Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಭಾರತದಲ್ಲಿಯೇ ಕೆ.ಎಸ್.ಆರ್.ಟಿ.ಸಿ.ಗೆ ಉತ್ತಮ ಹೆಸರಿದೆ : ಶಾಸಕ ಎಂ.ಚಂದ್ರಪ್ಪ

Facebook
Twitter
Telegram
WhatsApp

 

ವರದಿ ಮತ್ತು ಫೋಟೋ  ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಚಿತ್ರದುರ್ಗ : ಸಂಸ್ಥೆ ತೊಂದರೆಯಲ್ಲಿದ್ದರೂ ಪ್ರಯಾಣಿಕರಿಗೆ ಹೊರೆಯಾಗಬಾರದೆಂಬ ಉದ್ದೇಶದಿಂದ ಪ್ರಯಾಣ ದರವನ್ನು ಹೆಚ್ಚಿಸಿಲ್ಲ ಎಂದು ಹೊಳಲ್ಕೆರೆ ಶಾಸಕ ಹಾಗೂ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಎಂ.ಚಂದ್ರಪ್ಪ ಹೇಳಿದರು.

ಕೆ.ಎಸ್.ಆರ್.ಟಿ.ಸಿ.ಜಿಲ್ಲಾ ಘಟಕದಲ್ಲಿ ಗುರುವಾರ ಏರ್ಪಡಿಸಲಾಗಿದ್ದ ವಾಲ್ಮೀಕಿ ಜಯಂತಿ ಉದ್ಘಾಟಿಸಿ ಮಾತನಾಡಿದರು.
ಡೀಸೆಲ್ ಲೀ.63 ರೂ.ಇದ್ದಾಗ ಪ್ರಯಾಣ ದರ ಹೆಚ್ಚಳವಾಗಿತ್ತು. ಈಗ ಲೀ.ಗೆ 130 ರೂ.ಗಳಾಗಿದ್ದರು ಪ್ರಯಾಣಿಕರ ಹಿತವನ್ನು ಗಮನದಲ್ಲಿಟ್ಟುಕೊಂಡು ದರ ಏರಿಸಿಲ್ಲ. ನಾಲ್ಕು ವಿಭಾಗಗಳಿಂದ ಒಂದು ಲಕ್ಷ 30 ಸಾವಿರ ನೌಕರರಿದ್ದು, 30 ಸಾವಿರ ಬಸ್‍ಗಳಿವೆ. ಐವತ್ತು ಸ್ಲೀಪರ್ ಕೋಚ್, ಐವತ್ತು ವೋಲ್ವೋ ಒಳಗೊಂಡಂತೆ ಆರು ನೂರು ಹೊಸ ಬಸ್‍ಗಳನ್ನು ಖರೀಧಿಸಲು ರಾಜ್ಯದ ಮುಖ್ಯಮಂತ್ರಿ ಹಣ ಮಂಜೂರು ಮಾಡಿದ್ದಾರೆ.

ಬಿ.ಎಸ್.ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿದ್ದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ಸಹಕಾರ ನೀಡಿದ್ದರೆಂದು ಮೆಚ್ಚುಗೆ ವ್ಯಕ್ತಪಡಿಸಿದರು.
ನಮ್ಮ ಸಂಸ್ಥೆ ನಷ್ಟದಲ್ಲಿದ್ದರೂ ಪ್ರತಿ ತಿಂಗಳು ಒಂದನೆ ತಾರೀಖಿನಂದು ಸಿಬ್ಬಂದಿಗಳಿಗೆ ವೇತನ ನೀಡುತ್ತೇವೆ.

