Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮುಂದೆ ಬಿಜೆಪಿ ಗಲ್ಲಿ ಗಲ್ಲಿಯಲ್ಲಿ ಇಬ್ಭಾಗವಾಗುತ್ತೆ : ಈಶ್ವರಪ್ಪ ಎಚ್ಚರಿಕೆ

---Advertisement---

 

ಶಿವಮೊಗ್ಗ: ಬಿಜೆಪಿ ನಾಯಕರು ಬೆಳಗಾವಿಯಲ್ಲಿ ಸಭೆ ನಡೆಸಿದ್ದಾರೆ. ಈ ಸಂಬಂಧ ಕೆ.ಎಸ್.ಈಶ್ವರಪ್ಪ ಅವರು ಆತಂಕ ವ್ಯಕ್ತಪಡಿಸಿದ್ದಾರೆ. ಬಿಜೆಪಿ ನಾಯಕರಿಗೆ ಎಚ್ಚರಿಕೆಯನ್ನು ನೀಡಿದ್ದಾರೆ.

 

ಶಿವಮೊಗ್ಗದಲ್ಲಿ ಮಾತನಾಡಿದ ಈಶ್ವರಪ್ಪ ಅವರು, ಬೆಳಗಾವಿಯಲ್ಲಿ ಬಿಜೆಪಿ ನಾಯಕರು ಸಭೆ ನಡೆಸಿದ್ದು ಆತಂಕ ತಂದಿದೆ. ಅವರು ಪಕ್ಷದಲ್ಲಿ ಏನೇನು ನಡೆದಿದೆ ಎಂಬುದನ್ನು ಹೇಳಿಕೊಂಡಿಲ್ಲ. ಪಾದಯಾತ್ರೆ ನಡೆಸುವುದಾಗಿ ಹೇಳಿಕೊಂಡಿದ್ದಾರೆ. ಒಂದು ವೇಳೆ ಇದು ನಡೆದಿದ್ದೇ ನಿಜವಾದರೆ ಬಿಜೆಪಿ ಗಲ್ಲಿ ಗಲ್ಲಿಯಲ್ಲಿ, ತಾಲೂಕು ಮಟ್ಟದಲ್ಲಿ ಇಬ್ಭಾಗವಾಗಲಿದೆ. ಸಭೆ ಸೇರಿದ ನಾಯಕರಲ್ಲಿ ಹಲವರು ಆರ್ ಎಸ್ ಎಸ್ ನಲ್ಲಿ ಇದ್ದವರು. ಬಿಜೆಪಿಯನ್ನು ಕಟ್ಟಿದವರು. ಪಕ್ಷದಲ್ಲಿ ತಮಗೆ ಆದ ನೋವನ್ನು ಅವರು ಹೇಳಿಕೊಂಡಿಲ್ಲ.

ಪಕ್ಷದ ಸಿದ್ಧಾಂತದ ಅಡಿ ಕೆಲಸ‌ಮಾಡಿದರು ಸಹ ಅವರು ನೋವು ತಿಂದಿದ್ದಾರೆ. ಗಣೇಶ ಚತುರ್ಥಿ ಬಳಿಕ ಪಾದಯಾತ್ರೆ ಮಾಡುವುದಾಗಿ ಹೇಳಿದ್ದಾರೆ. ಕೇಂದ್ರ ನಾಯಕರು ಸಭೆ ನಡೆಸಿದ ನಾಯಕರನ್ನು ಕಡೆಗಣಿಸಬಾರದು. ಹನ್ನೆರಡು ಜನ ಮಾತ್ರ ಸಭೆ ನಡೆಸಿದ್ದಾರೆ. ಕೇಂದ್ರದ ನಾಯಕರು ತಾತ್ಸಾರ ಮಾಡಬಾರದು. ಪಾದಯಾತ್ರೆ ನಡೆಸಿದ್ದೇ ಆದಲ್ಲಿ ಗಲ್ಲಿ ಗಲ್ಲಿಯಲ್ಲೂ ಪಕ್ಷ ಎರಡು ಹೋಳಾಗುತ್ತದೆ.

ಯಡಿಯೂರಪ್ಪ ಪುತ್ರ ವುಜಯೇಂದ್ರ ಅವರನ್ನು ರಾಜ್ಯಾಧ್ಯಜ್ಷರನ್ನಾಗಿ‌ಮಾಡಿದ್ದೇ ಎಲ್ಲರಿಗೂ ಆಶ್ಚರ್ಯವಾಗಿತ್ತು. ಯಡಿಯೂರಪ್ಪ ಕುಟುಂಬಕ್ಕೆ ಅಧಿಕಾರ ನೀಡಿದ್ದೆ ಲೋಕಸಭೆಯಲ್ಲಿ ಬಿಜೆಪಿ 25ರಿಂದ 17 ಸ್ಥಾನಕ್ಕೆ ಇಳಿದಿದ್ದು. ಪ್ರಧಾನಿ ಮೋದಿಯವರ ನೇತೃತ್ವದಲ್ಲಿ ಪಕ್ಷ ಬಲ ಹೊಂದಿತ್ತು.ಚಾಗ ಹೆಚ್ಚು ಸ್ಥಾನ ಗಳಿಸಿತ್ತು. ಆದರೆ ಅದು ಈಗ ಸಾಧ್ಯವಾಗಲಿಲ್ಲ. ಯಡಿಯೂರಪ್ಪ ಅವರ ಕುಟುಂಬದ ಕೈಯಲ್ಲಿ ಪಾರ್ಟಿ ಕೊಡಲು ಕೃಂದ್ರದ ನಾಯಕರಿಗೆ ಯಾಕಿಷ್ಟು ಮೋಹ ಎಂದು ಈಶ್ವರಪ್ಪ ಪ್ರಶ್ನೆ ಮಾಡಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment