ಶಿವಮೊಗ್ಗ; ಕೋರ್ಟ್ ಆದೇಶಕ್ಕೂ ಕ್ಯಾರೆ ಎನ್ನದ ಕೆಎಸ್ಆರ್ಟಿಸಿ ಬಸ್ ಗೆ ಸರಿಯಾದ ಶಿಕ್ಷೆಯನ್ನ ಸಾಗರ ಕೋರ್ಟ್ ವಿಧಿಸಿದೆ. ಅಪಘಾತ ಮಾಡಿಯೂ ಪರಿಹಾರ ನೀಡದ ಕೆಎಸ್ಆರ್ಟಿಸಿ ಬಸ್ ಅನ್ನು ಜಪ್ತಿ ಮಾಡುವಂತೆ ಶಿವಮೊಗ್ಗ ಜಿಲ್ಲೆಯ ಸಾಗರ ಕೋರ್ಟ್ ನಿಂದ ಬಸ್ ಜಪ್ತಿಯ ಆದೇಶ ನೀಡಿದೆ. ಅಷ್ಟಕ್ಕೂ ಅಂಥ ಘಟನೆ ಏನು ಎಂಬುದರ ಮಾಹಿತಿ ಇಲ್ಲಿದೆ ನೋಡಿ.
2022ರ ಜುಲೈ 7ರಂದು ಬೆಳಗಿನ ಜಾವ ಕೆಎಸ್ಆರ್ಟಿಸಿ ಬಸ್ ನಿಂದ ಒಂದು ಅಪಘಾತ ನಡೆದಿತ್ತು. ಗಣೇಶ್ ಎಂಬಾತ ಬೆಳಗಿನ ಜಾವ ಸೈಕಲ್ ಏರಿ ಪೇಪರ್ ಹಾಕಿ, ಮನೆಗೆ ಸಹಾಯ ಮಾಡುತ್ತಿದ್ದ. ಆದರೆ ಅಂದು ಪ್ರವಾಸಿ ಮಂದಿರದ ಎದುರು ಕೆಎಸ್ಆರ್ಟಿಸಿ ಬಸ್ ಸೈಕಲ್ ಗೆ ಡಿಕ್ಕಿ ಹೊಡೆದುದರ ಪರಿಣಾಮ ಗಣೇಶ್ ಸ್ಥಳದಲ್ಲಿಯೇ ಮೃತಪಟ್ಟಿದ್ದ. ಮೃತ ಗಣೇಶ್ ಪೋಷಕರು ಪರಿಹಾರಕ್ಕಾಗಿ ಶಿವಮೊಗ್ಗದ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ಅಂದು ಕೋರ್ಟ್ ಕೂಡ ಮೃತ ಕುಟುಂಬಕ್ಕೆ 19 ಲಕ್ಷ ಪರಿಹಾರ ನೀಡುವಂತೆ 2024ರ ಜುಲೈ 8ರಂದು ನ್ಯಾಯಾಲಯವೂ ಆದೇಶ ನೀಡಿತ್ತು. ಆದರೆ ಪರಿಹಾರ ಹಣವನ್ನು ಮಾತ್ರ ಕೆಎಸ್ಆರ್ಟಿಸಿ ಇಲ್ಲಿಯವರೆಗೂ ನೀಡಿಲ್ಲ.
