ಇಡೀ ರಾಜ್ಯಕ್ಕೆ ಬೆಂಕಿ ಹಚ್ಚಿದವನು ನೀನು : ಜಮೀರ್ ವಿರುದ್ಧ ಕಿಡಿಕಾರಿದ ಈಶ್ವರಪ್ಪ

1 Min Read

 

ಬೆಂಗಳೂರು: ಸದನದಲ್ಲಿ ಇಂದು ಜಮೀರ್ ವಿರುದ್ಧ ಏಕವಚನದಲ್ಲೇ ಈಶ್ವರಪ್ಪ ಅವರು ನೇರವಾಗಿ ಗರಂ ಆದ ಘಟನೆ ನಡೆದಿದೆ. ಸಿದ್ದರಾಮಯ್ಯ ಅವರ ಪರ ನಿಂತರು ಎಂಬ ಕಾರಣಕ್ಕೆ ಈಶ್ವರಪ್ಪ ಕಿಡಿಕಾರಿದ್ದಾರೆ.

 

ಸದನದಲ್ಲಿ ಮಾತನಾಡಿದ ಅವರು, ಇಡೀ ರಾಜ್ಯಕ್ಕೆ ನೀನು ಬೆಂಕಿ ಹಚ್ಚಿದವನು. ಸುಮ್ಮನೆ ಕುಳಿತುಕೊಳ್ಳೋ ಎಂದು ಈಶ್ವರಪ್ಪ ಗರಂ ಆಗಿದ್ದಾರೆ. ಈ ರೀತಿ ಏಕವಚನದಲ್ಲಿ ಮಾತನಾಡಿದ್ದಕ್ಕೆ ಸದನದಲ್ಲಿ ಕಾಂಗ್ರೆಸ್ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಸದನದಲ್ಲಿ ಕಾನೂನು ಸುವ್ಯವಸ್ಥೆ ಬಗ್ಗೆ ಸಿದ್ದರಾಮಯ್ಯ ಚರ್ಚೆ ನಡೆಸಿದ್ದಾರೆ. ಈ ವೇಳೆ ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಕದಡಿದೆ. ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಇದ್ರೆ ದೇಶ ಅಭಿವೃದ್ಧಿಯಾಗುತ್ತದೆ. ಪ್ರತಿಯೊಬ್ಬರಿಗೂ ಉತ್ತಮ ಬದುಕು, ಸಮಾನ ಶಿಕ್ಷಣ ಬೇಕು ಎಂದಿದ್ದರು.

ವಿಧಾನಸಭೆಯಲ್ಲಿ ನಿಯಮ 69ರ ಮೇಲೆ ಚರ್ಚೆ ಮಾಡಲಾಗುತ್ತಿತ್ತು. ಚರ್ಚೆ ವೇಳೆ ಸಿದ್ದರಾಮಯ್ಯ ಅವರಿಗೆ ಜಮೀರ್ ಅಹ್ಮದ್ ಬೆಂಬಲವಾಗಿ ನಿಂತಿದ್ದರು. ಹೀಗಾಗಿ ಜಮೀರ್ ಅಹ್ಮದ್ ಮೇಲೆ ಈಶ್ವರಪ್ಪ ಕಿಡಿಕಾರಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *