Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಶಿಕ್ಷಣ ಇಲಾಖೆಯ ವಿರುದ್ಧ ರೊಚ್ಚಿಗೆದ್ದ ಕೃಪಾ : ಹೈಕೋರ್ಟ್ ಮೆಟ್ಟಿಲೇರಲು ನಿರ್ಧಾರ..!

Facebook
Twitter
Telegram
WhatsApp

RTE ಶುಲ್ಕ ಮರುಪಾವತಿ ಮಾಡದೆ ಇರುವ ಶಿಕ್ಷಣ ಇಲಾಖೆ ವಿರುದ್ಧ ಕೃಪಾ ಮತ್ತೆ ಸಿಡಿದೆದ್ದಿದೆ. ಬೇಡಿಕೆಗಳನ್ನು ಈಡೇರಿಸದೆ ಇದ್ದಲ್ಲಿ ಕನ್ನಡ ರಾಜ್ಯೋತ್ಸವದ ದಿನವೇ ಕರಾಳ ದಿನವನ್ನಾಗಿ ಆಚರಣೆ ಮಾಡುವುದಾಗಿ ಖಾಸಗಿ ಶಾಲೆಗಳ ಒಕ್ಕೂಟ ಸರ್ಕಾರಕ್ಕೆ ಎಚ್ಚರಿಕೆಯನ್ನು ನೀಡಿದೆ.

ಇಂದು ಖಾಸಗಿ ಹೊಟೇಲ್ ನಲ್ಲಿ ಕೃಪಾ ಖಾಸಗಿ ಶಾಲೆಗಳ ಒಕ್ಕೂಟ ಸಭೆ ಸೇರಿ ಒಂದು ನಿರ್ಣಯ ತೆಗೆದುಕೊಂಡಿದ್ದಾರೆ. ಕೊನೆಯ ವಾರ್ನಿಂಗ್ ಒಳಗೆ ಒಂದು ನಿರ್ಧಾರ ತೆಗೆದುಕೊಳ್ಳದೆ ಇದ್ದರೆ ಕೋರ್ಟ್ ನಲ್ಲೇ ವಿಚಾರ ಬಗೆಹರಿಸಿಕೊಳ್ಳುವ ನಿರ್ಧಾರಕ್ಕೆ ಬಂದಿದ್ದಾರೆ. ಹತ್ತು ವರ್ಷಕ್ಕೊಮ್ಮೆ ಮಾನ್ಯತೆ ನವೀಕರಣದ ಆದೇಶ ಇದ್ರು ಕೂಡ, ಒಂದಿಲ್ಲೊಂದು ತಗಾದೆ ತೆಗೆದು ಕಿರಿಕಿರಿ ಮಾಡುವ ಆರೋಪವಿದೆ. 1995ರ ನಂತರದ ಶಾಲೆಗಳು ಕನ್ನಡವನ್ನು ಮಕ್ಕಳಿಗೆ ಕಲಿಸುವ ಶಾಲೆಗಳಿಗೆ ಅನುದಾನ ಕೊಡದೆ ವಂಚನೆ ಅಲಮಾಡಲಾಗುತ್ತಿದೆ‌. ಒಂದಲ್ಲ ಎರಡಲ್ಲ ಸುಮಾರು 29 ವರ್ಷಗಳಿಂದ ಅನುದಾನ ಕೊಡದೆ ಅದೆಷ್ಟೋ ಶಾಲೆಗಳು ಮುಂಚುವ ಹಂತಕ್ಕೆ ಬಂದು ನಿಂತಿವೆ.

