ಬೆಂಗಳೂರಿನಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ KSRTC ಡಿಕ್ಕಿ : 7 ವರ್ಷದ ತುಮಕೂರಿನ ಬಾಲಕ ಸಾವು..!

suddionenews
1 Min Read

 

ಚಿಕ್ಕಮಗಳೂರು: ಕೆಎಸ್ಆರ್ಟಿಸಿ ಡಿವೈಡರ್ ಡಿಕ್ಕಿ ಹೊಡೆದ ಪರಿಣಾಮ ಬಸ್ಸಲ್ಲಿದ್ದ ಏಳು ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ತರೀಕೆರೆ ತಾಲೂಕಿನ ಬೆಟ್ಟದಹಳ್ಳಿ ಸಮೀಪ ನಡೆದಿದೆ. 12 ಪ್ರಯಾಣಿಕರಿಗೆ ಗಂಭೀರ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಅಪಘಾತದಲ್ಲಿ ಮೃತ ಪಟ್ಟ ಬಾಲಕ ಮೂಲತಃ ತುಮಕೂರಿನ ಗುಬ್ಬಿ ನಿವಾಸಿ ಎಂದು ಹೇಳಲಾಗುತ್ತಿದೆ. ಬಾಲಕನನ್ನು ಪ್ರಮೋದ್ ಎಂದು ಗುರುತಿಸಲಾಗಿದೆ. ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಬಾಲಕ ಮೃತ ಪಟ್ಟಿದ್ದಾನೆ. ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

ಡಿಕ್ಕಿ ಹೊಡೆದ ಬಸ್ ಬೆಂಗಳೂರಿನಿಂದ ಶಿವಮೊಗ್ಗ ಕಡೆಗೆ ಪ್ರಯಾಣಕರನ್ನು ಹೊತ್ತು ಹೊರಟಿತ್ತು. ಆದರೆ ಚಿಕ್ಕಮಗಳೂರು‌ ಸಮೀಪ ಇಂಥ ದುರ್ಘಟನೆ ನಡೆದು ಹೋಗಿದೆ. ಬಾಲಕ ಸಾವು ಎಲ್ಲರನ್ನು ದುಃಖಿತರನ್ನಾಗಿಸಿದೆ. ಈ ಸಂಬಂಧ ತರಿಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *