Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಿದ್ದರಾಮಯ್ಯ ವಿರುದ್ದ ಕೆ ಎಸ್ ಈಶ್ವರಪ್ಪ ವಾಗ್ದಾಳಿ

Facebook
Twitter
Telegram
WhatsApp

ಬೆಂಗಳೂರು: ಒಂದು ಕಾಲದಲ್ಲಿ ಹಿಂದುಳಿದವರು, ಅಲ್ಪಸಂಖ್ಯಾತರು ಮತ್ತು ದಲಿತರು ಕಾಂಗ್ರೆಸ್ ಜೊತೆಗಿದ್ದರು. ಕಾಂಗ್ರೆಸ್ ಜಾತಿ, ಮತ ರಾಜಕೀಯವನ್ನು ನೆಚ್ಚಿಕೊಂಡಿದೆ. ಈಗ ಹಿಂದುಳಿದವರು ಮತ್ತು ದಲಿತರಲ್ಲಿ ಶೇ 70ಕ್ಕೂ ಹೆಚ್ಚು ಜನರು ಬಿಜೆಪಿ ಜೊತೆಗಿದ್ದಾರೆ ಎಂದು ಸಚಿವ ಕೆ ಎಸ್ ಈಶ್ವರಪ್ಪ ಹೇಳಿದರು.

ಈ ವೇಳೆ ಮಾತನಾಡಿದ ಅವರು, ರಾಷ್ಟ್ರೀಯಯವಾದ ಮುಸ್ಲಿಮರು ಬಿಜೆಪಿ ಜೊತೆಗಿದ್ದಾರೆ. ಅವರೆಲ್ಲರೂ ನರೇಂದ್ರ ಮೋದಿಯವರು, ಬಿ.ಎಸ್.ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಅವರ ಅಭಿವೃದ್ಧಿ ಕಾರ್ಯಗಳನ್ನು ಗುರುತಿಸಿ ನಮ್ಮ ಜೊತೆಗಿದ್ದಾರೆ ಎಂದು ತಿಳಿಸಿದರು.

ಕಂಬಳಿ ವಿಚಾರ ಮೇಲೆತ್ತಿ ಸ್ವಲ್ಪವಾದರೂ ಮತ ಪಡೆಯಲು ಕಾಂಗ್ರೆಸ್‌ನವರು ಮುಂದಾಗಿದ್ದಾರೆ ಎಂದು ಸಿದ್ದರಾಮಯ್ಯ ವಿರುದ್ದ ವಾಗ್ದಾಳಿ ನಡೆಸಿದರು. ಹೆಬ್ಬೆಟ್ಟು ಗಿರಾಕಿ ಅಂತ ಪ್ರಧಾನಿಯನ್ನ, ಮುಖ್ಯಮಂತ್ರಿ ಆಗಿದ್ದವರು ಕರೆಯುತ್ತಾರೆ.ಕುರುಬರನ್ನ ಓಲೈಕೆ ಮಾಡೋ ಕೆಲಸ ಮಾಡ್ತಿದ್ದಾರೆ, ಯಾರನ್ನೂ ನಾನು ವೈಯಕ್ತಿಕ ಟೀಕೆ ಮಾಡೋದಿಲ್ಲ. ಕನಕ ಜಯಂತಿ ಮಾಡಿದ್ದು ಕುರುಬರಿಗಾಗಿ ಅಲ್ಲ, ಜಾತಿಗಾಗಿ ಅಲ್ಲ. ಅವರದ್ದು ಕೂಡ ನಮ್ಮಂತೆಯೇ ಚಿಂತನೆ ಇತ್ತು. ಕುಲ ಕುಲ ಕುಲವೆಂದು ಒಡೆದಾಡದಿರಿ ಅಂತ ಹೇಳಿದ್ರು ಎಂದು ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದರು.

ಇಡೀ ದೇಶದಲ್ಲಿ ಶೌಚಾಲಯ ಕಟ್ಟಲಾಗಿದೆ. ಹಿಂದೆ 70 ವರ್ಷದಲ್ಲಿ ಕೊಟ್ಟಿರುವ ಶೌಚಾಲಯದ ನೂರರಷ್ಟು ಶೌಚಾಲಯ ಮೋದಿ ಅವರು ಬಂದ ಮೇಲೆ ಮಾಡಿದ್ದೇವೆ. ಮನೆ ಮನೆಗೆ ನೀರು ತಲುಪಿಸೋ ಕೆಲಸ ಮೋದಿ ಅವರು ಬಂದ ನಂತರ ಆಗಿದೆ. ಮತ್ತೆ ಅಸೆಂಬ್ಲಿ ಬರುತ್ತೆ, ಲೋಕಸಭೆ ಚುನಾವಣೆ ಬರುತ್ತೆ ನಾವು ಗೆಲ್ಲುತ್ತೇವೆ ಎಂದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮೇ 15 ರಂದು ರಾಜವೀರ ಮದಕರಿನಾಯಕರ 242 ನೇ ಪುಣ್ಯಸ್ಮರಣೆ : ಬಿ.ಕಾಂತರಾಜ್

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 13  : ರಾಜವೀರ ಮದಕರಿನಾಯಕರ 242 ನೆ ಪುಣ್ಯಸ್ಮರಣೆ ಮೇ. 15 ರಂದು ಸರಳವಾಗಿ

ಆಂಬ್ಯುಲೆನ್ಸ್ ಬಂದಿದ್ದರೆ ನಟಿ ಪವಿತ್ರಾ ಬದುಕುತ್ತಿದ್ದರೇನೋ..?

    ಕನ್ನಡ ಹಾಗೂ ತೆಲುಗಿನ ಖ್ಯಾತ ನಟಿ ಪವಿತ್ರಾ ಜಯರಾಂ ಭೀಕರ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಈ ವಿಚಾರ ತೆಲುಗು ಇಂಡಸ್ಟ್ರಿಗೆ ದೊಡ್ಡ ಆಘಾತವನ್ನೇ ತಂದೊಡ್ಡಿದೆ. ತ್ತಿಯನಿ ಧಾರಾವಾಹಿಯಲ್ಲಿ ತಿಲೋತ್ತಮನಾಗಿ ಎಲ್ಲರ ಗಮನ ಸೆಳೆದಿದ್ದರು.

ಜೇನುತುಪ್ಪ ಬಳಸುವುದರಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ ?

ಸುದ್ದಿಒನ್ : ಜೇನುತುಪ್ಪದ ಬಗ್ಗೆ ವಿಶೇಷವಾಗಿ ಹೇಳಬೇಕಾಗಿಲ್ಲ. ಜೇನುತುಪ್ಪದಿಂದ ಅನೇಕ ಪ್ರಯೋಜನಗಳಿವೆ. ಜೇನು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇದು ಎಲ್ಲಾ ಔಷಧೀಯ ಗುಣಗಳನ್ನು ಹೊಂದಿದೆ.  ಮಕ್ಕಳಿಂದ ಹಿಡಿದು ದೊಡ್ಡವರವರೆಗೆ ಎಲ್ಲರಿಗೂ ಜೇನು ತುಂಬಾ ಆರೋಗ್ಯಕಾರಿ.

error: Content is protected !!