ಇದರಿಂದ ನೊಂದ ಗಣೇಶನ ತಾಯಿಉಮಾ ಅವರು ನ್ಯಾಯಾಲಯಕ್ಕೆ ಅಮಲ್ಜಾರಿ ಅರ್ಜಿ ಸಲ್ಲಿಕೆ ಮಾಡಿದರು. ಈ ಅರ್ಜಿ ಸಂಬಂಧ ಕೆಎಸ್ಆರ್ಟಿಸಿ ಗೆ ಮತ್ತೆ ನೋಟೀಸ್ ಜಾರಿ ಮಾಡಲಾಯ್ತು. ಆದರೂ ಪರಿಹಾರದ ಹಣ ಮಾತ್ರ ನೀಡಲಿಲ್ಲ. ಇದೀಗ ಕೋರ್ಟ್ ಸೀರಿಯಸ್ ಆಗಿ ನಿರ್ಧಾರ ತೆಗೆದುಕೊಂಡಿದ್ದು, ಶಿರಸಿ ಡಿಪೋಗೆ ಸೇರಿದ ಬಸ್ ಅನ್ನು ಜಪ್ತಿ ಮಾಡಿ, ನ್ಯಾಯಾಲಯದ ಆವರಣದಲ್ಲಿಯೇ ನಿಲ್ಲಿಸಲಾಗಿದೆ.
ಬೆಂಗಳೂರು; ಪರೀಕ್ಷೆ ಬರೆದು ಫಲಿತಂಶಕ್ಕಾಗಿ ಕಾಯುತ್ತಿರುವ ದ್ವಿತೀಯ ಪಿಯುಸಿ ಮಕ್ಕಳಿಗೆ ಇಂದು ಢವಢವ ಶುರುವಾಗಿದೆ. ಎಷ್ಟೇ ಚೆನ್ನಾಗಿ ಬರೆದಿದ್ದರು, ನಿರೀಕ್ಷೆ…
ಸುದ್ದಿಒನ್ : ಸಾಂಪ್ರದಾಯಿಕವಾಗಿ, ಅನ್ನ ನಮ್ಮ ಪ್ರಧಾನ ಆಹಾರ. ಬಹುತೇಕ ಎಲ್ಲಾ ಊಟಗಳಲ್ಲಿ ಅನ್ನವು ಪ್ರಧಾನ ಆಹಾರವಾಗಿದೆ. ದಿನಕ್ಕೆ ಒಂದಕ್ಕಿಂತ…
ಈ ರಾಶಿಯವರಿಗೆ ವ್ಯಾಪಾರ ವಹಿವಾಟಗಳಲ್ಲಿ ನಷ್ಟವಾಗಲು ಏನು ಕಾರಣ ಇರಬಹುದು? ಲಾಭ ಗಳಿಸಲು ಏನು ಮಾಡಬೇಕು. ಮಂಗಳವಾರದ ರಾಶಿ ಭವಿಷ್ಯ…
ಭವಾನಿ ರೇವಣ್ಣ ಇಂದು ಹೊಳೆನರಸೀಪುರದ ತಮ್ಮ ಸ್ವಗೃಹಕ್ಕೆ ಬಂದಿದ್ದಾರೆ. ಅವರು ಬರುತ್ತಿದ್ದಂತೆ ಹೂಗಳ ಮಳೆ ಸುರಿಸಿ ಸ್ಚಾಗತಕೋರಿದ್ದಾರೆ. ಅವರ ಅಭಿಮಾನಿಗಳು…
ಕೋಡಿ ಮಠದ ಸ್ವಾಮೀಜಿಗಳ ಭವಿಷ್ಯದ ಬಗ್ಗೆ ಸಾಕಷ್ಟು ಕುತೂಹಲವಂತೂ ಇದ್ದೇ ಇರುತ್ತದೆ. ರಾಜ್ಯ ಮಳೆ, ಬೆಳೆ, ರಾಜಕಾರಣದ ಬಗ್ಗೆ ಭವಿಷ್ಯ…
ಹಿರಿಯೂರು. ಏ.07: ಹಿರಿಯೂರು ಉಪ ವಿಭಾಗದ ವ್ಯಾಪ್ತಿಯ ಹಿರಿಯೂರು ಪಟ್ಟಣದಲ್ಲಿ ಇದೇ ಏಪ್ರಿಲ್ 8 ರಿಂದ 10 ರವರೆಗೆ ವಿದ್ಯುತ್…