ಎಸ್.ಬಿ.ಐ.ಬ್ಯಾಂಕ್‍ನಲ್ಲಿ ಚಾಲಕರು, ನಿರ್ವಾಹಕರು ಖಾತೆ ತೆರೆದರೆ ಸಾಕು ಆಕಸ್ಮಿಕವಾಗಿ ಅಪಘಾತದಲ್ಲಿ ಮೃತಪಟ್ಟರೆ ಐವತ್ತು ಲಕ್ಷ ರೂ. ಹೆಚ್ಚು ಗಾಯಗಳಾದರೆ ಇಪ್ಪತ್ತು ಲಕ್ಷ ರೂ. ಸಣ್ಣಪುಟ್ಟ ತೊಂದರೆಗಳಾದರೆ ಹತ್ತು ಲಕ್ಷ ರೂ.ಗಳ ಪರಿಹಾರ ನೀಡುವ ಅತ್ಯುತ್ತಮ ಯೋಜನೆಯನ್ನು ಜಾರಿಗೆ ತರಲಾಗಿದೆ. ಹಲವಾರು ಇನ್ಸುರೆನ್ಸ್ ಕಂಪನಿಗಳು ನಮ್ಮ ಹತ್ತಿರ ಬರುತ್ತಿವೆ. ನೀವು ತಿಂಗಳಿಗೆ ಕೇವಲ 54 ರೂ.ಕಟ್ಟಿದರೆ ಕರ್ತವ್ಯದಲ್ಲಿದ್ದಾಗ ಅಪಘಾತವಾಗಿ ಮೃತಪಟ್ಟರೆ ಐವತ್ತು ಲಕ್ಷ ರೂ.ಕೊಡುತ್ತೇವೆ. ಪ್ರಯಾಣಿಕರ ಜೀವ ಚಾಲಕರುಗಳ ಕೈಯಲ್ಲಿದೆ. ಕರ್ತವ್ಯ ಪ್ರಜ್ಞೆಯುಳ್ಳ ಸಿಬ್ಬಂದಿ ನಮ್ಮಲ್ಲಿರುವುದರಿಂದ ಇಡಿ ಭಾರತದಲ್ಲಿಯೇ ಕೆ.ಎಸ್.ಆರ್.ಟಿ.ಸಿ.ಗೆ ಉತ್ತಮ ಹೆಸರಿದೆ ಎಂದು ಗುಣಗಾನ ಮಾಡಿದರು.

ಮಹರ್ಷಿ ವಾಲ್ಮೀಕಿ ಹಲವಾರು ಮಹತ್ತರ ವಿಚಾರಗಳನ್ನು ರಾಮಾಯಣದ ಮೂಲಕ ಸಮಾಜಕ್ಕೆ ಪರಿಚಯಿಸಿದ್ದಾರೆ. ಶ್ರೀರಾಮಚಂದ್ರ, ಲಕ್ಷ್ಮಣ, ಸೀತಾಮಾತೆ, ರಾವಣ ಇವರುಗಳ ಆದರ್ಶಗಳನ್ನು ರಾಮಾಯಣದಲ್ಲಿ ಚಿತ್ರಿಸಿದ್ದಾರೆ. ಹಾಗಾಗಿ ಮಹರ್ಷಿ ವಾಲ್ಮೀಕಿ ಇಂದಿಗೂ ಎಲ್ಲರಿಗೂ ಆದರ್ಶಪ್ರಾಯರಾಗಿದ್ದಾರೆಂದು ತಿಳಿಸಿದರು.
ಸಾಹಿತಿ ಬಿ.ಎಲ್.ವೇಣು, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿ ಬಿ.ಜಿ.ಮಂಜುನಾಥ್, ಪ್ರಾಧ್ಯಾಪಕ ಕರಿಯಪ್ಪ ಮಾಳಿಗೆ, ನಗರಸಭೆ ಮಾಜಿ ಅಧ್ಯಕ್ಷ ಬಿ.ಕಾಂತರಾಜ್, ಕಾರ್ಮಿಕ ಇಲಾಖೆ ಅಧಿಕಾರಿ ಸಿ.ಇ.ಶ್ರೀನಿವಾಸಮೂರ್ತಿ, ಎಸ್.ಎಸ್.ನಿರಂಜನಮೂರ್ತಿ, ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಕೆ.ಹೆಚ್.ನಾಗರಾಜ್, ರೈತ ಮುಖಂಡ ಕೆ.ಪಿ.ಭೂತಯ್ಯ, ಸಂಸ್ಥೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ವಾಲ್ಮೀಕಿ ಜಯಂತಿಯಲ್ಲಿ ಭಾಗವಹಿಸಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಜೆಇಇ” ಮೈನ್ಸ್‌ ಫಲಿತಾಂಶ | ಆಲ್‌ ಇಂಡಿಯಾ ರ್ಯಾಂಕ್‌ ಪಡೆದು ದಾಖಲೆ ನಿರ್ಮಿಸಿದ ಚಿತ್ರದುರ್ಗದ ʼಎಸ್‌ ಆರ್‌ ಎಸ್‌ʼ ವಿದ್ಯಾರ್ಥಿಗಳು

