ಭಾರತದಲ್ಲಿಯೇ ಕೆ.ಎಸ್.ಆರ್.ಟಿ.ಸಿ.ಗೆ ಉತ್ತಮ ಹೆಸರಿದೆ : ಶಾಸಕ ಎಂ.ಚಂದ್ರಪ್ಪ

 

ವರದಿ ಮತ್ತು ಫೋಟೋ  ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಚಿತ್ರದುರ್ಗ : ಸಂಸ್ಥೆ ತೊಂದರೆಯಲ್ಲಿದ್ದರೂ ಪ್ರಯಾಣಿಕರಿಗೆ ಹೊರೆಯಾಗಬಾರದೆಂಬ ಉದ್ದೇಶದಿಂದ ಪ್ರಯಾಣ ದರವನ್ನು ಹೆಚ್ಚಿಸಿಲ್ಲ ಎಂದು ಹೊಳಲ್ಕೆರೆ ಶಾಸಕ ಹಾಗೂ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಎಂ.ಚಂದ್ರಪ್ಪ ಹೇಳಿದರು.

ಕೆ.ಎಸ್.ಆರ್.ಟಿ.ಸಿ.ಜಿಲ್ಲಾ ಘಟಕದಲ್ಲಿ ಗುರುವಾರ ಏರ್ಪಡಿಸಲಾಗಿದ್ದ ವಾಲ್ಮೀಕಿ ಜಯಂತಿ ಉದ್ಘಾಟಿಸಿ ಮಾತನಾಡಿದರು.
ಡೀಸೆಲ್ ಲೀ.63 ರೂ.ಇದ್ದಾಗ ಪ್ರಯಾಣ ದರ ಹೆಚ್ಚಳವಾಗಿತ್ತು. ಈಗ ಲೀ.ಗೆ 130 ರೂ.ಗಳಾಗಿದ್ದರು ಪ್ರಯಾಣಿಕರ ಹಿತವನ್ನು ಗಮನದಲ್ಲಿಟ್ಟುಕೊಂಡು ದರ ಏರಿಸಿಲ್ಲ. ನಾಲ್ಕು ವಿಭಾಗಗಳಿಂದ ಒಂದು ಲಕ್ಷ 30 ಸಾವಿರ ನೌಕರರಿದ್ದು, 30 ಸಾವಿರ ಬಸ್‍ಗಳಿವೆ. ಐವತ್ತು ಸ್ಲೀಪರ್ ಕೋಚ್, ಐವತ್ತು ವೋಲ್ವೋ ಒಳಗೊಂಡಂತೆ ಆರು ನೂರು ಹೊಸ ಬಸ್‍ಗಳನ್ನು ಖರೀಧಿಸಲು ರಾಜ್ಯದ ಮುಖ್ಯಮಂತ್ರಿ ಹಣ ಮಂಜೂರು ಮಾಡಿದ್ದಾರೆ.

ಬಿ.ಎಸ್.ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿದ್ದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ಸಹಕಾರ ನೀಡಿದ್ದರೆಂದು ಮೆಚ್ಚುಗೆ ವ್ಯಕ್ತಪಡಿಸಿದರು.
ನಮ್ಮ ಸಂಸ್ಥೆ ನಷ್ಟದಲ್ಲಿದ್ದರೂ ಪ್ರತಿ ತಿಂಗಳು ಒಂದನೆ ತಾರೀಖಿನಂದು ಸಿಬ್ಬಂದಿಗಳಿಗೆ ವೇತನ ನೀಡುತ್ತೇವೆ.

ಎಸ್.ಬಿ.ಐ.ಬ್ಯಾಂಕ್‍ನಲ್ಲಿ ಚಾಲಕರು, ನಿರ್ವಾಹಕರು ಖಾತೆ ತೆರೆದರೆ ಸಾಕು ಆಕಸ್ಮಿಕವಾಗಿ ಅಪಘಾತದಲ್ಲಿ ಮೃತಪಟ್ಟರೆ ಐವತ್ತು ಲಕ್ಷ ರೂ. ಹೆಚ್ಚು ಗಾಯಗಳಾದರೆ ಇಪ್ಪತ್ತು ಲಕ್ಷ ರೂ. ಸಣ್ಣಪುಟ್ಟ ತೊಂದರೆಗಳಾದರೆ ಹತ್ತು ಲಕ್ಷ ರೂ.ಗಳ ಪರಿಹಾರ ನೀಡುವ ಅತ್ಯುತ್ತಮ ಯೋಜನೆಯನ್ನು ಜಾರಿಗೆ ತರಲಾಗಿದೆ. ಹಲವಾರು ಇನ್ಸುರೆನ್ಸ್ ಕಂಪನಿಗಳು ನಮ್ಮ ಹತ್ತಿರ ಬರುತ್ತಿವೆ. ನೀವು ತಿಂಗಳಿಗೆ ಕೇವಲ 54 ರೂ.ಕಟ್ಟಿದರೆ ಕರ್ತವ್ಯದಲ್ಲಿದ್ದಾಗ ಅಪಘಾತವಾಗಿ ಮೃತಪಟ್ಟರೆ ಐವತ್ತು ಲಕ್ಷ ರೂ.ಕೊಡುತ್ತೇವೆ. ಪ್ರಯಾಣಿಕರ ಜೀವ ಚಾಲಕರುಗಳ ಕೈಯಲ್ಲಿದೆ. ಕರ್ತವ್ಯ ಪ್ರಜ್ಞೆಯುಳ್ಳ ಸಿಬ್ಬಂದಿ ನಮ್ಮಲ್ಲಿರುವುದರಿಂದ ಇಡಿ ಭಾರತದಲ್ಲಿಯೇ ಕೆ.ಎಸ್.ಆರ್.ಟಿ.ಸಿ.ಗೆ ಉತ್ತಮ ಹೆಸರಿದೆ ಎಂದು ಗುಣಗಾನ ಮಾಡಿದರು.