3-4 ವರ್ಷ ಕಳೆದರು RTE ಶುಲ್ಕ ಮರುಪಾವತಿ ಮಾಡುತ್ತಿಲ್ಲ. ಇನ್ನೆರಡು ದಿನದೊಳಗೆ ಈ ಸಮಸ್ಯೆಯನ್ನು ಬಗೆಹರಿಸಬೇಕು. ಇಲ್ಲವಾದರೆ ನವೆಂಬರ್ 1ರಂದು ಕಪ್ಪು ಪಟ್ಟಿ ಧರಿಸಿ ರಾಜ್ಯೋತ್ಸವವನ್ನು ಆಚರಣೆ ಮಾಡುತ್ತೀವಿ. ಅದರ ಜೊತೆಗೆ ಕೋರ್ಟ್ ಮೆಟ್ಟಿಲೇರಿ ಈ ಸಮಸ್ಯೆಯನ್ನು ಬಗೆಹರಿಸಿಕೊಳ್ಳುತ್ತೀವಿ. RTE ಸಮಸ್ಯೆ, ಸೀಟ್ ಸಮಸ್ಯೆ, ಖಾಸಗಿ ಶಾಲೆಗಳಿಗೆ ಅನುದಾನ ಕೊಡದೆ ಕಾಡಿಸುವುದು ಈ ಎಲ್ಲದಕ್ಕೂ ಬೇಗ ಪರಿಹಾರ ಸಿಗಬೇಕು. ಸಮನ್ವಯ ಸಭೆ ಕರೆದು ಅಂತಿಮ ತೀರ್ಮಾನ ಹೇಳಬೇಕು ಎಂದು ಕೃಪಾ ಒತ್ತಡ ಹಾಕಿದೆ. ಈ ತಿಂಗಳು ಡೆಡ್ ಲೈನ್ ನೀಡಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸಾಹಿತ್ಯವನ್ನು ಓದುವುದು, ಹಾಡುವುದು ಉತ್ತಮ ಹವ್ಯಾಸ : ಬಿ.ಎ.ಸೀತಾರಾಂ

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 27 : ಹಾಡುಗಾರಿಕೆಯಂತಹ ಉತ್ತಮ ಹವ್ಯಾಸಗಳನ್ನು ಯುವಕರು ಬೆಳೆಸಿಕೊಳ್ಳಬೇಕು ಎಂದು ದಾವಣಗೆರೆ ಜಿಲ್ಲಾಸ್ಪತ್ರೆಯ ನಿವೃತ್ತ ನೇತ್ರತಜ್ಞ ಬಿ.ಎ.ಸೀತಾರಾಂ ಹೇಳಿದ್ದಾರೆ. ಅವರು ಭಾನುವಾರ ನಗರದ ಸ್ಕೌಟ್ ಮತ್ತು ಗೈಡ್ ಭವನದಲ್ಲಿ ಏರ್ಪಡಿಸಿದ್ದ

ಚನ್ನಪಟ್ಟಣ ಗೆಲುವಿನ ಶುಭ ಸೂಚನೆ ನೀಡಿದಳಾ ಹಾಸನಾಂಬೆ ತಾಯಿ : ಕುಮಾರಸ್ವಾಮಿ ದೇವರ ಮುಂದೆ ನಿಂತಾಗ ಆಗಿದ್ದೇನು..?

ಹಾಸನ: ಈಗಾಗಲೇ ಹಾಸನಾಂಬೆಯ ದರ್ಶನ ಆರಂಭವಾಗಿದೆ. ಹತ್ತು ದಿನಗಳು ಮಾತ್ರ ತಾಯಿ ದರ್ಶನ ಭಾಗ್ಯಾ ಕೊಡುತ್ತಾಳೆ. ಈ ಹತ್ತು ದಿನಗಳ ಕಾಲ ರಾಜಕಾರಣಿಗಳು, ಸಾರ್ವಜನಿಕರು ಎಲ್ಲರೂ ದರ್ಶನ ಪಡೆಯಲು ಕ್ಯೂ ನಿಂತಿರುತ್ತಾರೆ. ಇಂದು ಕೇಂದ್ರ

ಊಟದ ವಿಚಾರಕ್ಕೆ ತಂದೆಯನ್ನೇ ಕೊಂದ ಮಗ..!

ಹಿರಿಯೂರು : ಕ್ಷುಲ್ಲಕ ಕಾರಣಕ್ಕೆ ನಡುವೆ ಜಗಳವಾಗಿದ್ದು, ಈ ಜಗಳದಿಂದ ತಂದೆಯ ಕೊಲೆಯಾಗಿರುವ ಘಟನೆ ಕುಂದಲಗುರ ಗ್ರಾಮದಲ್ಲಿ ನಡೆದಿದೆ. 50 ವರ್ಷದ ರಂಗಸ್ವಾಮಿ ಮೃತ ದುರ್ದೈವಿಯಾಗಿದ್ದಾರೆ. ಕೇವಲ ಊಟದ ವಿಚಾರಕ್ಕೆ ತಂದೆ ಮಗನ ನಡುವೆ

error: Content is protected !!