿ ಮಹದೇವ್ ಅವರ ಮಗಳು ಈ ಐಶ್ವರ್ಯಾ. ಮಹದೇವ್ ಅವರು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಇಬ್ಬರಿಗೂ ಆಪ್ತರಾಗಿರುವ ಶಾಸಕರಾಗಿದ್ದಾರೆ. ಐಶ್ವರ್ಯ ಅವರನ್ನ ಅಧ್ಯಕ್ಷರನ್ನಾಗಿ ಮಾಡಿ, ಎಐಸಿಸಿ ಆದೇಶ ಹೊರಡಿಸಿದೆ. ಐಶ್ಚರ್ಯ ಅವರ ಹುದ್ದೆ ತಕ್ಷಣದಿಂದಾನೇ ಜಾರಿಗೆ ಬರುವಂತೆ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರು ಆದೇಶ ಹೊರಡಿಸಿದ್ದಾರೆ.
ಐಶ್ವರ್ಯಾ ಅವರು ಈ ಮೊದಲು ಎಐಸಿಸಿ ವಕ್ತಾರೆಯಾಗಿ ಕೆಲಸ ನಿರ್ವಣೆ ಮಾಡಿದ್ದಾರೆ. ಮೈಸೂರು ಜಿಲ್ಲೆಯ ಕೆ.ಆರ್.ನಗರದ ನಿವಾಸಿಯಾಗಿರುವ ಐಶ್ವರ್ಯಾ ಮಹದೇವ ಅವರು ಅತಿ ಕಿರಿಯ ವಯಸ್ಸಿನಲ್ಲಿಯೇ ಮಹಿಳಾ ಘಟಕದ ಕಾರ್ಯದರ್ಶಿಯಾಗಿ ಕೆಲಸ ಮಾಡಿದ್ದಾರೆ. ಜತೆಗೆ ಕಾಂಗ್ರೆಸ್ ರಾಷ್ಟ್ರೀಯ ವಕ್ತಾರೆಯಾಗಿದ್ದರು. ವಿದ್ಯಾರ್ಹತೆಯಲ್ಲಿ ವಕೀಲ ಪದವಿ ಪಡೆದಿದ್ದಾರೆ. ಎಐಸಿಸಿ ವಕ್ತಾರೆಯಾಗಿದ್ದ ಐಶ್ವರ್ಯ ಮಹದೇವ್ ಅವರು ಮಾಜಿ ಶಾಸಕ ಮಂಚನಹಳ್ಳಿ ಮಹಾದೇವ್ ಅವರ ಪುತ್ರಿ. 14 ವರ್ಷಗಳ ಹಿಂದೆ ಅವರು ಮೃತಪಟ್ಟಿದ್ದು, ಆ ಬಳಿಕ ಪುತ್ರಿ ಐಶ್ವರ್ಯ ಅವರು ಕ್ಷೇತ್ರ ಹಾಗೂ ಪಕ್ಷದ ವಿವಿಧ ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದಾರೆ. ಸದ್ಯ ಕೆಪಿಸಿಸಿ ಸೋಷಿಯಲ್ ಮೀಡಿಯಾ ವಿಭಾಗಕ್ಕೆ ಅಧ್ಯಕ್ಷೆಯಾಗಿದ್ದಾರೆ.
ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!
ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