ಮಹರ್ಷಿ ವಾಲ್ಮೀಕಿ ಹಲವಾರು ಮಹತ್ತರ ವಿಚಾರಗಳನ್ನು ರಾಮಾಯಣದ ಮೂಲಕ ಸಮಾಜಕ್ಕೆ ಪರಿಚಯಿಸಿದ್ದಾರೆ. ಶ್ರೀರಾಮಚಂದ್ರ, ಲಕ್ಷ್ಮಣ, ಸೀತಾಮಾತೆ, ರಾವಣ ಇವರುಗಳ ಆದರ್ಶಗಳನ್ನು ರಾಮಾಯಣದಲ್ಲಿ ಚಿತ್ರಿಸಿದ್ದಾರೆ. ಹಾಗಾಗಿ ಮಹರ್ಷಿ ವಾಲ್ಮೀಕಿ ಇಂದಿಗೂ ಎಲ್ಲರಿಗೂ ಆದರ್ಶಪ್ರಾಯರಾಗಿದ್ದಾರೆಂದು ತಿಳಿಸಿದರು.
ಸಾಹಿತಿ ಬಿ.ಎಲ್.ವೇಣು, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿ ಬಿ.ಜಿ.ಮಂಜುನಾಥ್, ಪ್ರಾಧ್ಯಾಪಕ ಕರಿಯಪ್ಪ ಮಾಳಿಗೆ, ನಗರಸಭೆ ಮಾಜಿ ಅಧ್ಯಕ್ಷ ಬಿ.ಕಾಂತರಾಜ್, ಕಾರ್ಮಿಕ ಇಲಾಖೆ ಅಧಿಕಾರಿ ಸಿ.ಇ.ಶ್ರೀನಿವಾಸಮೂರ್ತಿ, ಎಸ್.ಎಸ್.ನಿರಂಜನಮೂರ್ತಿ, ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಕೆ.ಹೆಚ್.ನಾಗರಾಜ್, ರೈತ ಮುಖಂಡ ಕೆ.ಪಿ.ಭೂತಯ್ಯ, ಸಂಸ್ಥೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ವಾಲ್ಮೀಕಿ ಜಯಂತಿಯಲ್ಲಿ ಭಾಗವಹಿಸಿದ್ದರು.

suddionenews

Recent Posts

ಮೈಕ್ರೋ ಫೈನಾನ್ಸ್ ಸುಗ್ರಿವಾಜ್ಞೆಗೆ ಅಂಕಿತ ಹಾಕದ ರಾಜ್ಯಪಾಲರು : ಸರ್ಕಾರಕ್ಕೆ ಹಿನ್ನಡೆ

ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…

1 hour ago

ಚಿತ್ರದುರ್ಗ APMC | ಶೇಂಗಾ, ಕಡಲೆ ಸೇರಿದಂತೆ ಇತರೆ ಉತ್ಪನ್ನಗಳ ಫೆಬ್ರವರಿ 07 ರ ಮಾರುಕಟ್ಟೆ ಧಾರಣೆ ವಿವಿರ ಇಲ್ಲಿದೆ…!

  ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…

2 hours ago

ಚಿತ್ರದುರ್ಗದ ಅಳಿಯ ಡಾಲಿ ಮೇಲೆ ದರ್ಶನ್ ಫ್ಯಾನ್ಸ್ ಗರಂ : ಫುಲ್ ಟ್ರೋಲ್..!

ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…

4 hours ago

ಮೂಡಾ ಅಪ್ಡೇಟ್: ಸಿಎಂ ಸಿದ್ದರಾಮಯ್ಯರಿಗೆ ರಿಲೀಫ್ ನೀಡಿದ ಹೈಕೋರ್ಟ್

ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…

5 hours ago

ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ

ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…

11 hours ago

ಫೆಬ್ರವರಿ 10ಕ್ಕೆ ಕರ್ನಾಟಕದಲ್ಲಿ ಕುಂಭಮೇಳ : ಹೇಗಿದೆ ತಯಾರಿ..?

  144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…

20 hours ago