Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ವೇತನದ ಸಮಸ್ಯೆ, ಹಿರಿಯ ಅಧಿಕಾರಿಗಳ ಕಿರುಕಳ ಶಂಕೆ : KSRTC ನೌಕರ ಆತ್ಮಹತ್ಯೆ..!

Facebook
Twitter
Telegram
WhatsApp

 

ಯಾದಗಿರಿ: ಕೆಎಸ್ ಆರ್ ಟಿಸಿ ನೌಕರ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ವೇತನ ಸರಿಯಾಗಿ ಆಗದಕ್ಕೆ ಹಾಗೂ

ಹಿರಿಯ ಅಧಿಕಾರಿಗಳ ಕಿರುಕುಳಕ್ಕೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಕಾಶಿನಾಥ್ (46 ) ಆತ್ಮಹತ್ಯೆ ಮಾಡಿಕೊಂಡಿರುವ ನೌಕರ. ಮೃತ ಕಾಶಿನಾಥ್ ಮೂಲತಃ ಕಲಬುರಗಿ ಜಿಲ್ಲೆಯ ಉದನೂರ ಗ್ರಾಮದವರು.

ಯಾದಗಿರಿ ಜಿಲ್ಲೆಯ ಗುರುಮಠಕಲ್ ಪಟ್ಟಣದ ಲಕ್ಷ್ಮಿನಗರದಲ್ಲಿ ಈ ಘಟನೆ ನಡೆದಿದೆ. ನಿನ್ನೆ ತಡರಾತ್ರಿ ಮನೆಯಲ್ಲಿ ನೇಣುಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ ಕಾಶೀನಾಥ್ ಕಳೆದ 11 ವರ್ಷದಿಂದ ಸಾರಿಗೆ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದರು. ಇತ್ತೀಚೆಗೆ ಯಾದಗಿರಿ ಬಸ್ ಡಿಪೋದಲ್ಲಿ ಡ್ರೈವರ್ ಕಂ ಕಂಡಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು.ವೇತನ ಸರಿಯಾಗಿ ಆಗುತ್ತಿಲ್ಲ ಹಾಗೂ ಅಧಿಕಾರಿಗಳ ಕಿರುಕುಳವೇ ಆತ್ಮಹತ್ಯೆಗೆ ಕಾರಣ ಎಂದು ಮೃತ ಕಾಶಿನಾಥನ ಪತ್ನಿ ಜಯಶ್ರೀ ಆರೋಪ ಮಾಡಿದ್ದಾರೆ.

ಆದರೆ ಮೃತ ಕಾಶಿನಾಥ ಅವರ ಪೋಷಕರು ಬೇರೆಯದ್ದೇ ಆರೋಪ ಮಾಡುತ್ತಿದ್ದಾರೆ. ಮಗನ ಸಾವಿಗೆ ಸೊಸೆ ಮತ್ತು ಅವರ ಮನೆಯವರೇ ಕಾರಣ ಎಂದಿದ್ದಾರೆ. ಹೆಂಡತಿ ಹಾಗೂ ಆಕೆಯ ಕುಟುಂಬಸ್ಥರ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾನೆಂದು ಆರೋಪಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ದರ್ಶನ್ ರಾಜಾತಿಥ್ಯ ಫೋಟೋ ರಿವಿಲ್ ಮಾಡಿದ್ದೇ ರಾಜ್ಯ ಸರ್ಕಾರ : ಜೋಶಿ ಹೇಳಿಕೆಗೆ ಡಿಕೆಶಿ ಹೇಳಿದ್ದೇನು..?

  ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ರೌಡಿಶೀಟರ್ ಗಳ ಜೊತೆಗೆ ಕೂತು ಟೀ ಕುಡೊಯುತ್ತಾ, ಸಿಗರೇಟು ಸೇದುತ್ತಾ, ನಗುಮುಖದಲ್ಲಿದ್ದ ದರ್ಶನ್ ಅವರ ಫೋಟೋ ಒಂದು ವೈರಲ್ ಆಗಿತ್ತು. ಆ ಬಳಿಕವೇ ದರ್ಶನ್ ಅವರನ್ನು ಬಳ್ಳಾರಿ

ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಎಂಬಿ ಪಾಟೀಲ್ : ಬೆಳೆಯುತ್ತಲೇ ಇದೆ ಆಕಾಂಕ್ಷಿಗಳ ಪಟ್ಟಿ..!

  ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ಆಗಾಗ ಸಿಎಂ ಬದಲಾವಣೆಯ ವಿಚಾರ ಚರ್ಚೆಗೆ ಬರ್ತಾನೆ ಇರುತ್ತದೆ. ಸಿಎಂ ಸ್ಥಾನದಿಂದ ಸಿದ್ದರಾಮಯ್ಯ ಅವರು ಕೆಳಗಿಳಿಯುತ್ತಾರೆ ಎಂಬ ಚರ್ಚೆಯ ಜೊತೆಗೆ ನಾನು ಕೂಡ ಸಿಎಂ ಆಗಬಹುದು ಎಂಬ ಆಸೆ

Mobile phone : ಮೊಬೈಲ್ ಫೋನ್ ಬಳಸುವುದರಿಂದ ಮೆದುಳಿನ ಕ್ಯಾನ್ಸರ್ ಬರುತ್ತದೆಯೇ ? ಇಲ್ಲಿದೆ ಸ್ಪಷ್ಟತೆ..!

  ಸುದ್ದಿಒನ್ : ಮೊಬೈಲ್ ಫೋನ್ ಬಳಸುವುದರಿಂದ ಮೆದುಳಿನ ಕ್ಯಾನ್ಸರ್ ಬರುತ್ತದೆಯೇ ? ಇದೀಗ ಈ ಪ್ರಶ್ನೆಗೆ WHO ಉತ್ತರ ನೀಡಿದೆ. ವಿಶ್ವ ಆರೋಗ್ಯ ಸಂಸ್ಥೆ ನಡೆಸಿದ ಇತ್ತೀಚಿನ ಅಧ್ಯಯನದಲ್ಲಿ, ಮೊಬೈಲ್ ಫೋನ್ ಬಳಕೆಯಿಂದ

error: Content is protected !!