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್.25 :  ನಗರದ ಎಸ್‌ ಆರ್‌ ಎಸ್‌ ಪಿಯು ಕಾಲೇಜಿನ ವಿದ್ಯಾರ್ಥಿಗಳು ಇದೇ ಏಪ್ರಿಲ್‌ ತಿಂಗಳಲ್ಲಿ ನಡೆದ “ಜೆಇಇ ಮೈನ್ಸ್‌”ನ (ರಾಷ್ಟ್ರೀಯ ಅರ್ಹತಾ ಪರೀಕ್ಷೆ) ಎರಡನೇ ಸ್ಲಾಟ್‌ ಪರೀಕ್ಷೆಯಲ್ಲಿ ಕಾಲೇಜಿನ ವಿದ್ಯಾರ್ಥಿ

ಮತದಾನಕ್ಕೂ ಮುನ್ನ ಅರ್ಥ ಪೂರ್ಣ ಟ್ವೀಟ್ ಮಾಡಿದ ಸುಮಲತಾ : ನೆಟ್ಟಿಗರಿಂದ ಪ್ರಶ್ನೆಗಳ ಸುರಿಮಳೆ

  ಲೋಕಸಭಾ ಚುನಾವಣೆಗೆ ಕ್ಷಣಗಣನೆ ಆರಂಭವಾಗಿದೆ. ದಿನ ಬೆಳಗಾಗುವುದರೊಳಗೆ ಚುನಾವಣೆ ಬರಲಿದೆ. ನಾಳೆ ಬೆಳಗ್ಗೆ 7 ಗಂಟೆಯಿಂದಾನೆ ಮತದಾನ ಆರಂಭವಾಗಲಿದೆ. ಹದಿನಾಲ್ಕು ಕ್ಷೇತ್ರಗಳಿಗೆ ಚುನಾವಣೆ ಮಡೆಯಲಿದ್ದು, ಭದ್ರತೆಯೂ ಸಿದ್ಧವಾಗಿದೆ. ಈ ಬಾರಿಯ ಚುನಾವಣೆಯಲ್ಲೂ ಮಂಡ್ಯ

JEE MAIN 2024 : ಉತ್ತಮ ಸಾಧನೆ ಮಾಡಿದ ವೇದ ಪಿಯು ಕಾಲೇಜಿನ ವಿದ್ಯಾರ್ಥಿಗಳು

  ಸುದ್ದಿಒನ್, ಚಳ್ಳಕೆರೆ, ಏಪ್ರಿಲ್. 25 : ವಾರ್ಷಿಕ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆಯ ಫಲಿತಾಂಶದೊಂದಿಗೆ JEE MAINS ನಲ್ಲೂ  ಮೂರು  ADVANCE ಗೆ ಅರ್ಹತೆ ಪಡೆದುಕೊಂಡಿದ್ದಾರೆ ವೇದ ಪಿಯು ಕಾಲೇಜಿನ ವಿದ್ಯಾರ್ಥಿಗಳು. ತಾಲೂಕು ಸಾಣಿಕೆರೆಯ

error: Content is protected !!