Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

KSOU ಹಗರಣ : ಸಿಬಿಐ ತನಿಖೆ ಆರಂಭ..!

---Advertisement---

 

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ 300 ಕೋಟಿಗೂ ಅಧಿಕ ಹಣದ ದುರುಪಯೋಗಕ್ಕೆ ಸಂಬಂಧಿಸಿದಂತೆ ಎಫ್ಐಆರ್ ದಾಖಲಾಗಿದೆ‌. ಈ ಸಂಬಂಧ ಸಿಬಿಐ ತನಿಖೆಗೆ ವಹಿಸಲಾಗಿದೆ. ಈಗಾಗಲೇ ತನಿಖೆ ಶುರುವಾಗಿದ್ದು, ಅಪರಿಚಿತ ಅಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲಾಗಿದೆ.

 

ಕೆಎಸ್ಒಯು ಮೈಸೂರಿನಲ್ಲಿ ತನ್ನ ಅಧಿಕೃತ ಸಂಸ್ಥೆಯನ್ನು ಹೊಂದಿದ್ದು, ದೇಶ & ವಿದೇಶಗಳಲ್ಲಿ ಸಹಯೋಗದ ಸಂಸ್ಥೆಗಳನ್ನು ಹೊಂದಿದೆ. ಕೆಎಸ್ಒಯು ಸಹಯೋಗ ಸಂಸ್ಥೆಗಳೊಂದಿಗಿನ ಕಾರ್ಯಕ್ರಮದಲ್ಲಿ ಅಪರಿಚಿತ ಅಧಿಕಾರಿಗಳು 300 ಕೋಟಿಗೂ ಅಧಿಕ ಹಣದ ದುರುಪಯೋಗ ಮಾಡಿದ್ದಾರೆಂಬ ಆರೋಪ ಕೇಳಿ ಬಂದಿದೆ.

 

ಇದೀಗ ದಾಖಲಾಗಿರುವ ಎಫ್ಐಆರ್ ನಲ್ಲಿ ಸಹಯೋಗ ಸಂಸ್ಥೆಗಳು ಪ್ರವೇಶ ಶುಲ್ಕ, ಪರೀಕ್ಷಾ ಶುಲ್ಕ ಮತ್ತು ವಿಶ್ವವಿದ್ಯಾನಿಲಯಕ್ಕೆ ಜಮೆ ಮಾಡಬೇಕಾದ ಶುಲ್ಕವನ್ನು ವಿದ್ಯಾರ್ಥಿಗಳಿಂದ ಸಂಗ್ರಹಿಸಿದ ಶುಲ್ಕದಲ್ಲಿ ಜಮಾ ಮಾಡುತ್ತಿವೆ ಎಂಬ ಆರೋಪವಿದೆ. 2013-14 ಹಾಗೂ 2024-15 ರಲ್ಲಿ ಜಮೆಯಾದ 50 ಕೋಟಿ ಹಣವೂ ಬರೀ ಲೆಕ್ಕಪತ್ರದಲ್ಲಿ ಮಾತ್ರ ಇದ್ದು, ಹಣದ ರೂಪದಲ್ಲಿ ಇರಲಿಲ್ಲ. ಆಂತರಿಕ ಹಣಕಾಸು ಪರಿಶೋಧನ ವೇಳೆ ಹಣಕಾಸು ಅಕ್ರಮ ಎಸಗಿರುವುದು ಕಂಡು ಬಂದಿದೆ. ಆದರೆ ಅದಕ್ಕೆ ಯಾರು ಕಾರಣ ಎಂಬುದು ದೃಢಪಟ್ಟಿಲ್ಲ. ಹೀಗಾಗಿ ಈ ಪ್ರಕರಣವನ್ನು ಸಿಬಿಐಗೆ ವಹಿಸಲಾಗಿದ್ದು, ಸಿಬಿಐ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment